AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niharika Konidela: ಚಿರಂಜೀವಿ ಮನೆ ಮಗಳು ನಿಹಾರಿಕಾ ವಿಚ್ಛೇದನಕ್ಕೆ ಇದುವೇ ಕಾರಣ..

ನಿಹಾರಿಕಾ ಕೊನಿಡೆಲಾ ಹಾಗೂ ಚೈತನ್ಯ ಜೆವಿ ಪರಸ್ಪರ ಪ್ರೀತಿಸಿ ಮದುವೆ ಆದವರು. ಆದರೆ, ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು.

Niharika Konidela: ಚಿರಂಜೀವಿ ಮನೆ ಮಗಳು ನಿಹಾರಿಕಾ ವಿಚ್ಛೇದನಕ್ಕೆ ಇದುವೇ ಕಾರಣ..
ನಿಹಾರಿಕಾ-ಚೈತನ್ಯ
ರಾಜೇಶ್ ದುಗ್ಗುಮನೆ
|

Updated on:Jul 05, 2023 | 11:58 AM

Share

ಚಿರಂಜೀವಿ ಕುಟುಂಬದ ಮಗಳು ನಿಹಾರಿಕಾ ಕೊನಿಡೆಲಾ (Niharika Konidela) ಹಾಗೂ ವೆಂಕಟ್ ಚೈತನ್ಯ ಜೊನ್ನಲಗಡ್ಡ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ಕಳೆದ ತಿಂಗಳು ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪ್ರಕ್ರಿಯೆ ಮುಗಿದಿದ್ದು, ಇವರಿಗೆ ಡಿವೋರ್ಸ್ ಸಿಕ್ಕಿದೆ. ಇದು ಚಿರಂಜೀವಿ (Chiranjeevi) ಕುಟುಂಬದ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇವರ ವಿಚ್ಛೇದನಕ್ಕೆ ಕಾರಣ ಏನು ಎಂಬ ವಿಚಾರ ಈಗ ರಿವೀಲ್ ಆಗಿದೆ. ಇಬ್ಬರೂ ಹೊಂದಾಣಿಕೆ ಮಾಡಿಕೊಂಡು ಜೀವನ ನಡೆಸಬಹುದಿತ್ತು ಎಂಬ ಮಾತು ಕೇಳಿ ಬಂದಿದೆ.

ನಿಹಾರಿಕಾ ಕೊನಿಡೆಲಾ ಹಾಗೂ ಚೈತನ್ಯ ಜೆವಿ ಪರಸ್ಪರ ಪ್ರೀತಿಸಿ ಮದುವೆ ಆದವರು. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಇವರು 2020ರ ಡಿಸೆಂಬರ್​ನಲ್ಲಿ ಉದಯಪುರದಲ್ಲಿ ಅದ್ದೂರಿಯಾಗಿ ಮದುವೆ ಆದರು. ಅನೇಕ ಸೆಲೆಬ್ರಿಟಿಗಳು ಈ ಮದುವೆಯಲ್ಲಿ ಭಾಗಿ ಆದರು. ಮದುವೆ ಆಗಿ ಎರಡು ವರ್ಷ ಕಳೆಯುವುದರೊಳಗೆ ಇವರಿಗೆ ಸಂಸಾರ ಸಾಕಾಗಿದೆ. ಇಬ್ಬರೂ ಬೇರೆ ಆಗುವ ನಿರ್ಧಾರ ತೆಗೆದುಕೊಂಡರು.

ಇದಕ್ಕೆ ಕಾರಣ ಏನು ಎಂಬುದು ಅಧಿಕೃತ ಆಗಿಲ್ಲ. ಆದರೆ, ಕೆಲ ತೆಲುಗು ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ. ಮದುವೆಗೆ ಮೊದಲು ಯಾವ ರೀತಿಯಲ್ಲಿ ಹೊಂದಾಣಿಕೆ ಇತ್ತೋ ಆ ಹೊಂದಾಣಿಕೆ ಮದುವೆ ಬಳಿಕ ಇಲ್ಲದಾಗಿದೆ. ಹಲವು ವ್ಯತ್ಯಾಸಗಳು ಎದುರಾಗಿದ್ದರಿಂದ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಚಿರಂಜೀವಿ ತಮ್ಮ ನಾಗ ಬಾಬು ಅವರ ಮಗಳು ನಿಹಾರಿಕಾ. ಅವರ ಮದುವೆಯನ್ನು ಕುಟುಂಬದವರು ಅದ್ದೂರಿಯಾಗಿ ಮಾಡಿಕೊಟ್ಟಿದ್ದರು. ಆದರೆ, ಈಗ ಇಬ್ಬರೂ ಬೇರೆ ಆಗಿದ್ದಾರೆ. ಇದು ಅನೇಕರಿಗೆ ಬೇಸರ ಮೂಡಿಸಿದೆ. ನಿಹಾರಿಕಾ ಅವರು ಟಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಇವರು ಅನೇಕ ತೆಲುಗು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ.

ಇದನ್ನೂ ಓದಿ: ವಿಚ್ಛೇದನ ಪಡೆದ ನಿಹಾರಿಕಾ ಕೊನಿಡೆಲಾ-ಚೈತನ್ಯ ಜೊನ್ನಲಗಡ್ಡ; ಕಡೆಗೂ ನಿಜವಾಯ್ತು ಅನುಮಾನ

ನಿಹಾರಿಕಾ ಅವರು ನಟನೆಯ ಜೊತೆಗೆ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದರು. ವೆಬ್ ಸೀರಿಸ್ ಹಾಗೂ ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದರು. ಪಿಂಕ್ ಎಲಿಫೆಂಟ್ ಪಿಕ್ಚರ್ಸ್ ಎಂದು ಈ ಬ್ಯಾನರ್​ಗೆ ಅವರು ಹೆಸರಿಟ್ಟಿದ್ದಾರೆ. ಹೈದರಾಬಾದ್​ನಲ್ಲಿ ಅವರು ಅದ್ದೂರಿ ಕಚೇರಿ ಕೂಡ ಆರಂಭಿಸಿದ್ದಾರೆ.

ಚೈತನ್ಯ ಜೊತೆಗಿನ ಫೋಟೋ ಡಿಲೀಟ್ ಮಾಡಿದಾಗಲೇ ಅಭಿಮಾನಿಗಳಿಗೆ ಇವರ ವಿಚ್ಛೇದನದ ಬಗ್ಗೆ ಅನುಮಾನ ಶುರುವಾಗಿತ್ತು. ಇಬ್ಬರೂ ಬೇರೆ ಆಗುತ್ತಿರುವುದು ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಈ ಬಗ್ಗೆ ಈಗ ಅಧಿಕೃತ ಮಾಹಿತಿ ಹೊರಬಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Wed, 5 July 23

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್