AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್​ಗೆ ಇದುವೇ ಕಾರಣ? ಅಕ್ಕಿನೇನಿ ಕುಟುಂಬದಲ್ಲಿ ಅಸಲಿಗೆ ಆಗಿದ್ದೇನು?

ಸಮಂತಾ ಅವರು ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೆಬ್​ ಸೀರಿಸ್​ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದಿತ್ತು. ಇದರ ಜತೆಗೆ ಸಮಂತಾ ಅವರ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು.

ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್​ಗೆ ಇದುವೇ ಕಾರಣ? ಅಕ್ಕಿನೇನಿ ಕುಟುಂಬದಲ್ಲಿ ಅಸಲಿಗೆ ಆಗಿದ್ದೇನು?
ನಾಗ ಚೈತನ್ಯ-ಸಮಂತಾ
TV9 Web
| Edited By: |

Updated on:Oct 02, 2021 | 5:12 PM

Share

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ವಿಚ್ಛೇದನ ವಿಚಾರ ಅವರ ಅಭಿಮಾನಿಗಳಿಗೆ ನಿಜಕ್ಕೂ ಬೇಸರ ತರಿಸಿದೆ. ಇದನ್ನು ಹೇಗೆ ಸ್ವೀಕರಿಸಬೇಕು ಎಂಬುದು ಅಭಿಮಾನಿಗಳಿಗೆ ತಿಳಿಯುತ್ತಿಲ್ಲ. ಅನೇಕರು ಸಮಂತಾ ಅವರದ್ದೇ ತಪ್ಪು ಎಂದು ದೂರೋಕೆ ಪ್ರಾರಂಭಿಸಿದ್ದಾರೆ. ಸಮಂತಾ ತೆಗೆದುಕೊಂಡ ಆ ಒಂದು ನಿರ್ಧಾರದಿಂದ ವಿಚ್ಛೇದನ ವಿಚಾರ ಹುಟ್ಟಿಕೊಂಡಿತು ಎಂದು ದೂರುತ್ತಿದ್ದಾರೆ.

ಸಮಂತಾ ಅವರು ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೆಬ್​ ಸೀರಿಸ್​ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದಿತ್ತು. ಇದರ ಜತೆಗೆ ಸಮಂತಾ ಅವರ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಇವೆಲ್ಲದರ ಜತೆಗೆ ಸಮಂತಾ ಅವರ ಬೋಲ್ಡ್​ ದೃಶ್ಯಗಳು ಎಲ್ಲರ ಕಣ್ಣು ಕುಕ್ಕಿದ್ದವು. ಸಮಂತಾ ಈ ವೆಬ್​ ಸೀರಿಸ್​ನಲ್ಲಿ ಅನೇಕ ಇಂಟಿಮೇಟ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಕೆಲವು ದೃಶ್ಯಗಳು ಎಷ್ಟು ಮಾದಕವಾಗಿದ್ದವೆಂದರೆ ಸ್ವತಃ ನಿರ್ದೇಶಕರು ಈ ದೃಶ್ಯಗಳಿಗೆ ಕತ್ತರಿ ಹಾಕಿದ್ದರು. ಈ ವಿಚಾರವೇ ವಿಚ್ಛೇದನಕ್ಕೆ ಕಾರಣವಾಯ್ತು ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ.

ಮದುವೆ ಆದ ನಂತರದಲ್ಲಿ ಹೀರೋಯಿನ್​ಗಳು ಬೋಲ್ಡ್​ ಆಗಿ ತೆರೆಮೇಲೆ ಕಾಣಿಸಿಕೊಳ್ಳೋದು ತುಂಬಾನೇ ಅಪರೂಪ. ಕುಟುಂಬದ ಹಿರಿಯರೂ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ಆದರೆ, ಸಮಂತಾ ಇದಕ್ಕೆಲ್ಲ ಕೇರ್ ಮಾಡದೇ ಬೋಲ್ಡ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಸಮಂತಾ ವೃತ್ತಿ ಜೀವನದ ದೃಷ್ಟಿಯಲ್ಲಿ  ‘ದಿ ಫ್ಯಾಮಿಲಿ ಮ್ಯಾನ್​ 2’ ಬಹಳ ಮಹತ್ವ ಪಡೆದುಕೊಂಡಿದೆ. ಈ ಕಾರಣಕ್ಕೆ ಅವರು ವೆಬ್​ ಸೀರಿಸ್​ ಒಪ್ಪಿಕೊಂಡಿದ್ದರು. ಇದಕ್ಕೆ ಕುಟುಂಬದವರ ವಿರೋಧವಿದ್ದರೂ ಅವರು ತಲೆಕೆಡಿಸಿಕೊಂಡಿಲ್ಲ ಎನ್ನಲಾಗುತ್ತಿದೆ. ಈ ವಿಚಾರವೇ ಈಗ ಡಿವೋರ್ಸ್​ವರೆಗೆ ತಂದು ನಿಲ್ಲಿಸಿತು ಎನ್ನುತ್ತಿವೆ ಮೂಲಗಳು.

ನಾಗ ಚೈತನ್ಯ ಕೂಡ ಚಿತ್ರರಂಗದಲ್ಲೇ ಇರುವವರು. ನಾಗ ಚೈತನ್ಯ ಹಾಗೂ ಸಮಂತಾದು ಪ್ರೇಮ ವಿವಾಹ. ಆದರೆ, ಈ ರೀತಿಯ ಪಾತ್ರಗಳನ್ನು ಮಾಡೋಕೆ ಸಮಂತಾಗೆ ನಾಗ ಚೈತನ್ಯ ಕಡೆಯಿಂದ ಸರಿಯಾದ ಬೆಂಬಲ ಸಿಕ್ಕಿಲ್ಲ. ಈ ಕಾರಣಕ್ಕೆ ಸಮಂತಾ ವೃತ್ತಿ ಜೀವನವನ್ನು ಏಕಾಂಗಿಯಾಗಿ ಕಟ್ಟಿಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ದಂಪತಿ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: ‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’; ವಿಚ್ಛೇದನದ ದಿನವೇ ನಾಗ ಚೈತನ್ಯಗೆ ಹೊಸ ಸಲಹೆ 

Samantha Naga Chaitanya Divorce: ಸಮಂತಾ-ನಾಗ ಚೈತನ್ಯ ಡಿವೋರ್ಸ್​; ಸ್ಟಾರ್​ ಜೋಡಿಯ ದಾಂಪತ್ಯ ಅಂತ್ಯ

Published On - 5:00 pm, Sat, 2 October 21

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ