AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರಿದುಬಿತ್ತು ನಟಿಯ ಮದುವೆ; ಎಂಗೇಜ್​ಮೆಂಟ್​ ಆದ ನಂತರ ಗೊತ್ತಾಗಿತ್ತು ರಾಜಕಾರಣಿ ಕುಟುಂಬದ ಅಸಲಿಯತ್ತು?

ರಾಜಕಾರಣಿ ಭವ್ಯ ಭಿಷ್ಣೋಯ್​ ಜತೆಗೆ ಮೆಹ್ರೀನ್​ ಮದುವೆ ಆಗಬೇಕಿತ್ತು. ಈಗ ಇವರ ಮದುವೆ ಮುರಿದು ಬಿದ್ದಿರುವ ವಿಚಾರ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಮುರಿದುಬಿತ್ತು ನಟಿಯ ಮದುವೆ; ಎಂಗೇಜ್​ಮೆಂಟ್​ ಆದ ನಂತರ ಗೊತ್ತಾಗಿತ್ತು ರಾಜಕಾರಣಿ ಕುಟುಂಬದ ಅಸಲಿಯತ್ತು?
ಮುರಿದುಬಿತ್ತು ನಟಿಯ ಮದುವೆ; ಎಂಗೇಜ್​ಮೆಂಟ್​ ಆದ ನಂತರ ಗೊತ್ತಾಗಿತ್ತು ರಾಜಕಾರಣಿ ಕುಟುಂಬದ ಅಸಲಿಯತ್ತು
TV9 Web
| Edited By: |

Updated on:Jul 05, 2021 | 4:24 PM

Share

ಮದುವೆ ಹಾಗೂ ವಿಚ್ಛೇದನ ಸಿನಿಮಾ ರಂಗಕ್ಕೆ ಹೊಸದಲ್ಲ. ಮದುವೆ ಆದ ಹಲವು ವರ್ಷಗಳ ನಂತರದಲ್ಲಿ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಸಾಕಷ್ಟಿದ್ದಾರೆ. ಆಮಿರ್​ ಖಾನ್​ ಹಾಗೂ ಕಿರಣ್​ ರಾವ್​  ದಂಪತಿ ಇದಕ್ಕೆ ತಾಜಾ ಉದಾಹರಣೆ. ಇನ್ನು ನಿಶ್ಚಿತಾರ್ಥ ಮಾಡಿಕೊಂಡು ಹಸೆಮಣೆವರೆಗೆ ಹೋಗದ ಸಂಬಂಧವೂ ಹಲವಿದೆ. ಈಗ ಟಾಲಿವುಡ್​ ನಟಿಯೊಬ್ಬರು ಎಂಗೇಜ್​ಮೆಂಟ್​ ಆದ ನಂತರದಲ್ಲಿ ಮದುವೆ ಬೇಡ ಎನ್ನುವ ನಿರ್ಧಾರ ಕೈಗೊಂಡಿದ್ದಾರೆ.

ಹೌದು, ‘ಎಫ್​ 2: ಫನ್​ ಆ್ಯಂಡ್ ಫ್ರಸ್ಟ್ರೇಷನ್’ ಸಿನಿಮಾದಲ್ಲಿ ನಟಿಸಿದ ಮೆಹ್ರೀನ್​ ಕೆಲ ತಿಂಗಳ ಹಿಂದೆ ರಾಜಕಾರಣಿ ಭವ್ಯ ಭಿಷ್ಣೋಯ್ ಜತೆ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳದಿದ್ದರೆ ಇಬ್ಬರ ಮದುವೆ ಈಗಾಗಲೇ ಪೂರ್ಣಗೊಂಡಿರುತ್ತಿತ್ತು. ಆದರೆ, ಮದುವೆಯನ್ನು ಈ ಜೋಡಿ ಮುಂದೂಡಿತ್ತು. ಈಗ ಮದುವೆಯೇ ಆಗಬಾರದು ಎನ್ನುವ ನಿರ್ಧಾರಕ್ಕೆ ಮೆಹ್ರೀನ್​ ಬಂದಿದ್ದಾರೆ.

ರಾಜಕಾರಣಿ ಭವ್ಯ ಭಿಷ್ಣೋಯ್​ ಜತೆಗೆ ಮೆಹ್ರೀನ್​ ಮದುವೆ ಆಗಬೇಕಿತ್ತು. ಈಗ ಇವರ ಮದುವೆ ಮುರಿದು ಬಿದ್ದಿರುವ ವಿಚಾರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಆದರೆ, ಇದಕ್ಕೆ ಕಾರಣ ಏನು ಎನ್ನುವ ವಿಚಾರ ಬಹಿರಂಗಗೊಂಡಿರಲಿಲ್ಲ. ಈಗ ಇದಕ್ಕೆ ಉತ್ತರ ಸಿಕ್ಕಿದೆ.

ಮೆಹ್ರೀನ್​ ಮದುವೆ ನಂತರವೂ ಸಿನಿಮಾ ಇಂಡಸ್ಟ್ರಿಯಲ್ಲಿ ಮುಂದುವರಿಯಬೇಕು, ಸಿನಿಮಾಗಳಲ್ಲಿ ನಟಿಸಬೇಕು ಎನ್ನುವ ಕನಸು ಕಂಡಿದ್ದರು. ಬಿಷ್ಣೋಯ್​ ಕುಟುಂಬ ಆರಂಭದಲ್ಲಿ ಇದಕ್ಕೆ ಒಪ್ಪಿಗೆ ಸೂಚಿಸಿತ್ತು. ಎಂಗೇಜ್​ಮೆಂಟ್​ ಆದ ನಂತರದಲ್ಲಿ ಕುಟುಂಬದವರು ಉಲ್ಟಾ ಹೊಡೆದಿದ್ದರು. ಮದುವೆ ನಂತರದಲ್ಲಿ ಮನೆಯಲ್ಲೇ ಇರಬೇಕು ಎನ್ನುವ ಕಂಡೀಷನ್​ ಹಾಕಿದ್ದರು. ಮದುವೆಗಿಂತ ತಮ್ಮ ಕೆರಿಯರ್​ ಮುಖ್ಯ ಎನ್ನುವ ನಿರ್ಧಾರಕ್ಕೆ ಬಂದ ಮೆಹ್ರೀನ್​ ಎಂಗೇಜ್​ಮೆಂಟ್​ ಕ್ಯಾನ್ಸಲ್​ ಮಾಡಿಕೊಂಡಿದ್ದಾರೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.

2019ರಲ್ಲಿ ತೆರೆಗೆ ಬಂದ ‘ಎಫ್​ 2: ಫನ್​ ಆ್ಯಂಡ್ ಫ್ರಸ್ಟ್ರೇಷನ್’​ ಸಿನಿಮಾ ಹಿಟ್​ ಆಗಿತ್ತು. ಸದ್ಯ ಮೆಹ್ರೀನ್​ ಏಫ್​ 3 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಿಂದಿ, ತಮಿಳು ಹಾಗೂ ತೆಲುಗು ಚಿತ್ರಗಳಲ್ಲಿ ನಟಿಸಿದ ಖ್ಯಾತಿ ಮೆಹ್ರೀನ್​ ಅವರಿಗಿದೆ. ಈಗತಾನೇ ಗುರುತಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಚಿತ್ರರಂಗದಿಂದ ದೂರ ಸರಿಯುವುದು ಉತ್ತಮವಲ್ಲ ಎನ್ನುವುದು ಅವರ ಉದ್ದೇಶ.

ಇದನ್ನೂ ಓದಿ: ‘ವಿಚ್ಛೇದನವನ್ನು ಸಂಭ್ರಮಿಸಬೇಕು’; ಆಮಿರ್​-ಕಿರಣ್​ಗೆ ಕಿವಿಮಾತು ಹೇಳಿದ ಖ್ಯಾತ ನಿರ್ದೇಶಕ

Aamir Khan: ಆಮಿರ್​​ ಖಾನ್​-ಕಿರಣ್​ ರಾವ್​ ವಿಚ್ಛೇದನ; 15 ವರ್ಷದ ದಾಂಪತ್ಯ ಜೀವನ ಅಂತ್ಯ

Published On - 6:01 pm, Sun, 4 July 21

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!