AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೃಶ್ಯಗಳನ್ನು ಕದಿಯಲಾಗಿದೆ’ ಎಂದವರಿಗೆ ಸರಿಯಾಗಿ ತಿರುಗೇಟು ನೀಡಿದ ನಿರ್ದೇಶಕ ಅಟ್ಲಿ

‘ಜವಾನ್’ ಚಿತ್ರ ‘ತಾಯಿ ನಾಡು’, ‘ಅಣ್ಣಯ್ಯ’, ‘ಮಾಸ್ಟರ್’, ‘ರಮಣ’ ಸಿನಿಮಾಗಳಿಗೆ ಹೋಲಿಕೆ ಇದೆ ಎಂದು ಹೇಳಲಾಯಿತು. ಈ ಆರೋಪಗಳ ಬಗ್ಗೆ ಅವರು ಮಾತನಾಡಿದ್ದಾರೆ.

‘ದೃಶ್ಯಗಳನ್ನು ಕದಿಯಲಾಗಿದೆ’ ಎಂದವರಿಗೆ ಸರಿಯಾಗಿ ತಿರುಗೇಟು ನೀಡಿದ ನಿರ್ದೇಶಕ ಅಟ್ಲಿ
ಅಟ್ಲೀ
ರಾಜೇಶ್ ದುಗ್ಗುಮನೆ
|

Updated on:Nov 15, 2023 | 7:56 AM

Share

ನಿರ್ದೇಶಕ ಅಟ್ಲಿ (Atlee) ಅವರು ಸಾಲು ಸಾಲು ಹಿಟ್ ಸಿನಿಮಾ ನೀಡಿದ್ದಾರೆ. ಬಾಲಿವುಡ್​ನಲ್ಲಿ ‘ಜವಾನ್’ ಸಿನಿಮಾ ಮಾಡಿ ದೊಡ್ಡ ಗೆಲುವು ಕಂಡಿದ್ದಾರೆ. ಇವರ ಸಿನಿಮಾಗಳ ಹಲವು ದೃಶ್ಯಗಳಿಗೆ ಚೌರ್ಯದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ನಿರ್ದೇಶಕ ಅಟ್ಲಿ ಅವರು ಸರಿಯಾಗಿ ತಿರುಗೇಟು ಕೊಟ್ಟಿದ್ದಾರೆ. ‘ಜವಾನ್’ ಸಿನಿಮಾ (Jawan Movie) ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಬೆನ್ನಲ್ಲೇ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಅಟ್ಲಿ ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ರಾಜ ರಾಣಿ’. ಮಣಿರತ್ನಂ ನಿರ್ದೇನದ ‘ಮೌನ ರಾಗಂ’ (1986) ಚಿತ್ರದ ರಿಮೇಕ್ ಇದು ಎಂದು ಅನೇಕರು ಟೀಕೆ ಮಾಡಿದರು. ನಂತರ ಬಂದ ‘ತೇರಿ’ ಸಿನಿಮಾ ‘ಭಾಷಾ’ ಮೊದಲಾದ ಚಿತ್ರಗಳಿಗೆ ಹೋಲಿಕೆ ಇದೆ ಎನ್ನಲಾಯಿತು. ‘ಮೆರ್ಸಲ್’ ಹಾಗೂ ‘ಬಿಗಿಲ್’ ಸಿನಿಮಾಗಳು ಇದೇ ರೀತಿಯ ಟೀಕೆ ಎದುರಿಸಿದವು. ‘ಜವಾನ್’ ಚಿತ್ರ ‘ತಾಯಿ ನಾಡು’, ‘ಅಣ್ಣಯ್ಯ’, ‘ಮಾಸ್ಟರ್’, ‘ರಮಣ’ ಸಿನಿಮಾಗಳಿಗೆ ಹೋಲಿಕೆ ಇದೆ ಎಂದು ಹೇಳಲಾಯಿತು. ಈ ಆರೋಪಗಳ ಬಗ್ಗೆ ಅವರು ಮಾತನಾಡಿದ್ದಾರೆ.

‘ನಾನು ರಾಜ ರಾಣಿ ಚಿತ್ರ ಮಾಡುವಾಗಲೇ ಬೇರೆ ಆಗುತ್ತಿರುವ ಕುಟುಂಬಗಳ ಬಗ್ಗೆ ಸಿನಿಮಾ ಮಾಡಬೇಕೆಂದು ಬಯಸಿದ್ದೆ. ಆಗಲೇ ‘ಮೌನ ರಾಗಂ’ ಸಿನಿಮಾ ಬಂದಿತ್ತು. ನನ್ನ ಸಿನಿಮಾ ಕಥೆಗೆ ಹೋಲಿಕೆ ಇತ್ತು. ಹೀಗಾಗಿ, ನಾನು ಮಾಡಿದ ಕಥೆ ಕೈಬಿಟ್ಟೆ. ನನ್ನ ಸ್ಕ್ರಿಪ್ಟ್‌ಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನದನ್ನು ಇತರ ಸಿನಿಮಾಗಳಿಗೆ ಹೋಲಿಸಿ ಯಾರಾದರೂ ಎರಡು ಸೆಕೆಂಡ್​​ಗಳಲ್ಲಿ ಕಾಮೆಂಟ್ ಮಾಡಿದರೆ ನನ್ನ ಶ್ರಮ, ಪ್ರಯತ್ನ ವ್ಯರ್ಥ ಎಂದು ನಾನು ಎಂದಿಗೂ ಭಾವಿಸುವುದಿಲ್ಲ. ಇದು ಅವರ ಅಭಿಪ್ರಾಯ’ ಎಂದಿದ್ದಾರೆ ಅಟ್ಲಿ.

ಇದನ್ನೂ ಓದಿ: ‘ಜವಾನ್’ ಚಿತ್ರದಿಂದ ಬದಲಾಯ್ತು ಸಾನ್ಯಾ ಮಲ್ಹೋತ್ರಾ ವೃತ್ತಿ ಬದುಕು; ಅಟ್ಲಿ ಸಿನಿಮಾದಲ್ಲಿ ಚಾನ್ಸ್

‘ನೀವು ಹೊಲಿಕೆಯುಳ್ಳ ಕಥೆ ಮಾಡಬಹುದು. ಹಾಗಂದ ಮಾತ್ರಕ್ಕೆ ಅದು ಕದ್ದ ಕಥೆ ಎಂದು ಅರ್ಥ ಅಲ್ಲ. ಎಲ್ಲಾ ವಿಚಾರ ಸ್ಫೂರ್ತಿಯಾಗಬಹುದು. ನಾನು ಎಂಜಿಆರ್ ಹಾಡುಗಳಿಂದ ಸ್ಫೂರ್ತಿ ಪಡೆದಿದ್ದೇನೆ. ನಾನು ರಿಸ್ಕ್ ತೆಗೆದುಕೊಳ್ಳುತ್ತೇನೆ. 30 ವರ್ಷಗಳಲ್ಲಿ ಶಾರುಖ್ ಖಾನ್ ಅವರಿಗೆ ನನ್ನ ಬಳಿ ಇದ್ದ ರೀತಿಯ ಕಥೆಯನ್ನು ಯಾರೂ ಹೇಳಿರಲಿಲ್ಲ. ಸಿನಿಮಾ ಜಗತ್ತಿನಲ್ಲಿ ನಾನು ಮಾತ್ರ ಇಂತಹ ಟೀಕೆಗಳನ್ನು ಎದುರಿಸುತ್ತೇನೆ ಎಂಬುದು ನಿಮ್ಮ ಭಾವನೆಯೇ? ಅನೇಕ ಶ್ರೇಷ್ಠ ನಿರ್ದೇಶಕರು ಇದನ್ನು ಎದುರಿಸಿದ್ದಾರೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:01 am, Wed, 15 November 23

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ