AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೃಶ್ಯಗಳನ್ನು ಕದಿಯಲಾಗಿದೆ’ ಎಂದವರಿಗೆ ಸರಿಯಾಗಿ ತಿರುಗೇಟು ನೀಡಿದ ನಿರ್ದೇಶಕ ಅಟ್ಲಿ

‘ಜವಾನ್’ ಚಿತ್ರ ‘ತಾಯಿ ನಾಡು’, ‘ಅಣ್ಣಯ್ಯ’, ‘ಮಾಸ್ಟರ್’, ‘ರಮಣ’ ಸಿನಿಮಾಗಳಿಗೆ ಹೋಲಿಕೆ ಇದೆ ಎಂದು ಹೇಳಲಾಯಿತು. ಈ ಆರೋಪಗಳ ಬಗ್ಗೆ ಅವರು ಮಾತನಾಡಿದ್ದಾರೆ.

‘ದೃಶ್ಯಗಳನ್ನು ಕದಿಯಲಾಗಿದೆ’ ಎಂದವರಿಗೆ ಸರಿಯಾಗಿ ತಿರುಗೇಟು ನೀಡಿದ ನಿರ್ದೇಶಕ ಅಟ್ಲಿ
ಅಟ್ಲೀ
Follow us
ರಾಜೇಶ್ ದುಗ್ಗುಮನೆ
|

Updated on:Nov 15, 2023 | 7:56 AM

ನಿರ್ದೇಶಕ ಅಟ್ಲಿ (Atlee) ಅವರು ಸಾಲು ಸಾಲು ಹಿಟ್ ಸಿನಿಮಾ ನೀಡಿದ್ದಾರೆ. ಬಾಲಿವುಡ್​ನಲ್ಲಿ ‘ಜವಾನ್’ ಸಿನಿಮಾ ಮಾಡಿ ದೊಡ್ಡ ಗೆಲುವು ಕಂಡಿದ್ದಾರೆ. ಇವರ ಸಿನಿಮಾಗಳ ಹಲವು ದೃಶ್ಯಗಳಿಗೆ ಚೌರ್ಯದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ನಿರ್ದೇಶಕ ಅಟ್ಲಿ ಅವರು ಸರಿಯಾಗಿ ತಿರುಗೇಟು ಕೊಟ್ಟಿದ್ದಾರೆ. ‘ಜವಾನ್’ ಸಿನಿಮಾ (Jawan Movie) ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಬೆನ್ನಲ್ಲೇ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಅಟ್ಲಿ ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ರಾಜ ರಾಣಿ’. ಮಣಿರತ್ನಂ ನಿರ್ದೇನದ ‘ಮೌನ ರಾಗಂ’ (1986) ಚಿತ್ರದ ರಿಮೇಕ್ ಇದು ಎಂದು ಅನೇಕರು ಟೀಕೆ ಮಾಡಿದರು. ನಂತರ ಬಂದ ‘ತೇರಿ’ ಸಿನಿಮಾ ‘ಭಾಷಾ’ ಮೊದಲಾದ ಚಿತ್ರಗಳಿಗೆ ಹೋಲಿಕೆ ಇದೆ ಎನ್ನಲಾಯಿತು. ‘ಮೆರ್ಸಲ್’ ಹಾಗೂ ‘ಬಿಗಿಲ್’ ಸಿನಿಮಾಗಳು ಇದೇ ರೀತಿಯ ಟೀಕೆ ಎದುರಿಸಿದವು. ‘ಜವಾನ್’ ಚಿತ್ರ ‘ತಾಯಿ ನಾಡು’, ‘ಅಣ್ಣಯ್ಯ’, ‘ಮಾಸ್ಟರ್’, ‘ರಮಣ’ ಸಿನಿಮಾಗಳಿಗೆ ಹೋಲಿಕೆ ಇದೆ ಎಂದು ಹೇಳಲಾಯಿತು. ಈ ಆರೋಪಗಳ ಬಗ್ಗೆ ಅವರು ಮಾತನಾಡಿದ್ದಾರೆ.

‘ನಾನು ರಾಜ ರಾಣಿ ಚಿತ್ರ ಮಾಡುವಾಗಲೇ ಬೇರೆ ಆಗುತ್ತಿರುವ ಕುಟುಂಬಗಳ ಬಗ್ಗೆ ಸಿನಿಮಾ ಮಾಡಬೇಕೆಂದು ಬಯಸಿದ್ದೆ. ಆಗಲೇ ‘ಮೌನ ರಾಗಂ’ ಸಿನಿಮಾ ಬಂದಿತ್ತು. ನನ್ನ ಸಿನಿಮಾ ಕಥೆಗೆ ಹೋಲಿಕೆ ಇತ್ತು. ಹೀಗಾಗಿ, ನಾನು ಮಾಡಿದ ಕಥೆ ಕೈಬಿಟ್ಟೆ. ನನ್ನ ಸ್ಕ್ರಿಪ್ಟ್‌ಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನದನ್ನು ಇತರ ಸಿನಿಮಾಗಳಿಗೆ ಹೋಲಿಸಿ ಯಾರಾದರೂ ಎರಡು ಸೆಕೆಂಡ್​​ಗಳಲ್ಲಿ ಕಾಮೆಂಟ್ ಮಾಡಿದರೆ ನನ್ನ ಶ್ರಮ, ಪ್ರಯತ್ನ ವ್ಯರ್ಥ ಎಂದು ನಾನು ಎಂದಿಗೂ ಭಾವಿಸುವುದಿಲ್ಲ. ಇದು ಅವರ ಅಭಿಪ್ರಾಯ’ ಎಂದಿದ್ದಾರೆ ಅಟ್ಲಿ.

ಇದನ್ನೂ ಓದಿ: ‘ಜವಾನ್’ ಚಿತ್ರದಿಂದ ಬದಲಾಯ್ತು ಸಾನ್ಯಾ ಮಲ್ಹೋತ್ರಾ ವೃತ್ತಿ ಬದುಕು; ಅಟ್ಲಿ ಸಿನಿಮಾದಲ್ಲಿ ಚಾನ್ಸ್

‘ನೀವು ಹೊಲಿಕೆಯುಳ್ಳ ಕಥೆ ಮಾಡಬಹುದು. ಹಾಗಂದ ಮಾತ್ರಕ್ಕೆ ಅದು ಕದ್ದ ಕಥೆ ಎಂದು ಅರ್ಥ ಅಲ್ಲ. ಎಲ್ಲಾ ವಿಚಾರ ಸ್ಫೂರ್ತಿಯಾಗಬಹುದು. ನಾನು ಎಂಜಿಆರ್ ಹಾಡುಗಳಿಂದ ಸ್ಫೂರ್ತಿ ಪಡೆದಿದ್ದೇನೆ. ನಾನು ರಿಸ್ಕ್ ತೆಗೆದುಕೊಳ್ಳುತ್ತೇನೆ. 30 ವರ್ಷಗಳಲ್ಲಿ ಶಾರುಖ್ ಖಾನ್ ಅವರಿಗೆ ನನ್ನ ಬಳಿ ಇದ್ದ ರೀತಿಯ ಕಥೆಯನ್ನು ಯಾರೂ ಹೇಳಿರಲಿಲ್ಲ. ಸಿನಿಮಾ ಜಗತ್ತಿನಲ್ಲಿ ನಾನು ಮಾತ್ರ ಇಂತಹ ಟೀಕೆಗಳನ್ನು ಎದುರಿಸುತ್ತೇನೆ ಎಂಬುದು ನಿಮ್ಮ ಭಾವನೆಯೇ? ಅನೇಕ ಶ್ರೇಷ್ಠ ನಿರ್ದೇಶಕರು ಇದನ್ನು ಎದುರಿಸಿದ್ದಾರೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:01 am, Wed, 15 November 23

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ