Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೃಶ್ಯಗಳನ್ನು ಕದಿಯಲಾಗಿದೆ’ ಎಂದವರಿಗೆ ಸರಿಯಾಗಿ ತಿರುಗೇಟು ನೀಡಿದ ನಿರ್ದೇಶಕ ಅಟ್ಲಿ

‘ಜವಾನ್’ ಚಿತ್ರ ‘ತಾಯಿ ನಾಡು’, ‘ಅಣ್ಣಯ್ಯ’, ‘ಮಾಸ್ಟರ್’, ‘ರಮಣ’ ಸಿನಿಮಾಗಳಿಗೆ ಹೋಲಿಕೆ ಇದೆ ಎಂದು ಹೇಳಲಾಯಿತು. ಈ ಆರೋಪಗಳ ಬಗ್ಗೆ ಅವರು ಮಾತನಾಡಿದ್ದಾರೆ.

‘ದೃಶ್ಯಗಳನ್ನು ಕದಿಯಲಾಗಿದೆ’ ಎಂದವರಿಗೆ ಸರಿಯಾಗಿ ತಿರುಗೇಟು ನೀಡಿದ ನಿರ್ದೇಶಕ ಅಟ್ಲಿ
ಅಟ್ಲೀ
Follow us
ರಾಜೇಶ್ ದುಗ್ಗುಮನೆ
|

Updated on:Nov 15, 2023 | 7:56 AM

ನಿರ್ದೇಶಕ ಅಟ್ಲಿ (Atlee) ಅವರು ಸಾಲು ಸಾಲು ಹಿಟ್ ಸಿನಿಮಾ ನೀಡಿದ್ದಾರೆ. ಬಾಲಿವುಡ್​ನಲ್ಲಿ ‘ಜವಾನ್’ ಸಿನಿಮಾ ಮಾಡಿ ದೊಡ್ಡ ಗೆಲುವು ಕಂಡಿದ್ದಾರೆ. ಇವರ ಸಿನಿಮಾಗಳ ಹಲವು ದೃಶ್ಯಗಳಿಗೆ ಚೌರ್ಯದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ನಿರ್ದೇಶಕ ಅಟ್ಲಿ ಅವರು ಸರಿಯಾಗಿ ತಿರುಗೇಟು ಕೊಟ್ಟಿದ್ದಾರೆ. ‘ಜವಾನ್’ ಸಿನಿಮಾ (Jawan Movie) ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಬೆನ್ನಲ್ಲೇ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಅಟ್ಲಿ ಮೊದಲು ನಿರ್ದೇಶನ ಮಾಡಿದ ಸಿನಿಮಾ ‘ರಾಜ ರಾಣಿ’. ಮಣಿರತ್ನಂ ನಿರ್ದೇನದ ‘ಮೌನ ರಾಗಂ’ (1986) ಚಿತ್ರದ ರಿಮೇಕ್ ಇದು ಎಂದು ಅನೇಕರು ಟೀಕೆ ಮಾಡಿದರು. ನಂತರ ಬಂದ ‘ತೇರಿ’ ಸಿನಿಮಾ ‘ಭಾಷಾ’ ಮೊದಲಾದ ಚಿತ್ರಗಳಿಗೆ ಹೋಲಿಕೆ ಇದೆ ಎನ್ನಲಾಯಿತು. ‘ಮೆರ್ಸಲ್’ ಹಾಗೂ ‘ಬಿಗಿಲ್’ ಸಿನಿಮಾಗಳು ಇದೇ ರೀತಿಯ ಟೀಕೆ ಎದುರಿಸಿದವು. ‘ಜವಾನ್’ ಚಿತ್ರ ‘ತಾಯಿ ನಾಡು’, ‘ಅಣ್ಣಯ್ಯ’, ‘ಮಾಸ್ಟರ್’, ‘ರಮಣ’ ಸಿನಿಮಾಗಳಿಗೆ ಹೋಲಿಕೆ ಇದೆ ಎಂದು ಹೇಳಲಾಯಿತು. ಈ ಆರೋಪಗಳ ಬಗ್ಗೆ ಅವರು ಮಾತನಾಡಿದ್ದಾರೆ.

‘ನಾನು ರಾಜ ರಾಣಿ ಚಿತ್ರ ಮಾಡುವಾಗಲೇ ಬೇರೆ ಆಗುತ್ತಿರುವ ಕುಟುಂಬಗಳ ಬಗ್ಗೆ ಸಿನಿಮಾ ಮಾಡಬೇಕೆಂದು ಬಯಸಿದ್ದೆ. ಆಗಲೇ ‘ಮೌನ ರಾಗಂ’ ಸಿನಿಮಾ ಬಂದಿತ್ತು. ನನ್ನ ಸಿನಿಮಾ ಕಥೆಗೆ ಹೋಲಿಕೆ ಇತ್ತು. ಹೀಗಾಗಿ, ನಾನು ಮಾಡಿದ ಕಥೆ ಕೈಬಿಟ್ಟೆ. ನನ್ನ ಸ್ಕ್ರಿಪ್ಟ್‌ಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನದನ್ನು ಇತರ ಸಿನಿಮಾಗಳಿಗೆ ಹೋಲಿಸಿ ಯಾರಾದರೂ ಎರಡು ಸೆಕೆಂಡ್​​ಗಳಲ್ಲಿ ಕಾಮೆಂಟ್ ಮಾಡಿದರೆ ನನ್ನ ಶ್ರಮ, ಪ್ರಯತ್ನ ವ್ಯರ್ಥ ಎಂದು ನಾನು ಎಂದಿಗೂ ಭಾವಿಸುವುದಿಲ್ಲ. ಇದು ಅವರ ಅಭಿಪ್ರಾಯ’ ಎಂದಿದ್ದಾರೆ ಅಟ್ಲಿ.

ಇದನ್ನೂ ಓದಿ: ‘ಜವಾನ್’ ಚಿತ್ರದಿಂದ ಬದಲಾಯ್ತು ಸಾನ್ಯಾ ಮಲ್ಹೋತ್ರಾ ವೃತ್ತಿ ಬದುಕು; ಅಟ್ಲಿ ಸಿನಿಮಾದಲ್ಲಿ ಚಾನ್ಸ್

‘ನೀವು ಹೊಲಿಕೆಯುಳ್ಳ ಕಥೆ ಮಾಡಬಹುದು. ಹಾಗಂದ ಮಾತ್ರಕ್ಕೆ ಅದು ಕದ್ದ ಕಥೆ ಎಂದು ಅರ್ಥ ಅಲ್ಲ. ಎಲ್ಲಾ ವಿಚಾರ ಸ್ಫೂರ್ತಿಯಾಗಬಹುದು. ನಾನು ಎಂಜಿಆರ್ ಹಾಡುಗಳಿಂದ ಸ್ಫೂರ್ತಿ ಪಡೆದಿದ್ದೇನೆ. ನಾನು ರಿಸ್ಕ್ ತೆಗೆದುಕೊಳ್ಳುತ್ತೇನೆ. 30 ವರ್ಷಗಳಲ್ಲಿ ಶಾರುಖ್ ಖಾನ್ ಅವರಿಗೆ ನನ್ನ ಬಳಿ ಇದ್ದ ರೀತಿಯ ಕಥೆಯನ್ನು ಯಾರೂ ಹೇಳಿರಲಿಲ್ಲ. ಸಿನಿಮಾ ಜಗತ್ತಿನಲ್ಲಿ ನಾನು ಮಾತ್ರ ಇಂತಹ ಟೀಕೆಗಳನ್ನು ಎದುರಿಸುತ್ತೇನೆ ಎಂಬುದು ನಿಮ್ಮ ಭಾವನೆಯೇ? ಅನೇಕ ಶ್ರೇಷ್ಠ ನಿರ್ದೇಶಕರು ಇದನ್ನು ಎದುರಿಸಿದ್ದಾರೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:01 am, Wed, 15 November 23

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್