AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mammootty: ‘ನನಗೆ ಮಲಯಾಳಂ ಚಿತ್ರರಂಗ ಸಾಕು’; ರಜನಿಕಾಂತ್ ಜೊತೆ ನಟಿಸ್ತೀರಾ ಎಂಬ ಪ್ರಶ್ನೆಗೆ ಮಮ್ಮೂಟಿ ಉತ್ತರ

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು, ಲೋಕೇಶ್ ಕನಗರಾಜ್ ಅವರು ‘ಲಿಯೋ’ ಚಿತ್ರದಿಂದ ಸೋಲು ಅನುಭವಿಸಿದ್ದಾರೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ.

Mammootty: ‘ನನಗೆ ಮಲಯಾಳಂ ಚಿತ್ರರಂಗ ಸಾಕು’; ರಜನಿಕಾಂತ್ ಜೊತೆ ನಟಿಸ್ತೀರಾ ಎಂಬ ಪ್ರಶ್ನೆಗೆ ಮಮ್ಮೂಟಿ ಉತ್ತರ
ಥಲೈವರ್ ಚಿತ್ರದಲ್ಲಿ ಮಮ್ಮೂಟಿ?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 22, 2023 | 4:47 PM

ನಟ ರಜನಿಕಾಂತ್ ಹಾಗೂ ಲೋಕೇಶ್ ಕನಗರಾಜ್ (Lokesh Kanagaraj) ಅವರು ‘ತಲೈವರ್ 171’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಸಿನಿಮಾ ಸೆಟ್ಟೇರೋದು ಮುಂದಿನ ವರ್ಷ ಮಾರ್ಚ್​ ತಿಂಗಳಲ್ಲಿ ಎನ್ನಲಾಗಿದೆ. ಈ ಸಿನಿಮಾಗೆ ಸದ್ಯ ತಯಾರಿಗಳು ಭರದಿಂದ ಸಾಗಿವೆ. ಇದರ ಜೊತೆಗೆ ಸಿನಿಮಾ ಬಗ್ಗೆ ಅನೇಕ ವದಂತಿಗಳು ಹುಟ್ಟಿಕೊಳ್ಳುತ್ತಿವೆ. ಈ ಚಿತ್ರದಲ್ಲಿ ಮಲಯಾಳಂನ ಖ್ಯಾತ ನಟ ಮಮ್ಮೂಟಿ ಕೂಡ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಈ ಪ್ರಶ್ನೆಗೆ ಅವರ ಕಡೆಯಿಂದ ನೇರ ಉತ್ತರ ಸಿಕ್ಕಿದೆ.

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು, ಲೋಕೇಶ್ ಕನಗರಾಜ್ ಅವರು ‘ಲಿಯೋ’ ಚಿತ್ರದಿಂದ ಸೋಲು ಅನುಭವಿಸಿದ್ದಾರೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ. ಅವರಿಗೆ ದೊಡ್ಡ ಗೆಲುವಿನ ಅವಶ್ಯಕತೆ ಇದೆ. ತಾತ್ಕಾಲಿಕವಾಗಿ ‘ತಲೈವರ್ 171’ ರಂದು ನಾಮಕರಣ ಮಾಡಿರುವ ಸಿನಿಮಾ ಬಗ್ಗೆ ಜನರಲ್ಲಿ ಹೆಚ್ಚಿನ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಮ್ಮೂಟಿ ನಟಿಸಲಿದ್ದಾರೆ ಎನ್ನಲಾಗಿತ್ತು.

‘ಕಾದಲ್​ ದಿ ಕೋರ್’ ಸಿನಿಮಾ ಪ್ರಮೋಷ್​ನಲ್ಲಿ ಮಮ್ಮೂಟಿ ಹಾಗೂ ಜ್ಯೋತಿಕಾ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ರಜನಿಕಾಂತ್ 171ನೇ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗಿದೆ. ‘ಈ ಸುದ್ದಿ ನಿಜವಲ್ಲ’ ಎಂದು ಅವರು ಹೇಳಿದ್ದಾರೆ. ‘ನೀವು ಲೋಕೇಶ್ ಕನಗರಾಜ್ ಅವರ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗವಾಗುತ್ತೀರಾ’ ಎಂದು ಪ್ರಶ್ನೆ ಮಾಡಲಾಗಿದೆ. ‘ನನಗೆ ಮಲಯಾಳಂ ಚಿತ್ರರಂಗ ಸಾಕು. ನನಗೆ ಅವರ ಪರಿಚಯ ಇಲ್ಲ. ಅವರು ಕರೆ ಮಾಡಲಿ ಆ ಬಳಿಕ ನೋಡೋಣ’ ಎಂದಿದ್ದಾರೆ ಮಮ್ಮೂಟಿ. ಈ ಮೂಲಕ ಎಲ್ಲಾ ವದಂತಿಗಳಿಗೆ ಅವರು ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ‘ಈ ಸಲ ಕಪ್​ ನಮ್ದೇ’ ಎಂದ ರಜನಿಕಾಂತ್; ವರ್ಲ್ಡ್​ ಕಪ್​ ಫೈನಲ್​ ಬಗ್ಗೆ ತಲೈವಾ ಭವಿಷ್ಯವಾಣಿ

ರಜನಿಕಾಂತ್ ಅವರ ಈ ಚಿತ್ರಕ್ಕೆ ಯಾವ ಶೀರ್ಷಿಕೆ ಇಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಸದ್ಯಕ್ಕಂತೂ ಯಾವುದೇ ಮಾಹಿತಿ ಸಿಗೋದು ಅನುಮಾನ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:53 pm, Wed, 22 November 23

ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ