AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mammootty: ‘ನನಗೆ ಮಲಯಾಳಂ ಚಿತ್ರರಂಗ ಸಾಕು’; ರಜನಿಕಾಂತ್ ಜೊತೆ ನಟಿಸ್ತೀರಾ ಎಂಬ ಪ್ರಶ್ನೆಗೆ ಮಮ್ಮೂಟಿ ಉತ್ತರ

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು, ಲೋಕೇಶ್ ಕನಗರಾಜ್ ಅವರು ‘ಲಿಯೋ’ ಚಿತ್ರದಿಂದ ಸೋಲು ಅನುಭವಿಸಿದ್ದಾರೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ.

Mammootty: ‘ನನಗೆ ಮಲಯಾಳಂ ಚಿತ್ರರಂಗ ಸಾಕು’; ರಜನಿಕಾಂತ್ ಜೊತೆ ನಟಿಸ್ತೀರಾ ಎಂಬ ಪ್ರಶ್ನೆಗೆ ಮಮ್ಮೂಟಿ ಉತ್ತರ
ಥಲೈವರ್ ಚಿತ್ರದಲ್ಲಿ ಮಮ್ಮೂಟಿ?
TV9 Web
| Edited By: |

Updated on:Nov 22, 2023 | 4:47 PM

Share

ನಟ ರಜನಿಕಾಂತ್ ಹಾಗೂ ಲೋಕೇಶ್ ಕನಗರಾಜ್ (Lokesh Kanagaraj) ಅವರು ‘ತಲೈವರ್ 171’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಸಿನಿಮಾ ಸೆಟ್ಟೇರೋದು ಮುಂದಿನ ವರ್ಷ ಮಾರ್ಚ್​ ತಿಂಗಳಲ್ಲಿ ಎನ್ನಲಾಗಿದೆ. ಈ ಸಿನಿಮಾಗೆ ಸದ್ಯ ತಯಾರಿಗಳು ಭರದಿಂದ ಸಾಗಿವೆ. ಇದರ ಜೊತೆಗೆ ಸಿನಿಮಾ ಬಗ್ಗೆ ಅನೇಕ ವದಂತಿಗಳು ಹುಟ್ಟಿಕೊಳ್ಳುತ್ತಿವೆ. ಈ ಚಿತ್ರದಲ್ಲಿ ಮಲಯಾಳಂನ ಖ್ಯಾತ ನಟ ಮಮ್ಮೂಟಿ ಕೂಡ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಈ ಪ್ರಶ್ನೆಗೆ ಅವರ ಕಡೆಯಿಂದ ನೇರ ಉತ್ತರ ಸಿಕ್ಕಿದೆ.

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು, ಲೋಕೇಶ್ ಕನಗರಾಜ್ ಅವರು ‘ಲಿಯೋ’ ಚಿತ್ರದಿಂದ ಸೋಲು ಅನುಭವಿಸಿದ್ದಾರೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ. ಅವರಿಗೆ ದೊಡ್ಡ ಗೆಲುವಿನ ಅವಶ್ಯಕತೆ ಇದೆ. ತಾತ್ಕಾಲಿಕವಾಗಿ ‘ತಲೈವರ್ 171’ ರಂದು ನಾಮಕರಣ ಮಾಡಿರುವ ಸಿನಿಮಾ ಬಗ್ಗೆ ಜನರಲ್ಲಿ ಹೆಚ್ಚಿನ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಮ್ಮೂಟಿ ನಟಿಸಲಿದ್ದಾರೆ ಎನ್ನಲಾಗಿತ್ತು.

‘ಕಾದಲ್​ ದಿ ಕೋರ್’ ಸಿನಿಮಾ ಪ್ರಮೋಷ್​ನಲ್ಲಿ ಮಮ್ಮೂಟಿ ಹಾಗೂ ಜ್ಯೋತಿಕಾ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ರಜನಿಕಾಂತ್ 171ನೇ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗಿದೆ. ‘ಈ ಸುದ್ದಿ ನಿಜವಲ್ಲ’ ಎಂದು ಅವರು ಹೇಳಿದ್ದಾರೆ. ‘ನೀವು ಲೋಕೇಶ್ ಕನಗರಾಜ್ ಅವರ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗವಾಗುತ್ತೀರಾ’ ಎಂದು ಪ್ರಶ್ನೆ ಮಾಡಲಾಗಿದೆ. ‘ನನಗೆ ಮಲಯಾಳಂ ಚಿತ್ರರಂಗ ಸಾಕು. ನನಗೆ ಅವರ ಪರಿಚಯ ಇಲ್ಲ. ಅವರು ಕರೆ ಮಾಡಲಿ ಆ ಬಳಿಕ ನೋಡೋಣ’ ಎಂದಿದ್ದಾರೆ ಮಮ್ಮೂಟಿ. ಈ ಮೂಲಕ ಎಲ್ಲಾ ವದಂತಿಗಳಿಗೆ ಅವರು ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ‘ಈ ಸಲ ಕಪ್​ ನಮ್ದೇ’ ಎಂದ ರಜನಿಕಾಂತ್; ವರ್ಲ್ಡ್​ ಕಪ್​ ಫೈನಲ್​ ಬಗ್ಗೆ ತಲೈವಾ ಭವಿಷ್ಯವಾಣಿ

ರಜನಿಕಾಂತ್ ಅವರ ಈ ಚಿತ್ರಕ್ಕೆ ಯಾವ ಶೀರ್ಷಿಕೆ ಇಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಸದ್ಯಕ್ಕಂತೂ ಯಾವುದೇ ಮಾಹಿತಿ ಸಿಗೋದು ಅನುಮಾನ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:53 pm, Wed, 22 November 23

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್