Mammootty: ‘ನನಗೆ ಮಲಯಾಳಂ ಚಿತ್ರರಂಗ ಸಾಕು’; ರಜನಿಕಾಂತ್ ಜೊತೆ ನಟಿಸ್ತೀರಾ ಎಂಬ ಪ್ರಶ್ನೆಗೆ ಮಮ್ಮೂಟಿ ಉತ್ತರ

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು, ಲೋಕೇಶ್ ಕನಗರಾಜ್ ಅವರು ‘ಲಿಯೋ’ ಚಿತ್ರದಿಂದ ಸೋಲು ಅನುಭವಿಸಿದ್ದಾರೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ.

Mammootty: ‘ನನಗೆ ಮಲಯಾಳಂ ಚಿತ್ರರಂಗ ಸಾಕು’; ರಜನಿಕಾಂತ್ ಜೊತೆ ನಟಿಸ್ತೀರಾ ಎಂಬ ಪ್ರಶ್ನೆಗೆ ಮಮ್ಮೂಟಿ ಉತ್ತರ
ಥಲೈವರ್ ಚಿತ್ರದಲ್ಲಿ ಮಮ್ಮೂಟಿ?
Follow us
| Updated By: ರಾಜೇಶ್ ದುಗ್ಗುಮನೆ

Updated on:Nov 22, 2023 | 4:47 PM

ನಟ ರಜನಿಕಾಂತ್ ಹಾಗೂ ಲೋಕೇಶ್ ಕನಗರಾಜ್ (Lokesh Kanagaraj) ಅವರು ‘ತಲೈವರ್ 171’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಸಿನಿಮಾ ಸೆಟ್ಟೇರೋದು ಮುಂದಿನ ವರ್ಷ ಮಾರ್ಚ್​ ತಿಂಗಳಲ್ಲಿ ಎನ್ನಲಾಗಿದೆ. ಈ ಸಿನಿಮಾಗೆ ಸದ್ಯ ತಯಾರಿಗಳು ಭರದಿಂದ ಸಾಗಿವೆ. ಇದರ ಜೊತೆಗೆ ಸಿನಿಮಾ ಬಗ್ಗೆ ಅನೇಕ ವದಂತಿಗಳು ಹುಟ್ಟಿಕೊಳ್ಳುತ್ತಿವೆ. ಈ ಚಿತ್ರದಲ್ಲಿ ಮಲಯಾಳಂನ ಖ್ಯಾತ ನಟ ಮಮ್ಮೂಟಿ ಕೂಡ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಈ ಪ್ರಶ್ನೆಗೆ ಅವರ ಕಡೆಯಿಂದ ನೇರ ಉತ್ತರ ಸಿಕ್ಕಿದೆ.

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು, ಲೋಕೇಶ್ ಕನಗರಾಜ್ ಅವರು ‘ಲಿಯೋ’ ಚಿತ್ರದಿಂದ ಸೋಲು ಅನುಭವಿಸಿದ್ದಾರೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ. ಅವರಿಗೆ ದೊಡ್ಡ ಗೆಲುವಿನ ಅವಶ್ಯಕತೆ ಇದೆ. ತಾತ್ಕಾಲಿಕವಾಗಿ ‘ತಲೈವರ್ 171’ ರಂದು ನಾಮಕರಣ ಮಾಡಿರುವ ಸಿನಿಮಾ ಬಗ್ಗೆ ಜನರಲ್ಲಿ ಹೆಚ್ಚಿನ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಮ್ಮೂಟಿ ನಟಿಸಲಿದ್ದಾರೆ ಎನ್ನಲಾಗಿತ್ತು.

‘ಕಾದಲ್​ ದಿ ಕೋರ್’ ಸಿನಿಮಾ ಪ್ರಮೋಷ್​ನಲ್ಲಿ ಮಮ್ಮೂಟಿ ಹಾಗೂ ಜ್ಯೋತಿಕಾ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ರಜನಿಕಾಂತ್ 171ನೇ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗಿದೆ. ‘ಈ ಸುದ್ದಿ ನಿಜವಲ್ಲ’ ಎಂದು ಅವರು ಹೇಳಿದ್ದಾರೆ. ‘ನೀವು ಲೋಕೇಶ್ ಕನಗರಾಜ್ ಅವರ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗವಾಗುತ್ತೀರಾ’ ಎಂದು ಪ್ರಶ್ನೆ ಮಾಡಲಾಗಿದೆ. ‘ನನಗೆ ಮಲಯಾಳಂ ಚಿತ್ರರಂಗ ಸಾಕು. ನನಗೆ ಅವರ ಪರಿಚಯ ಇಲ್ಲ. ಅವರು ಕರೆ ಮಾಡಲಿ ಆ ಬಳಿಕ ನೋಡೋಣ’ ಎಂದಿದ್ದಾರೆ ಮಮ್ಮೂಟಿ. ಈ ಮೂಲಕ ಎಲ್ಲಾ ವದಂತಿಗಳಿಗೆ ಅವರು ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ‘ಈ ಸಲ ಕಪ್​ ನಮ್ದೇ’ ಎಂದ ರಜನಿಕಾಂತ್; ವರ್ಲ್ಡ್​ ಕಪ್​ ಫೈನಲ್​ ಬಗ್ಗೆ ತಲೈವಾ ಭವಿಷ್ಯವಾಣಿ

ರಜನಿಕಾಂತ್ ಅವರ ಈ ಚಿತ್ರಕ್ಕೆ ಯಾವ ಶೀರ್ಷಿಕೆ ಇಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಸದ್ಯಕ್ಕಂತೂ ಯಾವುದೇ ಮಾಹಿತಿ ಸಿಗೋದು ಅನುಮಾನ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:53 pm, Wed, 22 November 23

ತಾಜಾ ಸುದ್ದಿ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು