AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mammootty: ‘ನನಗೆ ಮಲಯಾಳಂ ಚಿತ್ರರಂಗ ಸಾಕು’; ರಜನಿಕಾಂತ್ ಜೊತೆ ನಟಿಸ್ತೀರಾ ಎಂಬ ಪ್ರಶ್ನೆಗೆ ಮಮ್ಮೂಟಿ ಉತ್ತರ

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು, ಲೋಕೇಶ್ ಕನಗರಾಜ್ ಅವರು ‘ಲಿಯೋ’ ಚಿತ್ರದಿಂದ ಸೋಲು ಅನುಭವಿಸಿದ್ದಾರೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ.

Mammootty: ‘ನನಗೆ ಮಲಯಾಳಂ ಚಿತ್ರರಂಗ ಸಾಕು’; ರಜನಿಕಾಂತ್ ಜೊತೆ ನಟಿಸ್ತೀರಾ ಎಂಬ ಪ್ರಶ್ನೆಗೆ ಮಮ್ಮೂಟಿ ಉತ್ತರ
ಥಲೈವರ್ ಚಿತ್ರದಲ್ಲಿ ಮಮ್ಮೂಟಿ?
TV9 Web
| Edited By: |

Updated on:Nov 22, 2023 | 4:47 PM

Share

ನಟ ರಜನಿಕಾಂತ್ ಹಾಗೂ ಲೋಕೇಶ್ ಕನಗರಾಜ್ (Lokesh Kanagaraj) ಅವರು ‘ತಲೈವರ್ 171’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಸಿನಿಮಾ ಸೆಟ್ಟೇರೋದು ಮುಂದಿನ ವರ್ಷ ಮಾರ್ಚ್​ ತಿಂಗಳಲ್ಲಿ ಎನ್ನಲಾಗಿದೆ. ಈ ಸಿನಿಮಾಗೆ ಸದ್ಯ ತಯಾರಿಗಳು ಭರದಿಂದ ಸಾಗಿವೆ. ಇದರ ಜೊತೆಗೆ ಸಿನಿಮಾ ಬಗ್ಗೆ ಅನೇಕ ವದಂತಿಗಳು ಹುಟ್ಟಿಕೊಳ್ಳುತ್ತಿವೆ. ಈ ಚಿತ್ರದಲ್ಲಿ ಮಲಯಾಳಂನ ಖ್ಯಾತ ನಟ ಮಮ್ಮೂಟಿ ಕೂಡ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಈ ಪ್ರಶ್ನೆಗೆ ಅವರ ಕಡೆಯಿಂದ ನೇರ ಉತ್ತರ ಸಿಕ್ಕಿದೆ.

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು, ಲೋಕೇಶ್ ಕನಗರಾಜ್ ಅವರು ‘ಲಿಯೋ’ ಚಿತ್ರದಿಂದ ಸೋಲು ಅನುಭವಿಸಿದ್ದಾರೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ. ಅವರಿಗೆ ದೊಡ್ಡ ಗೆಲುವಿನ ಅವಶ್ಯಕತೆ ಇದೆ. ತಾತ್ಕಾಲಿಕವಾಗಿ ‘ತಲೈವರ್ 171’ ರಂದು ನಾಮಕರಣ ಮಾಡಿರುವ ಸಿನಿಮಾ ಬಗ್ಗೆ ಜನರಲ್ಲಿ ಹೆಚ್ಚಿನ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಮ್ಮೂಟಿ ನಟಿಸಲಿದ್ದಾರೆ ಎನ್ನಲಾಗಿತ್ತು.

‘ಕಾದಲ್​ ದಿ ಕೋರ್’ ಸಿನಿಮಾ ಪ್ರಮೋಷ್​ನಲ್ಲಿ ಮಮ್ಮೂಟಿ ಹಾಗೂ ಜ್ಯೋತಿಕಾ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ರಜನಿಕಾಂತ್ 171ನೇ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗಿದೆ. ‘ಈ ಸುದ್ದಿ ನಿಜವಲ್ಲ’ ಎಂದು ಅವರು ಹೇಳಿದ್ದಾರೆ. ‘ನೀವು ಲೋಕೇಶ್ ಕನಗರಾಜ್ ಅವರ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗವಾಗುತ್ತೀರಾ’ ಎಂದು ಪ್ರಶ್ನೆ ಮಾಡಲಾಗಿದೆ. ‘ನನಗೆ ಮಲಯಾಳಂ ಚಿತ್ರರಂಗ ಸಾಕು. ನನಗೆ ಅವರ ಪರಿಚಯ ಇಲ್ಲ. ಅವರು ಕರೆ ಮಾಡಲಿ ಆ ಬಳಿಕ ನೋಡೋಣ’ ಎಂದಿದ್ದಾರೆ ಮಮ್ಮೂಟಿ. ಈ ಮೂಲಕ ಎಲ್ಲಾ ವದಂತಿಗಳಿಗೆ ಅವರು ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ‘ಈ ಸಲ ಕಪ್​ ನಮ್ದೇ’ ಎಂದ ರಜನಿಕಾಂತ್; ವರ್ಲ್ಡ್​ ಕಪ್​ ಫೈನಲ್​ ಬಗ್ಗೆ ತಲೈವಾ ಭವಿಷ್ಯವಾಣಿ

ರಜನಿಕಾಂತ್ ಅವರ ಈ ಚಿತ್ರಕ್ಕೆ ಯಾವ ಶೀರ್ಷಿಕೆ ಇಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಸದ್ಯಕ್ಕಂತೂ ಯಾವುದೇ ಮಾಹಿತಿ ಸಿಗೋದು ಅನುಮಾನ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:53 pm, Wed, 22 November 23

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?