AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mammootty: ‘ನನಗೆ ಮಲಯಾಳಂ ಚಿತ್ರರಂಗ ಸಾಕು’; ರಜನಿಕಾಂತ್ ಜೊತೆ ನಟಿಸ್ತೀರಾ ಎಂಬ ಪ್ರಶ್ನೆಗೆ ಮಮ್ಮೂಟಿ ಉತ್ತರ

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು, ಲೋಕೇಶ್ ಕನಗರಾಜ್ ಅವರು ‘ಲಿಯೋ’ ಚಿತ್ರದಿಂದ ಸೋಲು ಅನುಭವಿಸಿದ್ದಾರೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ.

Mammootty: ‘ನನಗೆ ಮಲಯಾಳಂ ಚಿತ್ರರಂಗ ಸಾಕು’; ರಜನಿಕಾಂತ್ ಜೊತೆ ನಟಿಸ್ತೀರಾ ಎಂಬ ಪ್ರಶ್ನೆಗೆ ಮಮ್ಮೂಟಿ ಉತ್ತರ
ಥಲೈವರ್ ಚಿತ್ರದಲ್ಲಿ ಮಮ್ಮೂಟಿ?
TV9 Web
| Edited By: |

Updated on:Nov 22, 2023 | 4:47 PM

Share

ನಟ ರಜನಿಕಾಂತ್ ಹಾಗೂ ಲೋಕೇಶ್ ಕನಗರಾಜ್ (Lokesh Kanagaraj) ಅವರು ‘ತಲೈವರ್ 171’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಸಿನಿಮಾ ಸೆಟ್ಟೇರೋದು ಮುಂದಿನ ವರ್ಷ ಮಾರ್ಚ್​ ತಿಂಗಳಲ್ಲಿ ಎನ್ನಲಾಗಿದೆ. ಈ ಸಿನಿಮಾಗೆ ಸದ್ಯ ತಯಾರಿಗಳು ಭರದಿಂದ ಸಾಗಿವೆ. ಇದರ ಜೊತೆಗೆ ಸಿನಿಮಾ ಬಗ್ಗೆ ಅನೇಕ ವದಂತಿಗಳು ಹುಟ್ಟಿಕೊಳ್ಳುತ್ತಿವೆ. ಈ ಚಿತ್ರದಲ್ಲಿ ಮಲಯಾಳಂನ ಖ್ಯಾತ ನಟ ಮಮ್ಮೂಟಿ ಕೂಡ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಈ ಪ್ರಶ್ನೆಗೆ ಅವರ ಕಡೆಯಿಂದ ನೇರ ಉತ್ತರ ಸಿಕ್ಕಿದೆ.

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು, ಲೋಕೇಶ್ ಕನಗರಾಜ್ ಅವರು ‘ಲಿಯೋ’ ಚಿತ್ರದಿಂದ ಸೋಲು ಅನುಭವಿಸಿದ್ದಾರೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ. ಅವರಿಗೆ ದೊಡ್ಡ ಗೆಲುವಿನ ಅವಶ್ಯಕತೆ ಇದೆ. ತಾತ್ಕಾಲಿಕವಾಗಿ ‘ತಲೈವರ್ 171’ ರಂದು ನಾಮಕರಣ ಮಾಡಿರುವ ಸಿನಿಮಾ ಬಗ್ಗೆ ಜನರಲ್ಲಿ ಹೆಚ್ಚಿನ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಮ್ಮೂಟಿ ನಟಿಸಲಿದ್ದಾರೆ ಎನ್ನಲಾಗಿತ್ತು.

‘ಕಾದಲ್​ ದಿ ಕೋರ್’ ಸಿನಿಮಾ ಪ್ರಮೋಷ್​ನಲ್ಲಿ ಮಮ್ಮೂಟಿ ಹಾಗೂ ಜ್ಯೋತಿಕಾ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ರಜನಿಕಾಂತ್ 171ನೇ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗಿದೆ. ‘ಈ ಸುದ್ದಿ ನಿಜವಲ್ಲ’ ಎಂದು ಅವರು ಹೇಳಿದ್ದಾರೆ. ‘ನೀವು ಲೋಕೇಶ್ ಕನಗರಾಜ್ ಅವರ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗವಾಗುತ್ತೀರಾ’ ಎಂದು ಪ್ರಶ್ನೆ ಮಾಡಲಾಗಿದೆ. ‘ನನಗೆ ಮಲಯಾಳಂ ಚಿತ್ರರಂಗ ಸಾಕು. ನನಗೆ ಅವರ ಪರಿಚಯ ಇಲ್ಲ. ಅವರು ಕರೆ ಮಾಡಲಿ ಆ ಬಳಿಕ ನೋಡೋಣ’ ಎಂದಿದ್ದಾರೆ ಮಮ್ಮೂಟಿ. ಈ ಮೂಲಕ ಎಲ್ಲಾ ವದಂತಿಗಳಿಗೆ ಅವರು ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ‘ಈ ಸಲ ಕಪ್​ ನಮ್ದೇ’ ಎಂದ ರಜನಿಕಾಂತ್; ವರ್ಲ್ಡ್​ ಕಪ್​ ಫೈನಲ್​ ಬಗ್ಗೆ ತಲೈವಾ ಭವಿಷ್ಯವಾಣಿ

ರಜನಿಕಾಂತ್ ಅವರ ಈ ಚಿತ್ರಕ್ಕೆ ಯಾವ ಶೀರ್ಷಿಕೆ ಇಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಸದ್ಯಕ್ಕಂತೂ ಯಾವುದೇ ಮಾಹಿತಿ ಸಿಗೋದು ಅನುಮಾನ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:53 pm, Wed, 22 November 23

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು