AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದಲ್ಲಿ ಧನಂಜಯ ಪಾತ್ರದ ಬಗ್ಗೆ ಹೊಸ ಅಪ್​ಡೇಟ್​ ನೀಡಿದ ನಿರ್ದೇಶಕ ಸುಕುಮಾರ್​

‘ಪುಷ್ಪ’ ಸಿನಿಮಾ ಡಿಸೆಂಬರ್​ 17ರಂದು ತೆರೆಗೆ ಬಂದು ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಆದರೆ, ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಒಳ್ಳೆಯ ಕಮಾಯಿ ಮಾಡುತ್ತಿದೆ. ಈ ಚಿತ್ರದ ಕಲೆಕ್ಷನ್​ 250 ಕೋಟಿ ರೂಪಾಯಿ ದಾಟಿದೆ.

‘ಪುಷ್ಪ 2’ ಚಿತ್ರದಲ್ಲಿ ಧನಂಜಯ ಪಾತ್ರದ ಬಗ್ಗೆ ಹೊಸ ಅಪ್​ಡೇಟ್​ ನೀಡಿದ ನಿರ್ದೇಶಕ ಸುಕುಮಾರ್​
ಸುಕುಮಾರ್​, ಅಲ್ಲು ಅರ್ಜುನ್​ ಹಾಗೂ ಧನಂಜಯ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 29, 2021 | 6:21 PM

ಡಾಲಿ ಧನಂಜಯ (Daali Dhananjay) ಅವರು ಬೇಡಿಕೆಯ ನಟನಾಗಿ ಹೊರ ಹೊಮ್ಮಿದ್ದಾರೆ. ಅವರಿಗೆ ಕೇವಲ ಸ್ಯಾಂಡಲ್​ವುಡ್​ ಮಾತ್ರವಲ್ಲದೆ, ಪರಭಾಷೆಯಿಂದಲೂ ಆಫರ್​ ಬರುತ್ತಿದೆ. ಅಲ್ಲು ಅರ್ಜುನ್​ (Allu Arjun) ನಟನೆಯ ‘ಪುಷ್ಪ’ ಚಿತ್ರದ (Pushpa Movie) ಮೂಲಕ ಟಾಲಿವುಡ್​​ನಲ್ಲಿ ಮತ್ತೆ ಮಿಂಚಿದ್ದಾರೆ. ಅವರ ನಟನೆ ತೆಲುಗು ಮಂದಿಗೂ ಇಷ್ಟವಾಗಿದೆ. ಧನಂಜಯ ನಟಿಸಿರುವ ಜಾಲಿ ರೆಡ್ಡಿ ಪಾತ್ರ ಹೆಚ್ಚುಹೊತ್ತು ಕಾಣಿಸಿಕೊಳ್ಳುವುದಿಲ್ಲ. ಆದರೆ, ‘ಪುಷ್ಪ ​2’ ಚಿತ್ರದಲ್ಲಿ ಅವರ ಪಾತ್ರ ಹೆಚ್ಚು ಪ್ರಾಮುಖ್ಯತೆ ವಹಿಸಲಿದೆಯೇ ಎನ್ನುವ ಗುಮಾನಿ ‘ಪುಷ್ಪ’ ನೋಡಿದ ಅಭಿಮಾನಿಗಳಲ್ಲಿ ಮೂಡಿತ್ತು. ಈಗ ಈ ಬಗ್ಗೆ ನಿರ್ದೇಶಕ ಸುಕುಮಾರ್​ ಅವರು ಸ್ಪಷ್ಟನೆ ನೀಡಿದ್ದಾರೆ.

‘ಪುಷ್ಪ’ ಸಿನಿಮಾ ಡಿಸೆಂಬರ್​ 17ರಂದು ತೆರೆಗೆ ಬಂದು ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಆದರೆ, ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಒಳ್ಳೆಯ ಕಮಾಯಿ ಮಾಡುತ್ತಿದೆ. ಈ ಚಿತ್ರದ ಕಲೆಕ್ಷನ್​ 250 ಕೋಟಿ ರೂಪಾಯಿ ದಾಟಿದೆ. ಇದು ಸಹಜವಾಗಿಯೇ ಚಿತ್ರತಂಡದ ಖುಷಿ ಹೆಚ್ಚಿಸಿದೆ. ಸಿನಿಮಾ ತಂಡ ಈ ಮೊದಲು ಸಕ್ಸಸ್​ ಮೀಟ್​ ಹಮ್ಮಿಕೊಂಡಿತ್ತು. ಈಗ ಎಲ್ಲರಿಗೂ ಧನ್ಯವಾದ ಅರ್ಪಿಸೋಕೆ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಸುಕುಮಾರ್​ ಅವರು ಧನಂಜಯ ಬಗ್ಗೆ ಮಾತನಾಡಿದ್ದಾರೆ.

ಧನಂಜಯ ಅವರು ಕಡಿಮೆ ಹೊತ್ತು ತೆರೆ ಮೇಲೆ ಕಾಣಿಸಿಕೊಳ್ಳುತ್ತಾರೆ. ‘ಪುಷ್ಪ 2’ನಲ್ಲಿ ಅವರ ಪಾತ್ರ ಇರಲಿದೆಯೇ? ಪಾತ್ರ ಇರಲಿದೆ ಎಂದಾದರೆ ಅದು ಎಷ್ಟು ಪ್ರಾಮುಖ್ಯತೆ ವಹಿಸಿಕೊಳ್ಳಲಿದೆ? ಎಂಬಿತ್ಯಾದಿ ಪ್ರಶ್ನೆಗಳು ಮೂಡಿದ್ದವು. ಈ ಪ್ರಶ್ನೆಗಳಿಗೆ ಸುಕುಮಾರ್​ ಉತ್ತರ ನೀಡಿದ್ದಾರೆ.

‘ಈ ಚಿತ್ರದಲ್ಲಿ ಹಲವು ಕಲಾವಿದರು ನಟಿಸಿದ್ದಾರೆ. ಅವರೆಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಈ ಸಂದರ್ಭದಲ್ಲಿ ಕನ್ನಡದ ಧನಂಜಯ ಅವರನ್ನು ನೆನಪಿಸಿಕೊಳ್ಳಬೇಕು. ಕನ್ನಡದಲ್ಲಿ ಅವರು ಹೀರೋ. ಆದಾಗ್ಯೂ ನಮ್ಮ ಸಿನಿಮಾದಲ್ಲಿ ಒಂದು ಸಣ್ಣ ಪಾತ್ರ ಮಾಡಿದ್ದಾರೆ. ಅವರದ್ದು ಸಣ್ಣ ಪಾತ್ರ ಎಂದು ಹೇಳೋಕೆ ಸಾಧ್ಯವಿಲ್ಲ. ‘ಪುಷ್ಪ 2’ನಲ್ಲಿ ಅವರ ಪಾತ್ರ ಹೆಚ್ಚು ಹೊತ್ತು ಇರಲಿದೆ. ಧನ್ಯವಾದಗಳು ಧನಂಜಯ’ ಎಂದಿದ್ದಾರೆ ಸುಕುಮಾರ್. ಈ ಮೂಲಕ ಎಲ್ಲಾ ಪ್ರಶ್ನೆ ಹಾಗೂ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

‘ಪುಷ್ಪ ಚಿತ್ರ ಮಾಡುವುದು ನಿಜಕ್ಕೂ ಕಷ್ಟಕರವಾಗಿತ್ತು. ನನ್ನ ತಾಂತ್ರಿಕ ತಂಡವಿಲ್ಲದೆ ಅದು ಸಾಧ್ಯವಿರಲಿಲ್ಲ. ಹೀಗಾಗಿ, ತಾಂತ್ರಿಕ ವರ್ಗದಲ್ಲಿ ಕೆಲಸ ಮಾಡಿದ ಎಲ್ಲರಿಗೂ ನಾನು 1 ಲಕ್ಷ ರೂಪಾಯಿ ನೀಡುತ್ತಿದ್ದೇನೆ’ ಎಂದು ಸುಕುಮಾರ್ ಹೇಳಿದ್ದಾರೆ. ಸುಕುಮಾರ್ ಅವರ ಈ ಘೋಷಣೆಯು ನಟ ಅಲ್ಲು ಅರ್ಜುನ್ ಮತ್ತು ಅಭಿಮಾನಿಗಳ ಮನ ಗೆದ್ದಿದೆ.

ಇದನ್ನೂ ಓದಿ:‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ? 

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?

Published On - 5:44 pm, Wed, 29 December 21

ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!
ತಾಯಿಗೆ ಹೊಡೆಯುವಾಗ ತಂದೆಗೆ ಕೈಮುಗಿದು ಬೇಡಿದ ಮಗಳು
ತಾಯಿಗೆ ಹೊಡೆಯುವಾಗ ತಂದೆಗೆ ಕೈಮುಗಿದು ಬೇಡಿದ ಮಗಳು