AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮೀರ್ ಖಾನ್​​ಗಿಂತ ವೇಯ್ಟರ್​ ಉತ್ತಮವಾಗಿ ಆ್ಯಕ್ಟ್​ ಮಾಡಿದ್ದ; ಆರ್​ಜಿವಿ ಹೀಗೆ ಹೇಳಿದ್ದರ ಹಿಂದಿತ್ತು ಬೇರೆ ಉದ್ದೇಶ

Ram Gopal Varma: ರಂಗೀಲಾ ತೆರೆಕಂಡ ನಂತರ ರಾಮ್​ಗೋಪಾಲ್​ ವರ್ಮಾ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ಮಾತನಾಡಿದ್ದ ಆರ್​ಜಿವಿ, ‘ಆಮೀರ್​ಗಿಂತ ಸಿನಿಮಾದಲ್ಲಿ ಬಂದು ಹೋಗುವ ವೇಯ್ಟರ್​ ಉತ್ತಮವಾಗಿ ಪಾತ್ರ ನಿರ್ವಹಿಸಿದ್ದ’ ಎಂದಿದ್ದರು.

ಆಮೀರ್ ಖಾನ್​​ಗಿಂತ ವೇಯ್ಟರ್​ ಉತ್ತಮವಾಗಿ ಆ್ಯಕ್ಟ್​ ಮಾಡಿದ್ದ; ಆರ್​ಜಿವಿ ಹೀಗೆ ಹೇಳಿದ್ದರ ಹಿಂದಿತ್ತು ಬೇರೆ ಉದ್ದೇಶ
ಆರ್​ಜಿವಿ-ಆಮೀರ್​
ರಾಜೇಶ್ ದುಗ್ಗುಮನೆ
| Edited By: |

Updated on:May 15, 2021 | 4:32 PM

Share

Ram Gopal Varma: 1995ರಲ್ಲಿ ತೆರೆಗೆ ಬಂದಿದ್ದ ‘ರಂಗೀಲಾ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ಅಂದಿನ ಕಾಲದಲ್ಲಿ ಇದು ದೊಡ್ಡ ಹಿಟ್ ಸಿನಿಮಾ ಕೂಡ ಹೌದು. ರಾಮ್​ ಗೋಪಾಲ್​ ವರ್ಮಾ ನಿರ್ದೇಶನದ ಈ ಚಿತ್ರದಲ್ಲಿ ಆಮೀರ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದರು. ಈ ಚಿತ್ರ ತೆರೆಕಂಡ ನಂತರದಲ್ಲಿ ಆಮೀರ್​ ಹಾಗೂ ಆರ್​ಜಿವಿ ನಡುವಿನ ಫ್ರೆಂಡ್​ಶಿಪ್​ ಮುರಿದು ಬಿದ್ದಿತ್ತು. ಇದರಲ್ಲಿ ನನ್ನದೇ ತಪ್ಪಿದೆ ಎಂದು ಆರ್​ಜಿವಿ ಕೊನೆಗೂ ಒಪ್ಪಿಕೊಂಡಿದ್ದಾರೆ.

ರಂಗೀಲಾ ತೆರೆಕಂಡ ನಂತರ ರಾಮ್​ಗೋಪಾಲ್​ ವರ್ಮಾ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ಮಾತನಾಡಿದ್ದ ಆರ್​ಜಿವಿ, ‘ಆಮೀರ್​ಗಿಂತ ಸಿನಿಮಾದಲ್ಲಿ ಬಂದು ಹೋಗುವ ವೇಯ್ಟರ್​ ಉತ್ತಮವಾಗಿ ಪಾತ್ರ ನಿರ್ವಹಿಸಿದ್ದ’ ಎಂದಿದ್ದರು. ಈ ಹೇಳಿಕೆ ದೊಡ್ಡ ಮಟ್ಟದಲ್ಲಿ ವಿವಾದ ಹುಟ್ಟು ಹಾಕಿತ್ತು. ಇಬ್ಬರೂ ಒಟ್ಟಿಗೆ ಕೆಲಸ ಮಾಡದೇ ಇರಲು ಇದುವೇ ಕಾರಣ ಎನ್ನಲಾಗಿತ್ತು. ಈ ಬಗ್ಗೆ ಆರ್​ಜಿವಿ ಈಗ ಮೌನ ಮುರಿದಿದ್ದಾರೆ.

ಅಂದು ಆರ್​ಜಿವಿ ಆ ರೀತಿಯಲ್ಲಿ ಮಾತನ್ನೇ ಆಡಿರಲಿಲ್ಲವಂತೆ. ‘ಆಮೀರ್​ಗಿಂತ ವೇಯ್ಟರ್ ಉತ್ತಮವಾಗಿ ನಟಿಸಿದ್ದಾನೆ ಎಂದು ನಾನು ಹೇಳಲೇ ಇಲ್ಲ. ಅಂದು ನಾನು ಹೇಳಿದ ಹೇಳಿಕೆಯನ್ನು ಪತ್ರಿಕೆಗಳು ತಪ್ಪಾಗಿ ಅರ್ಥೈಸಿಕೊಂಡವು. ಅದೇ ರೀತಿಯಲ್ಲಿ ಹೆಡ್​ಲೈನ್​ ನೀಡಿದರು. ಅದನ್ನೇ ಆಮೀರ್ ನಂಬಿಕೊಂಡರು’ ಎಂದಿದ್ದಾರೆ ಆರ್​ಜಿವಿ.

‘ಸಿನಿಮಾ ವಿಮರ್ಶಕ ಮೊಹ್ಮದ್​ ಖಾಲಿದ್​ಗೆ ನಾನು ಸಂದರ್ಶನ ನೀಡುತ್ತಿದ್ದೆ. ಅದೊಂದು ಹೋಟೆಲ್​ ದೃಶ್ಯ. ನಾನು ಪ್ರಮುಖವಾಗಿ ಆ ಸೀನ್​ ಬಗ್ಗೆ ಮಾತ್ರ ಮಾತನಾಡುತ್ತಿದ್ದೆ. ಅಲ್ಲಿ ಆಮೀರ್​ ಮಾತಿಗೆ ವೇಯ್ಟರ್​ ಉತ್ತಮವಾಗಿ ಸ್ಪಂದಿಸಿದ್ದರು. ನಾನು ಈ ದೃಶ್ಯವನ್ನು ಮಾತ್ರ ಉಲ್ಲೇಖಿಸಿ ಹೇಳಿದ್ದೆ. ಆದರೆ,  ಮೊಹ್ಮದ್​ ಬೇರೆ ರೀತಿಯಲ್ಲಿ ಬರೆದರು. ನನಗೆ ಈ ಬಗ್ಗೆ ಸ್ಪಷ್ಟನೆ ನೀಡೋಕೂ ಸಮಯ ಸಿಕ್ಕಿಲ್ಲ. ನಾನು ಆ ರೀತಿ ಹೇಳಿಲ್ಲ ಎಂದು ಅನೇಕ ಸಂದರ್ಶನದಲ್ಲಿ ಹೇಳಿದ್ದೆ. ಆದರೆ, ಆಗ ಸಮಯ ಮಿಂಚಿತ್ತು. ಟೆಕ್ನಿಕಲ್​ ವಿಚಾರಗಳನ್ನು ಮೊಹ್ಮದ್​ಗೆ ಅರ್ಥಮಾಡಿಸಲು ಹೋಗಿದ್ದು ನನ್ನ ತಪ್ಪು’ ಎಂದು ಆರ್​ಜಿವಿ ಹೇಳಿಕೊಂಡಿದ್ದಾರೆ.

ಆಮೀರ್​ ಖಾನ್​ ಸದ್ಯ ಲಾಲ್​ ಸಿಂಗ್​ ಚಡ್ಡಾ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಅವರು ಲೇಹ್-ಲಡಾಕ್​ಗೆ ತೆರಳಿದ್ದಾರೆ. 50 ದಿನಗಳ ಕಾಲ ಅವರು ಅಲ್ಲಿಯೇ ಇರಲಿದ್ದಾರಂತೆ. ಹಾಲಿವಡ್​​ನ ‘ಫಾರೆಸ್ಟ್​ ಗಂಪ್’​ ಚಿತ್ರದ ರಿಮೇಕ್​ ಆಗಿ ಈ ಸಿನಿಮಾ ಮೂಡಿ ಬರುತ್ತಿದೆ.

ಇದನ್ನೂ ಓದಿ:

 Ram Gopal Varma Birthday: ಇದು ನನ್ನ ಬರ್ತ್​ಡೇ ಅಲ್ಲ; ಡೆತ್​ ಡೇ! ಹುಟ್ಟುಹಬ್ಬದ ದಿನವೇ ರಾಮ್​ ಗೋಪಾಲ್​ ವರ್ಮಾ ಶಾಕಿಂಗ್​ ಮಾತು

ಬೀದಿಯಲ್ಲಿ ಪೋಸ್ಟರ್​ ಹಚ್ಚುತ್ತಿದ್ದ ಆಮೀರ್​ ಖಾನ್​ ವಿಡಿಯೋ ವೈರಲ್​; ಅಂದು ಸಿಗುತ್ತಿದ್ದ ಸಂಬಳ ಎಷ್ಟು?

Published On - 4:15 pm, Sat, 15 May 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?