AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮೀರ್ ಖಾನ್​​ಗಿಂತ ವೇಯ್ಟರ್​ ಉತ್ತಮವಾಗಿ ಆ್ಯಕ್ಟ್​ ಮಾಡಿದ್ದ; ಆರ್​ಜಿವಿ ಹೀಗೆ ಹೇಳಿದ್ದರ ಹಿಂದಿತ್ತು ಬೇರೆ ಉದ್ದೇಶ

Ram Gopal Varma: ರಂಗೀಲಾ ತೆರೆಕಂಡ ನಂತರ ರಾಮ್​ಗೋಪಾಲ್​ ವರ್ಮಾ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ಮಾತನಾಡಿದ್ದ ಆರ್​ಜಿವಿ, ‘ಆಮೀರ್​ಗಿಂತ ಸಿನಿಮಾದಲ್ಲಿ ಬಂದು ಹೋಗುವ ವೇಯ್ಟರ್​ ಉತ್ತಮವಾಗಿ ಪಾತ್ರ ನಿರ್ವಹಿಸಿದ್ದ’ ಎಂದಿದ್ದರು.

ಆಮೀರ್ ಖಾನ್​​ಗಿಂತ ವೇಯ್ಟರ್​ ಉತ್ತಮವಾಗಿ ಆ್ಯಕ್ಟ್​ ಮಾಡಿದ್ದ; ಆರ್​ಜಿವಿ ಹೀಗೆ ಹೇಳಿದ್ದರ ಹಿಂದಿತ್ತು ಬೇರೆ ಉದ್ದೇಶ
ಆರ್​ಜಿವಿ-ಆಮೀರ್​
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 15, 2021 | 4:32 PM

Ram Gopal Varma: 1995ರಲ್ಲಿ ತೆರೆಗೆ ಬಂದಿದ್ದ ‘ರಂಗೀಲಾ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ಅಂದಿನ ಕಾಲದಲ್ಲಿ ಇದು ದೊಡ್ಡ ಹಿಟ್ ಸಿನಿಮಾ ಕೂಡ ಹೌದು. ರಾಮ್​ ಗೋಪಾಲ್​ ವರ್ಮಾ ನಿರ್ದೇಶನದ ಈ ಚಿತ್ರದಲ್ಲಿ ಆಮೀರ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದರು. ಈ ಚಿತ್ರ ತೆರೆಕಂಡ ನಂತರದಲ್ಲಿ ಆಮೀರ್​ ಹಾಗೂ ಆರ್​ಜಿವಿ ನಡುವಿನ ಫ್ರೆಂಡ್​ಶಿಪ್​ ಮುರಿದು ಬಿದ್ದಿತ್ತು. ಇದರಲ್ಲಿ ನನ್ನದೇ ತಪ್ಪಿದೆ ಎಂದು ಆರ್​ಜಿವಿ ಕೊನೆಗೂ ಒಪ್ಪಿಕೊಂಡಿದ್ದಾರೆ.

ರಂಗೀಲಾ ತೆರೆಕಂಡ ನಂತರ ರಾಮ್​ಗೋಪಾಲ್​ ವರ್ಮಾ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ಮಾತನಾಡಿದ್ದ ಆರ್​ಜಿವಿ, ‘ಆಮೀರ್​ಗಿಂತ ಸಿನಿಮಾದಲ್ಲಿ ಬಂದು ಹೋಗುವ ವೇಯ್ಟರ್​ ಉತ್ತಮವಾಗಿ ಪಾತ್ರ ನಿರ್ವಹಿಸಿದ್ದ’ ಎಂದಿದ್ದರು. ಈ ಹೇಳಿಕೆ ದೊಡ್ಡ ಮಟ್ಟದಲ್ಲಿ ವಿವಾದ ಹುಟ್ಟು ಹಾಕಿತ್ತು. ಇಬ್ಬರೂ ಒಟ್ಟಿಗೆ ಕೆಲಸ ಮಾಡದೇ ಇರಲು ಇದುವೇ ಕಾರಣ ಎನ್ನಲಾಗಿತ್ತು. ಈ ಬಗ್ಗೆ ಆರ್​ಜಿವಿ ಈಗ ಮೌನ ಮುರಿದಿದ್ದಾರೆ.

ಅಂದು ಆರ್​ಜಿವಿ ಆ ರೀತಿಯಲ್ಲಿ ಮಾತನ್ನೇ ಆಡಿರಲಿಲ್ಲವಂತೆ. ‘ಆಮೀರ್​ಗಿಂತ ವೇಯ್ಟರ್ ಉತ್ತಮವಾಗಿ ನಟಿಸಿದ್ದಾನೆ ಎಂದು ನಾನು ಹೇಳಲೇ ಇಲ್ಲ. ಅಂದು ನಾನು ಹೇಳಿದ ಹೇಳಿಕೆಯನ್ನು ಪತ್ರಿಕೆಗಳು ತಪ್ಪಾಗಿ ಅರ್ಥೈಸಿಕೊಂಡವು. ಅದೇ ರೀತಿಯಲ್ಲಿ ಹೆಡ್​ಲೈನ್​ ನೀಡಿದರು. ಅದನ್ನೇ ಆಮೀರ್ ನಂಬಿಕೊಂಡರು’ ಎಂದಿದ್ದಾರೆ ಆರ್​ಜಿವಿ.

‘ಸಿನಿಮಾ ವಿಮರ್ಶಕ ಮೊಹ್ಮದ್​ ಖಾಲಿದ್​ಗೆ ನಾನು ಸಂದರ್ಶನ ನೀಡುತ್ತಿದ್ದೆ. ಅದೊಂದು ಹೋಟೆಲ್​ ದೃಶ್ಯ. ನಾನು ಪ್ರಮುಖವಾಗಿ ಆ ಸೀನ್​ ಬಗ್ಗೆ ಮಾತ್ರ ಮಾತನಾಡುತ್ತಿದ್ದೆ. ಅಲ್ಲಿ ಆಮೀರ್​ ಮಾತಿಗೆ ವೇಯ್ಟರ್​ ಉತ್ತಮವಾಗಿ ಸ್ಪಂದಿಸಿದ್ದರು. ನಾನು ಈ ದೃಶ್ಯವನ್ನು ಮಾತ್ರ ಉಲ್ಲೇಖಿಸಿ ಹೇಳಿದ್ದೆ. ಆದರೆ,  ಮೊಹ್ಮದ್​ ಬೇರೆ ರೀತಿಯಲ್ಲಿ ಬರೆದರು. ನನಗೆ ಈ ಬಗ್ಗೆ ಸ್ಪಷ್ಟನೆ ನೀಡೋಕೂ ಸಮಯ ಸಿಕ್ಕಿಲ್ಲ. ನಾನು ಆ ರೀತಿ ಹೇಳಿಲ್ಲ ಎಂದು ಅನೇಕ ಸಂದರ್ಶನದಲ್ಲಿ ಹೇಳಿದ್ದೆ. ಆದರೆ, ಆಗ ಸಮಯ ಮಿಂಚಿತ್ತು. ಟೆಕ್ನಿಕಲ್​ ವಿಚಾರಗಳನ್ನು ಮೊಹ್ಮದ್​ಗೆ ಅರ್ಥಮಾಡಿಸಲು ಹೋಗಿದ್ದು ನನ್ನ ತಪ್ಪು’ ಎಂದು ಆರ್​ಜಿವಿ ಹೇಳಿಕೊಂಡಿದ್ದಾರೆ.

ಆಮೀರ್​ ಖಾನ್​ ಸದ್ಯ ಲಾಲ್​ ಸಿಂಗ್​ ಚಡ್ಡಾ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಅವರು ಲೇಹ್-ಲಡಾಕ್​ಗೆ ತೆರಳಿದ್ದಾರೆ. 50 ದಿನಗಳ ಕಾಲ ಅವರು ಅಲ್ಲಿಯೇ ಇರಲಿದ್ದಾರಂತೆ. ಹಾಲಿವಡ್​​ನ ‘ಫಾರೆಸ್ಟ್​ ಗಂಪ್’​ ಚಿತ್ರದ ರಿಮೇಕ್​ ಆಗಿ ಈ ಸಿನಿಮಾ ಮೂಡಿ ಬರುತ್ತಿದೆ.

ಇದನ್ನೂ ಓದಿ:

 Ram Gopal Varma Birthday: ಇದು ನನ್ನ ಬರ್ತ್​ಡೇ ಅಲ್ಲ; ಡೆತ್​ ಡೇ! ಹುಟ್ಟುಹಬ್ಬದ ದಿನವೇ ರಾಮ್​ ಗೋಪಾಲ್​ ವರ್ಮಾ ಶಾಕಿಂಗ್​ ಮಾತು

ಬೀದಿಯಲ್ಲಿ ಪೋಸ್ಟರ್​ ಹಚ್ಚುತ್ತಿದ್ದ ಆಮೀರ್​ ಖಾನ್​ ವಿಡಿಯೋ ವೈರಲ್​; ಅಂದು ಸಿಗುತ್ತಿದ್ದ ಸಂಬಳ ಎಷ್ಟು?

Published On - 4:15 pm, Sat, 15 May 21

ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!