AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಪಾರ್ಟಿಗಳೆಂದರೆ ಅಕ್ಷಯ್​ ಕುಮಾರ್​​ಗೆ ಅಲರ್ಜಿ? ಇದರ ಹಿಂದಿದೆ ಇಂಟರೆಸ್ಟಿಂಗ್​ ವಿಚಾರ

ಸಿನಿಮಾ ಯಶಸ್ವಿಯಾದ ಖುಷಿಗೆ, ಬರ್ತ್​ಡೇ, ಮದುವೆ ಹೀಗೆ ನಾನಾ ವಿಚಾರಗಳಿಗೆ ಚಿತ್ರರಂಗದಲ್ಲಿ ಪಾರ್ಟಿ ಆಯೋಜನೆ ಮಾಡಲಾಗುತ್ತದೆ. ಅದರಲ್ಲಿಯೂ ಬಾಲಿವುಡ್​ನಲ್ಲಿ ಈ ಸಂಪ್ರದಾಯ ದೊಡ್ಡ ಮಟ್ಟದಲ್ಲಿ ನಡೆದುಕೊಂಡು ಬಂದಿದೆ.

ಬಾಲಿವುಡ್ ಪಾರ್ಟಿಗಳೆಂದರೆ ಅಕ್ಷಯ್​ ಕುಮಾರ್​​ಗೆ ಅಲರ್ಜಿ? ಇದರ ಹಿಂದಿದೆ ಇಂಟರೆಸ್ಟಿಂಗ್​ ವಿಚಾರ
ಅಕ್ಷಯ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Jun 21, 2021 | 8:36 PM

Share

ಬಾಲಿವುಡ್​ನ ಅನೇಕ ನಟರು ತಮ್ಮದೇ ಆದ ನಿಯಮ ಹಾಕಿಕೊಂಡಿದ್ದಾರೆ. ಆ ನಿಯಮವನ್ನು ಅವರು ಎಂದಿಗೂ ಮೀರಿಲ್ಲ. ನಟ ಆಮೀರ್​ ಖಾನ್​ ಎಂದಿಗೂ ಅವಾರ್ಡ್​ ಫಂಕ್ಷನ್​ಗಳಿಗೆ ತೆರಳುವುದಿಲ್ಲ. ಅದೇ ರೀತಿ ಅಕ್ಷಯ್​ ಕುಮಾರ್​ ಬಾಲಿವುಡ್​ ಪಾರ್ಟಿಗಳಿಗೆ ತೆರಳುವುದಿಲ್ಲವಂತೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಸಿನಿಮಾ ಯಶಸ್ವಿಯಾದ ಖುಷಿಗೆ, ಬರ್ತ್​ಡೇ, ಮದುವೆ ಹೀಗೆ ನಾನಾ ವಿಚಾರಗಳಿಗೆ ಚಿತ್ರರಂಗದಲ್ಲಿ ಪಾರ್ಟಿ ಆಯೋಜನೆ ಮಾಡಲಾಗುತ್ತದೆ. ಅದರಲ್ಲಿಯೂ ಬಾಲಿವುಡ್​ನಲ್ಲಿ ಈ ಸಂಪ್ರದಾಯ ದೊಡ್ಡ ಮಟ್ಟದಲ್ಲಿ ನಡೆದುಕೊಂಡು ಬಂದಿದೆ. ಬಾಲಿವುಡ್​ನ ದೊಡ್ಡ ನಿರ್ಮಾಪಕರಾದ ಕರಣ್​ ಜೋಹರ್​ ಸೇರಿ ಸಾಕಷ್ಟು ಜನರು ಸಣ್ಣ ಸಣ್ಣ ವಿಚಾರಕ್ಕೂ ದೊಡ್ಡ ದೊಡ್ಡ ಫಂಕ್ಷನ್​ ಆಯೋಜನೆ ಮಾಡುತ್ತಾರೆ. ಇದಕ್ಕೆ ಅಕ್ಷಯ್​ಗೂ ಆಹ್ವಾನ ಇರುತ್ತದೆ. ಆದರೆ, ಅವರು ಹೋಗುವುದಿಲ್ಲವಂತೆ. ಈ ಬಗ್ಗೆ ಕಪಿಲ್​ ಶರ್ಮಾ ಶೋನಲ್ಲಿ ಅಕ್ಷಯ್​ ಈ ವಿಚಾರ ಬಾಯ್ಬಿಟ್ಟಿದ್ದಾರೆ.

‘ಅಕ್ಷಯ್​ ನೀವು ಬಾಲಿವುಡ್​ ಪಾರ್ಟಿಗಳಿಗೆ ತೆರಳುವುದಿಲ್ಲವಂತೆ. ನೀವು ಮರಳಿ ಪಾರ್ಟಿ ನೀಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಈ ರೀತಿ ಮಾಡುತ್ತೀರಂತೆ ಹೌದೇ?’ ಎಂದು ಕಪಿಲ್​ ಶರ್ಮಾ ಪ್ರಶ್ನೆ ಮಾಡಿದ್ದರು. ಇದಕ್ಕೆ ಹೌದು ಎನ್ನುವ ಉತ್ತರ ಅಕ್ಷಯ್​ ಕುಮಾರ್​ ಅವರಿಂದ ಬಂತು. ಅಕ್ಷಯ್​ ಮದ್ಯ ಸೇವನೆ ಮಾಡುವುದಿಲ್ಲ. ಸಿಗರೇಟ್​ ಸೇದುವುದಿಲ್ಲ. ಹೀಗಾಗಿ, ಇಂಥ ಪಾರ್ಟಿ ಆಯೋಜನೆ ಮಾಡುವುದು ಮತ್ತು ಅದಕ್ಕೆ ಹೋಗೋದು ಎರಡೂ ಇಷ್ಟವಾಗುವುದಿಲ್ಲ. ಈ ಬಗ್ಗೆ ಕರಣ್​ ಜೋಹರ್​ ಬಳಿಯೂ ಅವರು ಈ ಬಗ್ಗೆ ಮಾತನಾಡಿದ್ದರು.

ಅಕ್ಷಯ್​ ಕುಮಾರ್​ ಅವರು ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಯಶ್​ ರಾಜ್​ ಫಿಲ್ಮ್ಸ್ ನಿರ್ಮಿಸುತ್ತಿರುವ ‘ಪೃಥ್ವಿರಾಜ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಟೈಟಲ್​ ಬದಲಿಸುವಂತೆ ಕರಣಿ ಸೇನಾದವರು ಪಟ್ಟು ಹಿಡಿದಿದ್ದಾರೆ. ಅವರ ನಟನೆಯ, ‘ಸೂರ್ಯವಂಶಿ’ ಹಾಗೂ ‘ಬೆಲ್​ ಬಾಟಮ್​’ ಸಿನಿಮಾ ತೆರೆಗೆ ಬರೋಕೆ ಸಿದ್ಧವಾಗಿದೆ. ರಕ್ಷಾ ಬಂಧನ್​ ಸಿನಿಮಾದ ಶೂಟಿಂಗ್​ ಇಂದಿನಿಂದ ಆರಂಭವಾಗಿದೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!