AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಪಾರ್ಟಿಗಳೆಂದರೆ ಅಕ್ಷಯ್​ ಕುಮಾರ್​​ಗೆ ಅಲರ್ಜಿ? ಇದರ ಹಿಂದಿದೆ ಇಂಟರೆಸ್ಟಿಂಗ್​ ವಿಚಾರ

ಸಿನಿಮಾ ಯಶಸ್ವಿಯಾದ ಖುಷಿಗೆ, ಬರ್ತ್​ಡೇ, ಮದುವೆ ಹೀಗೆ ನಾನಾ ವಿಚಾರಗಳಿಗೆ ಚಿತ್ರರಂಗದಲ್ಲಿ ಪಾರ್ಟಿ ಆಯೋಜನೆ ಮಾಡಲಾಗುತ್ತದೆ. ಅದರಲ್ಲಿಯೂ ಬಾಲಿವುಡ್​ನಲ್ಲಿ ಈ ಸಂಪ್ರದಾಯ ದೊಡ್ಡ ಮಟ್ಟದಲ್ಲಿ ನಡೆದುಕೊಂಡು ಬಂದಿದೆ.

ಬಾಲಿವುಡ್ ಪಾರ್ಟಿಗಳೆಂದರೆ ಅಕ್ಷಯ್​ ಕುಮಾರ್​​ಗೆ ಅಲರ್ಜಿ? ಇದರ ಹಿಂದಿದೆ ಇಂಟರೆಸ್ಟಿಂಗ್​ ವಿಚಾರ
ಅಕ್ಷಯ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Jun 21, 2021 | 8:36 PM

Share

ಬಾಲಿವುಡ್​ನ ಅನೇಕ ನಟರು ತಮ್ಮದೇ ಆದ ನಿಯಮ ಹಾಕಿಕೊಂಡಿದ್ದಾರೆ. ಆ ನಿಯಮವನ್ನು ಅವರು ಎಂದಿಗೂ ಮೀರಿಲ್ಲ. ನಟ ಆಮೀರ್​ ಖಾನ್​ ಎಂದಿಗೂ ಅವಾರ್ಡ್​ ಫಂಕ್ಷನ್​ಗಳಿಗೆ ತೆರಳುವುದಿಲ್ಲ. ಅದೇ ರೀತಿ ಅಕ್ಷಯ್​ ಕುಮಾರ್​ ಬಾಲಿವುಡ್​ ಪಾರ್ಟಿಗಳಿಗೆ ತೆರಳುವುದಿಲ್ಲವಂತೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಸಿನಿಮಾ ಯಶಸ್ವಿಯಾದ ಖುಷಿಗೆ, ಬರ್ತ್​ಡೇ, ಮದುವೆ ಹೀಗೆ ನಾನಾ ವಿಚಾರಗಳಿಗೆ ಚಿತ್ರರಂಗದಲ್ಲಿ ಪಾರ್ಟಿ ಆಯೋಜನೆ ಮಾಡಲಾಗುತ್ತದೆ. ಅದರಲ್ಲಿಯೂ ಬಾಲಿವುಡ್​ನಲ್ಲಿ ಈ ಸಂಪ್ರದಾಯ ದೊಡ್ಡ ಮಟ್ಟದಲ್ಲಿ ನಡೆದುಕೊಂಡು ಬಂದಿದೆ. ಬಾಲಿವುಡ್​ನ ದೊಡ್ಡ ನಿರ್ಮಾಪಕರಾದ ಕರಣ್​ ಜೋಹರ್​ ಸೇರಿ ಸಾಕಷ್ಟು ಜನರು ಸಣ್ಣ ಸಣ್ಣ ವಿಚಾರಕ್ಕೂ ದೊಡ್ಡ ದೊಡ್ಡ ಫಂಕ್ಷನ್​ ಆಯೋಜನೆ ಮಾಡುತ್ತಾರೆ. ಇದಕ್ಕೆ ಅಕ್ಷಯ್​ಗೂ ಆಹ್ವಾನ ಇರುತ್ತದೆ. ಆದರೆ, ಅವರು ಹೋಗುವುದಿಲ್ಲವಂತೆ. ಈ ಬಗ್ಗೆ ಕಪಿಲ್​ ಶರ್ಮಾ ಶೋನಲ್ಲಿ ಅಕ್ಷಯ್​ ಈ ವಿಚಾರ ಬಾಯ್ಬಿಟ್ಟಿದ್ದಾರೆ.

‘ಅಕ್ಷಯ್​ ನೀವು ಬಾಲಿವುಡ್​ ಪಾರ್ಟಿಗಳಿಗೆ ತೆರಳುವುದಿಲ್ಲವಂತೆ. ನೀವು ಮರಳಿ ಪಾರ್ಟಿ ನೀಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಈ ರೀತಿ ಮಾಡುತ್ತೀರಂತೆ ಹೌದೇ?’ ಎಂದು ಕಪಿಲ್​ ಶರ್ಮಾ ಪ್ರಶ್ನೆ ಮಾಡಿದ್ದರು. ಇದಕ್ಕೆ ಹೌದು ಎನ್ನುವ ಉತ್ತರ ಅಕ್ಷಯ್​ ಕುಮಾರ್​ ಅವರಿಂದ ಬಂತು. ಅಕ್ಷಯ್​ ಮದ್ಯ ಸೇವನೆ ಮಾಡುವುದಿಲ್ಲ. ಸಿಗರೇಟ್​ ಸೇದುವುದಿಲ್ಲ. ಹೀಗಾಗಿ, ಇಂಥ ಪಾರ್ಟಿ ಆಯೋಜನೆ ಮಾಡುವುದು ಮತ್ತು ಅದಕ್ಕೆ ಹೋಗೋದು ಎರಡೂ ಇಷ್ಟವಾಗುವುದಿಲ್ಲ. ಈ ಬಗ್ಗೆ ಕರಣ್​ ಜೋಹರ್​ ಬಳಿಯೂ ಅವರು ಈ ಬಗ್ಗೆ ಮಾತನಾಡಿದ್ದರು.

ಅಕ್ಷಯ್​ ಕುಮಾರ್​ ಅವರು ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಯಶ್​ ರಾಜ್​ ಫಿಲ್ಮ್ಸ್ ನಿರ್ಮಿಸುತ್ತಿರುವ ‘ಪೃಥ್ವಿರಾಜ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಟೈಟಲ್​ ಬದಲಿಸುವಂತೆ ಕರಣಿ ಸೇನಾದವರು ಪಟ್ಟು ಹಿಡಿದಿದ್ದಾರೆ. ಅವರ ನಟನೆಯ, ‘ಸೂರ್ಯವಂಶಿ’ ಹಾಗೂ ‘ಬೆಲ್​ ಬಾಟಮ್​’ ಸಿನಿಮಾ ತೆರೆಗೆ ಬರೋಕೆ ಸಿದ್ಧವಾಗಿದೆ. ರಕ್ಷಾ ಬಂಧನ್​ ಸಿನಿಮಾದ ಶೂಟಿಂಗ್​ ಇಂದಿನಿಂದ ಆರಂಭವಾಗಿದೆ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್