AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಪಾರ್ಟಿಗಳೆಂದರೆ ಅಕ್ಷಯ್​ ಕುಮಾರ್​​ಗೆ ಅಲರ್ಜಿ? ಇದರ ಹಿಂದಿದೆ ಇಂಟರೆಸ್ಟಿಂಗ್​ ವಿಚಾರ

ಸಿನಿಮಾ ಯಶಸ್ವಿಯಾದ ಖುಷಿಗೆ, ಬರ್ತ್​ಡೇ, ಮದುವೆ ಹೀಗೆ ನಾನಾ ವಿಚಾರಗಳಿಗೆ ಚಿತ್ರರಂಗದಲ್ಲಿ ಪಾರ್ಟಿ ಆಯೋಜನೆ ಮಾಡಲಾಗುತ್ತದೆ. ಅದರಲ್ಲಿಯೂ ಬಾಲಿವುಡ್​ನಲ್ಲಿ ಈ ಸಂಪ್ರದಾಯ ದೊಡ್ಡ ಮಟ್ಟದಲ್ಲಿ ನಡೆದುಕೊಂಡು ಬಂದಿದೆ.

ಬಾಲಿವುಡ್ ಪಾರ್ಟಿಗಳೆಂದರೆ ಅಕ್ಷಯ್​ ಕುಮಾರ್​​ಗೆ ಅಲರ್ಜಿ? ಇದರ ಹಿಂದಿದೆ ಇಂಟರೆಸ್ಟಿಂಗ್​ ವಿಚಾರ
ಅಕ್ಷಯ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Jun 21, 2021 | 8:36 PM

Share

ಬಾಲಿವುಡ್​ನ ಅನೇಕ ನಟರು ತಮ್ಮದೇ ಆದ ನಿಯಮ ಹಾಕಿಕೊಂಡಿದ್ದಾರೆ. ಆ ನಿಯಮವನ್ನು ಅವರು ಎಂದಿಗೂ ಮೀರಿಲ್ಲ. ನಟ ಆಮೀರ್​ ಖಾನ್​ ಎಂದಿಗೂ ಅವಾರ್ಡ್​ ಫಂಕ್ಷನ್​ಗಳಿಗೆ ತೆರಳುವುದಿಲ್ಲ. ಅದೇ ರೀತಿ ಅಕ್ಷಯ್​ ಕುಮಾರ್​ ಬಾಲಿವುಡ್​ ಪಾರ್ಟಿಗಳಿಗೆ ತೆರಳುವುದಿಲ್ಲವಂತೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಸಿನಿಮಾ ಯಶಸ್ವಿಯಾದ ಖುಷಿಗೆ, ಬರ್ತ್​ಡೇ, ಮದುವೆ ಹೀಗೆ ನಾನಾ ವಿಚಾರಗಳಿಗೆ ಚಿತ್ರರಂಗದಲ್ಲಿ ಪಾರ್ಟಿ ಆಯೋಜನೆ ಮಾಡಲಾಗುತ್ತದೆ. ಅದರಲ್ಲಿಯೂ ಬಾಲಿವುಡ್​ನಲ್ಲಿ ಈ ಸಂಪ್ರದಾಯ ದೊಡ್ಡ ಮಟ್ಟದಲ್ಲಿ ನಡೆದುಕೊಂಡು ಬಂದಿದೆ. ಬಾಲಿವುಡ್​ನ ದೊಡ್ಡ ನಿರ್ಮಾಪಕರಾದ ಕರಣ್​ ಜೋಹರ್​ ಸೇರಿ ಸಾಕಷ್ಟು ಜನರು ಸಣ್ಣ ಸಣ್ಣ ವಿಚಾರಕ್ಕೂ ದೊಡ್ಡ ದೊಡ್ಡ ಫಂಕ್ಷನ್​ ಆಯೋಜನೆ ಮಾಡುತ್ತಾರೆ. ಇದಕ್ಕೆ ಅಕ್ಷಯ್​ಗೂ ಆಹ್ವಾನ ಇರುತ್ತದೆ. ಆದರೆ, ಅವರು ಹೋಗುವುದಿಲ್ಲವಂತೆ. ಈ ಬಗ್ಗೆ ಕಪಿಲ್​ ಶರ್ಮಾ ಶೋನಲ್ಲಿ ಅಕ್ಷಯ್​ ಈ ವಿಚಾರ ಬಾಯ್ಬಿಟ್ಟಿದ್ದಾರೆ.

‘ಅಕ್ಷಯ್​ ನೀವು ಬಾಲಿವುಡ್​ ಪಾರ್ಟಿಗಳಿಗೆ ತೆರಳುವುದಿಲ್ಲವಂತೆ. ನೀವು ಮರಳಿ ಪಾರ್ಟಿ ನೀಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಈ ರೀತಿ ಮಾಡುತ್ತೀರಂತೆ ಹೌದೇ?’ ಎಂದು ಕಪಿಲ್​ ಶರ್ಮಾ ಪ್ರಶ್ನೆ ಮಾಡಿದ್ದರು. ಇದಕ್ಕೆ ಹೌದು ಎನ್ನುವ ಉತ್ತರ ಅಕ್ಷಯ್​ ಕುಮಾರ್​ ಅವರಿಂದ ಬಂತು. ಅಕ್ಷಯ್​ ಮದ್ಯ ಸೇವನೆ ಮಾಡುವುದಿಲ್ಲ. ಸಿಗರೇಟ್​ ಸೇದುವುದಿಲ್ಲ. ಹೀಗಾಗಿ, ಇಂಥ ಪಾರ್ಟಿ ಆಯೋಜನೆ ಮಾಡುವುದು ಮತ್ತು ಅದಕ್ಕೆ ಹೋಗೋದು ಎರಡೂ ಇಷ್ಟವಾಗುವುದಿಲ್ಲ. ಈ ಬಗ್ಗೆ ಕರಣ್​ ಜೋಹರ್​ ಬಳಿಯೂ ಅವರು ಈ ಬಗ್ಗೆ ಮಾತನಾಡಿದ್ದರು.

ಅಕ್ಷಯ್​ ಕುಮಾರ್​ ಅವರು ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಯಶ್​ ರಾಜ್​ ಫಿಲ್ಮ್ಸ್ ನಿರ್ಮಿಸುತ್ತಿರುವ ‘ಪೃಥ್ವಿರಾಜ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಟೈಟಲ್​ ಬದಲಿಸುವಂತೆ ಕರಣಿ ಸೇನಾದವರು ಪಟ್ಟು ಹಿಡಿದಿದ್ದಾರೆ. ಅವರ ನಟನೆಯ, ‘ಸೂರ್ಯವಂಶಿ’ ಹಾಗೂ ‘ಬೆಲ್​ ಬಾಟಮ್​’ ಸಿನಿಮಾ ತೆರೆಗೆ ಬರೋಕೆ ಸಿದ್ಧವಾಗಿದೆ. ರಕ್ಷಾ ಬಂಧನ್​ ಸಿನಿಮಾದ ಶೂಟಿಂಗ್​ ಇಂದಿನಿಂದ ಆರಂಭವಾಗಿದೆ.

ಬೋಡೋ ಸಾಂಸ್ಕೃತಿಕ ವೈಭವ ವೀಕ್ಷಿಸಿದ ಪ್ರಧಾನಿ ಮೋದಿ
ಬೋಡೋ ಸಾಂಸ್ಕೃತಿಕ ವೈಭವ ವೀಕ್ಷಿಸಿದ ಪ್ರಧಾನಿ ಮೋದಿ
ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ
ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ
ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ
ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ
‘37 ಕೋಟಿ ವೋಟ್ ಅವನಿಗೆ ಬಿದ್ದಿದೆ’; ಹನುಮಂತನ ಪ್ರಕಾರವೂ ಗಿಲ್ಲಿನೇ ವಿನ್ನರ್
‘37 ಕೋಟಿ ವೋಟ್ ಅವನಿಗೆ ಬಿದ್ದಿದೆ’; ಹನುಮಂತನ ಪ್ರಕಾರವೂ ಗಿಲ್ಲಿನೇ ವಿನ್ನರ್
ಕಾರುಗಳಿಗೆ ಡಿಕ್ಕಿ ಹೊಡೆದು, ಟೋಲ್ ಸಿಬ್ಬಂದಿಯ ಎಳೆದೊಯ್ದ ಟ್ರಕ್
ಕಾರುಗಳಿಗೆ ಡಿಕ್ಕಿ ಹೊಡೆದು, ಟೋಲ್ ಸಿಬ್ಬಂದಿಯ ಎಳೆದೊಯ್ದ ಟ್ರಕ್
ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ
ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ