AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಪಾರ್ಟಿಗಳೆಂದರೆ ಅಕ್ಷಯ್​ ಕುಮಾರ್​​ಗೆ ಅಲರ್ಜಿ? ಇದರ ಹಿಂದಿದೆ ಇಂಟರೆಸ್ಟಿಂಗ್​ ವಿಚಾರ

ಸಿನಿಮಾ ಯಶಸ್ವಿಯಾದ ಖುಷಿಗೆ, ಬರ್ತ್​ಡೇ, ಮದುವೆ ಹೀಗೆ ನಾನಾ ವಿಚಾರಗಳಿಗೆ ಚಿತ್ರರಂಗದಲ್ಲಿ ಪಾರ್ಟಿ ಆಯೋಜನೆ ಮಾಡಲಾಗುತ್ತದೆ. ಅದರಲ್ಲಿಯೂ ಬಾಲಿವುಡ್​ನಲ್ಲಿ ಈ ಸಂಪ್ರದಾಯ ದೊಡ್ಡ ಮಟ್ಟದಲ್ಲಿ ನಡೆದುಕೊಂಡು ಬಂದಿದೆ.

ಬಾಲಿವುಡ್ ಪಾರ್ಟಿಗಳೆಂದರೆ ಅಕ್ಷಯ್​ ಕುಮಾರ್​​ಗೆ ಅಲರ್ಜಿ? ಇದರ ಹಿಂದಿದೆ ಇಂಟರೆಸ್ಟಿಂಗ್​ ವಿಚಾರ
ಅಕ್ಷಯ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Jun 21, 2021 | 8:36 PM

Share

ಬಾಲಿವುಡ್​ನ ಅನೇಕ ನಟರು ತಮ್ಮದೇ ಆದ ನಿಯಮ ಹಾಕಿಕೊಂಡಿದ್ದಾರೆ. ಆ ನಿಯಮವನ್ನು ಅವರು ಎಂದಿಗೂ ಮೀರಿಲ್ಲ. ನಟ ಆಮೀರ್​ ಖಾನ್​ ಎಂದಿಗೂ ಅವಾರ್ಡ್​ ಫಂಕ್ಷನ್​ಗಳಿಗೆ ತೆರಳುವುದಿಲ್ಲ. ಅದೇ ರೀತಿ ಅಕ್ಷಯ್​ ಕುಮಾರ್​ ಬಾಲಿವುಡ್​ ಪಾರ್ಟಿಗಳಿಗೆ ತೆರಳುವುದಿಲ್ಲವಂತೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಸಿನಿಮಾ ಯಶಸ್ವಿಯಾದ ಖುಷಿಗೆ, ಬರ್ತ್​ಡೇ, ಮದುವೆ ಹೀಗೆ ನಾನಾ ವಿಚಾರಗಳಿಗೆ ಚಿತ್ರರಂಗದಲ್ಲಿ ಪಾರ್ಟಿ ಆಯೋಜನೆ ಮಾಡಲಾಗುತ್ತದೆ. ಅದರಲ್ಲಿಯೂ ಬಾಲಿವುಡ್​ನಲ್ಲಿ ಈ ಸಂಪ್ರದಾಯ ದೊಡ್ಡ ಮಟ್ಟದಲ್ಲಿ ನಡೆದುಕೊಂಡು ಬಂದಿದೆ. ಬಾಲಿವುಡ್​ನ ದೊಡ್ಡ ನಿರ್ಮಾಪಕರಾದ ಕರಣ್​ ಜೋಹರ್​ ಸೇರಿ ಸಾಕಷ್ಟು ಜನರು ಸಣ್ಣ ಸಣ್ಣ ವಿಚಾರಕ್ಕೂ ದೊಡ್ಡ ದೊಡ್ಡ ಫಂಕ್ಷನ್​ ಆಯೋಜನೆ ಮಾಡುತ್ತಾರೆ. ಇದಕ್ಕೆ ಅಕ್ಷಯ್​ಗೂ ಆಹ್ವಾನ ಇರುತ್ತದೆ. ಆದರೆ, ಅವರು ಹೋಗುವುದಿಲ್ಲವಂತೆ. ಈ ಬಗ್ಗೆ ಕಪಿಲ್​ ಶರ್ಮಾ ಶೋನಲ್ಲಿ ಅಕ್ಷಯ್​ ಈ ವಿಚಾರ ಬಾಯ್ಬಿಟ್ಟಿದ್ದಾರೆ.

‘ಅಕ್ಷಯ್​ ನೀವು ಬಾಲಿವುಡ್​ ಪಾರ್ಟಿಗಳಿಗೆ ತೆರಳುವುದಿಲ್ಲವಂತೆ. ನೀವು ಮರಳಿ ಪಾರ್ಟಿ ನೀಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಈ ರೀತಿ ಮಾಡುತ್ತೀರಂತೆ ಹೌದೇ?’ ಎಂದು ಕಪಿಲ್​ ಶರ್ಮಾ ಪ್ರಶ್ನೆ ಮಾಡಿದ್ದರು. ಇದಕ್ಕೆ ಹೌದು ಎನ್ನುವ ಉತ್ತರ ಅಕ್ಷಯ್​ ಕುಮಾರ್​ ಅವರಿಂದ ಬಂತು. ಅಕ್ಷಯ್​ ಮದ್ಯ ಸೇವನೆ ಮಾಡುವುದಿಲ್ಲ. ಸಿಗರೇಟ್​ ಸೇದುವುದಿಲ್ಲ. ಹೀಗಾಗಿ, ಇಂಥ ಪಾರ್ಟಿ ಆಯೋಜನೆ ಮಾಡುವುದು ಮತ್ತು ಅದಕ್ಕೆ ಹೋಗೋದು ಎರಡೂ ಇಷ್ಟವಾಗುವುದಿಲ್ಲ. ಈ ಬಗ್ಗೆ ಕರಣ್​ ಜೋಹರ್​ ಬಳಿಯೂ ಅವರು ಈ ಬಗ್ಗೆ ಮಾತನಾಡಿದ್ದರು.

ಅಕ್ಷಯ್​ ಕುಮಾರ್​ ಅವರು ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಯಶ್​ ರಾಜ್​ ಫಿಲ್ಮ್ಸ್ ನಿರ್ಮಿಸುತ್ತಿರುವ ‘ಪೃಥ್ವಿರಾಜ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಟೈಟಲ್​ ಬದಲಿಸುವಂತೆ ಕರಣಿ ಸೇನಾದವರು ಪಟ್ಟು ಹಿಡಿದಿದ್ದಾರೆ. ಅವರ ನಟನೆಯ, ‘ಸೂರ್ಯವಂಶಿ’ ಹಾಗೂ ‘ಬೆಲ್​ ಬಾಟಮ್​’ ಸಿನಿಮಾ ತೆರೆಗೆ ಬರೋಕೆ ಸಿದ್ಧವಾಗಿದೆ. ರಕ್ಷಾ ಬಂಧನ್​ ಸಿನಿಮಾದ ಶೂಟಿಂಗ್​ ಇಂದಿನಿಂದ ಆರಂಭವಾಗಿದೆ.

ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್