AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಾಲಿ ಹಾಡನ್ನು ರಿಮೇಕ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ಎಆರ್​ ರೆಹಮಾನ್

‘ಪಿಪ್ಪಾ’ ಸಿನಿಮಾ ಇಂದು (ನವೆಂಬರ್ 10) ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗಿದೆ. ಈ ಚಿತ್ರವನ್ನು ರಾಜ ಕೃಷ್ಣ ಮೆನನ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಬೆಂಗಾಲಿ ಹಾಡನ್ನು ರಿಮೇಕ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ಎಆರ್​ ರೆಹಮಾನ್
ಆರ್​ ರೆಹಮಾನ್
ರಾಜೇಶ್ ದುಗ್ಗುಮನೆ
|

Updated on: Nov 10, 2023 | 2:32 PM

Share

ಇತ್ತೀಚೆಗೆ ಹಾಡುಗಳನ್ನು ರಿಮೇಕ್ ಮಾಡುವ ಟ್ರೆಂಡ್ ಜೋರಾಗಿದೆ. ಇವಗಳ ಪೈಕಿ ಕೆಲವು ವಿವಾದ ಸೃಷ್ಟಿ ಮಾಡಿದ್ದಿದೆ. ಈಗ ಇಶಾನ್ ಖಟ್ಟರ್​, ಮೃಣಾಲ್ ಠಾಕೂರ್ (Mrunal Thakur) ಹಾಗೂ ಪ್ರಿಯಾಂಶು ನಟನೆಯ ‘ಪಿಪ್ಪಾ’ ಸಿನಿಮಾದ ಅವರ ‘ಕರಾ ಓಯಿ ಲೋಹ್ ಕಪತ್’ ಹಾಡು ಸುದ್ದಿ ಆಗುತ್ತಿದೆ. ಇದನ್ನು ಅನೇಕರು ಟೀಕೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರೆಹಮಾನ್ ಅವರನ್ನು ಪ್ರಶ್ನೆ ಮಾಡಲಾಗುತ್ತಿದೆ.

‘ಪಿಪ್ಪಾ’ ಸಿನಿಮಾ ಇಂದು (ನವೆಂಬರ್ 10) ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗಿದೆ. ಈ ಚಿತ್ರವನ್ನು ರಾಜ ಕೃಷ್ಣ ಮೆನನ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದ ‘ಕರಾ ಓಯಿ ಲೋಹ್ ಕಪತ್’ ಹಾಡು ಚರ್ಚೆ ಆಗುತ್ತಿದೆ. ಈ ಹಾಡಿಗೆ ತಮ್ಮದೇ ಶೈಲಿಯಲ್ಲಿ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ ರೆಹಮಾನ್. ಇದನ್ನು ಅನೇಕರು ಟೀಕಿಸಿದ್ದಾರೆ. ಹಾಡಿನ ಉದ್ದೇಶವೇ ಹಾಳಾಗಿದೆ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.

ವಿರೋಧ ಏಕೆ?

ಎಆರ್ ರೆಹಮಾನ್ ಅವರ ಅಧಿಕೃತ ಯೂಟ್ಯೂಬ್​ ಚಾನೆಲ್‌ನಲ್ಲಿ ಎರಡು ದಿನಗಳ ಹಿಂದೆ ಈ ಹಾಡನ್ನು ಬಿಡುಗಡೆ ಮಾಡಲಾಗಿದೆ. ಬಂಗಾಳದ ಜನರ ಭಾವನೆಗಳ ಜೊತೆ ರೆಹಮಾನ್ ಆಟವಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರತಿಭಟನೆಗೆ ಬಳಕೆ ಆಗುತ್ತಿದ್ದ ಪ್ರಭಾವಿ ಹಾಡು ಇದು. ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್​ಚಂದ್ರ ಬೋಸ್ ಅವರ ಫೇವರಿಟ್ ಸಾಂಗ್ ಇದಾಗಿತ್ತು. ವರ್ಷ ಕಳೆದಂತೆ ಅನೇಕರ ಸಂಗೀತ ಸಂಯೋಜಕರು ಈ ಹಾಡನ್ನು ತಮ್ಮದೇ ವರ್ಷನ್​ನಲ್ಲಿ ಕಂಪೋಸ್ ಮಾಡಿದ್ದರು. ಈಗ ರೆಹಮಾನ್ ಕಂಪೋಸ್ ಮಾಡಿರೋ ಹೊಸ ಸಾಂಗ್ ಸಾರ ಕಳೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

ಮ್ಯೂಸಿಕ್ ಪ್ರೋಗ್ರಾಂ ವಿವಾದ

ಕೆಲ ತಿಂಗಳ ಹಿಂದೆ ರೆಹಮಾನ್ ಅವರು ವಿವಾದ ಒಂದಕ್ಕೆ ಗುರಿಯಾಗಿದ್ದರು. ಚೆನ್ನೈನ ಹೊರ ಭಾಗದಲ್ಲಿ ಸ್ಟೇಜ್ ಪ್ರೋಗ್ರಾಂ ನೀಡಿದ್ದರು. ಇದಕ್ಕೆ ಸಿಕ್ಕಾಪಟ್ಟೆ ಜನರು ಬಂದಿದ್ದರು. ಟಿಕೆಟ್ ಇದ್ದ ಹೊರತಾಗಿಯೂ ಅನೇಕರನ್ನು ಒಳಗೆ ಬಿಟ್ಟಿರಲಿಲ್ಲ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಆ ಬಳಿಕ ರೆಹಮಾನ್ ಅವರು ಕ್ಷಮೆ ಕೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ