AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಹಂತದಲ್ಲಿ ಎಡವಿದ ನಮ್ರತಾ ಗೌಡ;  ಎಲಿಮಿನೇಷನ್​ಗೆ ಕಾರಣವಾದ ವಿಚಾರಗಳೇನು?

ನಮ್ರತಾ ಗೌಡ ಆರಂಭದಲ್ಲಿ ವಿನಯ್ ಅವರ ನೆರಳಿನಲ್ಲಿದ್ದರು. ಹೀಗಾಗಿ ಅವರಿಗೆ ಚಮಚ ಎನ್ನುವ ಕುಖ್ಯಾತಿ ಸಿಕ್ಕಿತು. ಇದಾದ ಬಳಿಕ ಅವರು ವಿನಯ್ ಅವರಿಂದ ಅಂತರ ಕಾಯ್ದುಕೊಂಡರು. ಈ ಕಾರಣಕ್ಕೇ ಅವರು ಶೈನ್ ಆದರು.

ಕೊನೆಯ ಹಂತದಲ್ಲಿ ಎಡವಿದ ನಮ್ರತಾ ಗೌಡ;  ಎಲಿಮಿನೇಷನ್​ಗೆ ಕಾರಣವಾದ ವಿಚಾರಗಳೇನು?
ನಮ್ರತಾ
ರಾಜೇಶ್ ದುಗ್ಗುಮನೆ
|

Updated on:Jan 22, 2024 | 7:15 AM

Share

ನಟಿ ನಮ್ರತಾ ಗೌಡ (Namratha Gowda) ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಫಿನಾಲೆ ವಾರಕ್ಕೆ ಒಂದು ದಿನ ಇರುವಾಗ ಅವರು ಔಟ್ ಆಗಿದ್ದಾರೆ. ಇದು ಅವರಿಗೆ ಸಾಕಷ್ಟು ಬೇಸರ ಮೂಡಿಸಿದೆ. ಅವರ ಅಭಿಮಾನಿಗಳು ಕೂಡ ಇದರಿಂದ ಬೇಸರ ಮಾಡಿಕೊಂಡಿದ್ದಾರೆ. ಅವರು ಎಲಿಮಿನೇಷನ್ ಆಗಲು ಸಾಕಷ್ಟು ಕಾರಣಗಳಿವೆ. ಕೊನೆಯ ವಾರದಲ್ಲಿ ಅವರು ಎಡವಿದ್ದು, ಫಿನಾಲೆ ಕನಸು ನುಚ್ಚು ನೂರಾಗಿದೆ.

ನಮ್ರತಾ ಗೌಡ ಆರಂಭದಲ್ಲಿ ವಿನಯ್ ಅವರ ನೆರಳಿನಲ್ಲಿದ್ದರು. ಹೀಗಾಗಿ ಅವರಿಗೆ ಚಮಚ ಎನ್ನುವ ಕುಖ್ಯಾತಿ ಸಿಕ್ಕಿತು. ಇದಾದ ಬಳಿಕ ಅವರು ವಿನಯ್ ಅವರಿಂದ ಅಂತರ ಕಾಯ್ದುಕೊಂಡರು. ಈ ಕಾರಣಕ್ಕೇ ಅವರು ಶೈನ್ ಆದರು. ಅವರಿಗೆ ಉತ್ತಮ, ಕಿಚ್ಚನ ಚಪ್ಪಾಳೆ ಹಾಗೂ ಕ್ಯಾಪ್ಟನ್ ಆಗುವ ಅವಕಾಶ ಸಿಕ್ಕಿತು. ಆದರೆ, ಇತ್ತೀಚೆಗೆ ಕಾರ್ತಿಕ್ ಜೊತೆ ನಡೆದ ಜಗಳ ಅವರಿಗೆ ಹಿನ್ನಡೆ ತಂದಿದೆ ಎನ್ನಲಾಗಿದೆ.

ಕಾರ್ತಿಕ್ ಜೊತೆಗಿನ ಫ್ರೆಂಡ್​​ಶಿಪ್ ಕೆಟ್ಟದಾಗಿ ಕಾಣುತ್ತಿದೆ ಎಂದು ಅನೇಕರು ಹೇಳಿದ್ದರು. ಇದನ್ನು ನಮ್ರತಾ ಗಂಭೀರವಾಗಿ ಪರಿಗಣಿಸಿದರು. ಕಾರ್ತಿಕ್ ಜೊತೆ ಅವರು ಜಗಳಕ್ಕೆ ಇಳಿದರು. ಇದು ಅವರ ಬಿಗ್ ಬಾಸ್ ಜರ್ನಿಗೆ ಹಿನ್ನಡೆ ಉಂಟು ಮಾಡಿತು. ಇತ್ತೀಚಿಗೆ ಅವರು ಸೇಫ್ ಆಟ ಆಡುತ್ತಿದ್ದಾರೆ ಎಂದು ಕೂಡ ಕೆಲವರು ಹೇಳಿದ್ದರು. ಇದು ಸುಳ್ಳು ಎಂದು ಸಾಬೀತು ಮಾಡಿಕೊಳ್ಳೋಕೆ ಅವರಿಗೆ ಸಾಧ್ಯವಾಗಿಲ್ಲ.

ಇದನ್ನೂ ಓದಿ: ಬಿಗ್ ಬಾಸ್ ಎಲಿಮಿನೇಷನ್​ನಲ್ಲಿ ಇರಲಿದೆ ಟ್ವಿಸ್ಟ್; ಯಾವಾಗ ಹೊರ ಹೋಗಲಿದ್ದಾರೆ ಇಬ್ಬರು ಸ್ಪರ್ಧಿಗಳು?

ನಮ್ರತಾ ಗೌಡ ಅವರು ಹೋಗುವಾಗ ಕಣ್ಣೀರು ಹಾಕಿದ್ದಾರೆ. ಸಂಗೀತಾ ಹಾಗೂ ವಿನಯ್​ನ ಹಗ್ ಮಾಡಿ ದುಃಖ ತೋಡಿಕೊಂಡಿದ್ದಾರೆ. ಎಲ್ಲರಿಗೂ ಆಲ್​ ದಿ ಬೆಸ್ಟ್ ಹೇಳಿ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗಿದ್ದಾರೆ. ನಮ್ರತಾ ಅವರಿಗೆ ‘ಬಿಗ್ ಬಾಸ್​’ನಿಂದ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರ ಹಿಂಬಾಲಕರ ಸಂಖ್ಯೆಯೂ ಹೆಚ್ಚಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಬಿಗ್ ಬಾಸ್ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:03 am, Mon, 22 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?