AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಸಿನಿಮಾ ಎದುರು ‘ಹನುಮಾನ್’ ರಿಲೀಸ್ ಮಾಡಿದ್ದೇಕೆ? ಕಾರಣ ನೀಡಿದ ನಿರ್ದೇಶಕ

‘ಹನುಮಾನ್’ ಸಿನಿಮಾದಲ್ಲಿ ತೇಜ ಸಜ್ಜಾ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯ ವ್ಯಕ್ತಿಗೆ ವಿಶೇಷ ಶಕ್ತಿ ದೊರೆಯುತ್ತದೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ. ಹನುಮಂತನ ಪಾತ್ರವನ್ನು ಸ್ಫೂರ್ತಿಯಾಗಿಟ್ಟುಕೊಂಡು ಸಿನಿಮಾ ಮಾಡಲಾಗಿದೆ.

ಮಹೇಶ್ ಬಾಬು ಸಿನಿಮಾ ಎದುರು ‘ಹನುಮಾನ್’ ರಿಲೀಸ್ ಮಾಡಿದ್ದೇಕೆ? ಕಾರಣ ನೀಡಿದ ನಿರ್ದೇಶಕ
ಮಹೇಶ್ ಬಾಬು-ತೇಜ ಸಜ್ಜ
ರಾಜೇಶ್ ದುಗ್ಗುಮನೆ
|

Updated on: Jan 28, 2024 | 3:59 PM

Share

ನಿರ್ದೇಶಕ ಪ್ರಶಾಂತ್ ವರ್ಮಾ ಆ್ಯಕ್ಷನ್ ಕಟ್ ಹೇಳಿದ ‘ಹನುಮಾನ್’ ಸಿನಿಮಾ ಯಶಸ್ಸು ಕಂಡಿತು. ತೇಜ ಸಜ್ಜಾ (Teja Sajja) ನಟನೆಯ ಈ ಸಿನಿಮಾ 250 ಕೋಟಿ ರೂಪಾಯಿ ಗಳಿಕೆ ಮಾಡಿ ಬೀಗಿದೆ. ಈ ಸಿನಿಮಾ ರಿಲೀಸ್ ಆಗಿದ್ದು ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಎದುರು. ಈ ಚಿತ್ರಕ್ಕಿಂತ ‘ಹನುಮಾನ್’ ಸಿನಿಮಾ ಹೆಚ್ಚು ಗಳಿಕೆ ಮಾಡಿದೆ. ಈ ಖುಷಿಯನ್ನು ನಿರ್ದೇಶಕ ಪ್ರಶಾಂತ್ ವರ್ಮಾ ಹಂಚಿಕೊಂಡಿದ್ದಾರೆ. ತಮ್ಮ ಚಿತ್ರವನ್ನು ಮಹೇಶ್ ಬಾಬು ಸಿನಿಮಾ ಎದುರು ರಿಲೀಸ್ ಮಾಡಿದ್ದೇಕೆ ಎನ್ನುವ ಕಾರಣವನ್ನು ಅವರು ನೀಡಿದ್ದಾರೆ.

‘ನಮ್ಮ ಹಾಗೂ ಮಹೇಶ್ ಬಾಬು ಸಿನಿಮಾ ಒಟ್ಟಿಗೆ ರಿಲೀಸ್ ಆದವು. ಮಹೇಶ್ ಬಾಬು ದೊಡ್ಡ ಸ್ಟಾರ್. ಅವರ ವಿರುದ್ಧ ಹೋಗೋಕೆ ಯಾರಿಂದಲೂ ಸಾಧ್ಯವಿಲ್ಲ. ಕನಸಿನಲ್ಲೂ ಯಾರೂ ಈ ರೀತಿ ಅಂದುಕೊಳ್ಳುವುದಿಲ್ಲ. ಅದೂ ಸಂಕ್ರಾಂತಿ ಸಂದರ್ಭದಲ್ಲಿ. ತ್ರಿವಿಕ್ರಂ ಶ್ರೀನಿವಾಸ್ ಜೊತೆಗಿನ ಮಹೇಶ್ ಬಾಬು ಸಿನಿಮಾ ಎಂದಾಗ ಅದು ಮ್ಯಾಡ್ ಕಾಂಬಿನೇಷನ್’ ಎಂದಿದ್ದಾರೆ ಪ್ರಶಾಂತ್ ವರ್ಮಾ. ಆದರೂ ಸಿನಿಮಾ ರಿಲೀಸ್ ಮಾಡುವ ಸಾಹಸಕ್ಕೆ ಪ್ರಶಾಂತ್ ವರ್ಮ ಮುಂದಾದರು.

‘ಮಹೇಶ್ ಬಾಬು ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಒಟ್ಟಾಗಿ ಎರಡು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ನಿರ್ಮಾಣ ಸಂಸ್ಥೆ ತುಂಬಾ ದೊಡ್ಡದು. ಅವರನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ಸಿನಿಮಾದ ಹಿಂದಿ ವರ್ಷನ್ ರಿಲೀಸ್ ಡೇಟ್​ನ ಅನಿಲ್ ತಡಾನಿ ಅನೌನ್ಸ್ ಮಾಡಿ ಬಿಟ್ಟಿದ್ದರು. ಹೀಗಾಗಿ, ನಾವು ರಿಲೀಸ್ ಮಾಡಲೇಬೇಕಾಯಿತು’ ಎಂದಿದ್ದಾರೆ ಪ್ರಶಾಂತ್ ವರ್ಮ.

ಇದನ್ನೂ ಓದಿ: 250 ಕೋಟಿ ರೂಪಾಯಿ ಕಲೆಕ್ಷನ್​; ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಾಧನೆ

‘ಹನುಮಾನ್’ ಸಿನಿಮಾದಲ್ಲಿ ತೇಜ ಸಜ್ಜಾ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯ ವ್ಯಕ್ತಿಗೆ ವಿಶೇಷ ಶಕ್ತಿ ದೊರೆಯುತ್ತದೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ. ಹನುಮಂತನ ಪಾತ್ರವನ್ನು ಸ್ಫೂರ್ತಿಯಾಗಿಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಚಿತ್ರದಿಂದ ಪ್ರಶಾಂತ್ ವರ್ಮಾ ದೊಡ್ಡ ಗೆಲುವು ಕಂಡಿದ್ದಾರೆ. ಇತ್ತೀಚೆಗೆ ಅವರು ‘ಜೈ ಹನುಮಾನ್’ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರದ ಸ್ಕ್ರಿಪ್ಟ್ ಪೂಜೆ ಇತ್ತೀಚೆಗೆ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ