AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಸಿನಿಮಾ ಎದುರು ‘ಹನುಮಾನ್’ ರಿಲೀಸ್ ಮಾಡಿದ್ದೇಕೆ? ಕಾರಣ ನೀಡಿದ ನಿರ್ದೇಶಕ

‘ಹನುಮಾನ್’ ಸಿನಿಮಾದಲ್ಲಿ ತೇಜ ಸಜ್ಜಾ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯ ವ್ಯಕ್ತಿಗೆ ವಿಶೇಷ ಶಕ್ತಿ ದೊರೆಯುತ್ತದೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ. ಹನುಮಂತನ ಪಾತ್ರವನ್ನು ಸ್ಫೂರ್ತಿಯಾಗಿಟ್ಟುಕೊಂಡು ಸಿನಿಮಾ ಮಾಡಲಾಗಿದೆ.

ಮಹೇಶ್ ಬಾಬು ಸಿನಿಮಾ ಎದುರು ‘ಹನುಮಾನ್’ ರಿಲೀಸ್ ಮಾಡಿದ್ದೇಕೆ? ಕಾರಣ ನೀಡಿದ ನಿರ್ದೇಶಕ
ಮಹೇಶ್ ಬಾಬು-ತೇಜ ಸಜ್ಜ
ರಾಜೇಶ್ ದುಗ್ಗುಮನೆ
|

Updated on: Jan 28, 2024 | 3:59 PM

Share

ನಿರ್ದೇಶಕ ಪ್ರಶಾಂತ್ ವರ್ಮಾ ಆ್ಯಕ್ಷನ್ ಕಟ್ ಹೇಳಿದ ‘ಹನುಮಾನ್’ ಸಿನಿಮಾ ಯಶಸ್ಸು ಕಂಡಿತು. ತೇಜ ಸಜ್ಜಾ (Teja Sajja) ನಟನೆಯ ಈ ಸಿನಿಮಾ 250 ಕೋಟಿ ರೂಪಾಯಿ ಗಳಿಕೆ ಮಾಡಿ ಬೀಗಿದೆ. ಈ ಸಿನಿಮಾ ರಿಲೀಸ್ ಆಗಿದ್ದು ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಎದುರು. ಈ ಚಿತ್ರಕ್ಕಿಂತ ‘ಹನುಮಾನ್’ ಸಿನಿಮಾ ಹೆಚ್ಚು ಗಳಿಕೆ ಮಾಡಿದೆ. ಈ ಖುಷಿಯನ್ನು ನಿರ್ದೇಶಕ ಪ್ರಶಾಂತ್ ವರ್ಮಾ ಹಂಚಿಕೊಂಡಿದ್ದಾರೆ. ತಮ್ಮ ಚಿತ್ರವನ್ನು ಮಹೇಶ್ ಬಾಬು ಸಿನಿಮಾ ಎದುರು ರಿಲೀಸ್ ಮಾಡಿದ್ದೇಕೆ ಎನ್ನುವ ಕಾರಣವನ್ನು ಅವರು ನೀಡಿದ್ದಾರೆ.

‘ನಮ್ಮ ಹಾಗೂ ಮಹೇಶ್ ಬಾಬು ಸಿನಿಮಾ ಒಟ್ಟಿಗೆ ರಿಲೀಸ್ ಆದವು. ಮಹೇಶ್ ಬಾಬು ದೊಡ್ಡ ಸ್ಟಾರ್. ಅವರ ವಿರುದ್ಧ ಹೋಗೋಕೆ ಯಾರಿಂದಲೂ ಸಾಧ್ಯವಿಲ್ಲ. ಕನಸಿನಲ್ಲೂ ಯಾರೂ ಈ ರೀತಿ ಅಂದುಕೊಳ್ಳುವುದಿಲ್ಲ. ಅದೂ ಸಂಕ್ರಾಂತಿ ಸಂದರ್ಭದಲ್ಲಿ. ತ್ರಿವಿಕ್ರಂ ಶ್ರೀನಿವಾಸ್ ಜೊತೆಗಿನ ಮಹೇಶ್ ಬಾಬು ಸಿನಿಮಾ ಎಂದಾಗ ಅದು ಮ್ಯಾಡ್ ಕಾಂಬಿನೇಷನ್’ ಎಂದಿದ್ದಾರೆ ಪ್ರಶಾಂತ್ ವರ್ಮಾ. ಆದರೂ ಸಿನಿಮಾ ರಿಲೀಸ್ ಮಾಡುವ ಸಾಹಸಕ್ಕೆ ಪ್ರಶಾಂತ್ ವರ್ಮ ಮುಂದಾದರು.

‘ಮಹೇಶ್ ಬಾಬು ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಒಟ್ಟಾಗಿ ಎರಡು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ನಿರ್ಮಾಣ ಸಂಸ್ಥೆ ತುಂಬಾ ದೊಡ್ಡದು. ಅವರನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ಸಿನಿಮಾದ ಹಿಂದಿ ವರ್ಷನ್ ರಿಲೀಸ್ ಡೇಟ್​ನ ಅನಿಲ್ ತಡಾನಿ ಅನೌನ್ಸ್ ಮಾಡಿ ಬಿಟ್ಟಿದ್ದರು. ಹೀಗಾಗಿ, ನಾವು ರಿಲೀಸ್ ಮಾಡಲೇಬೇಕಾಯಿತು’ ಎಂದಿದ್ದಾರೆ ಪ್ರಶಾಂತ್ ವರ್ಮ.

ಇದನ್ನೂ ಓದಿ: 250 ಕೋಟಿ ರೂಪಾಯಿ ಕಲೆಕ್ಷನ್​; ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಾಧನೆ

‘ಹನುಮಾನ್’ ಸಿನಿಮಾದಲ್ಲಿ ತೇಜ ಸಜ್ಜಾ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯ ವ್ಯಕ್ತಿಗೆ ವಿಶೇಷ ಶಕ್ತಿ ದೊರೆಯುತ್ತದೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ. ಹನುಮಂತನ ಪಾತ್ರವನ್ನು ಸ್ಫೂರ್ತಿಯಾಗಿಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಚಿತ್ರದಿಂದ ಪ್ರಶಾಂತ್ ವರ್ಮಾ ದೊಡ್ಡ ಗೆಲುವು ಕಂಡಿದ್ದಾರೆ. ಇತ್ತೀಚೆಗೆ ಅವರು ‘ಜೈ ಹನುಮಾನ್’ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರದ ಸ್ಕ್ರಿಪ್ಟ್ ಪೂಜೆ ಇತ್ತೀಚೆಗೆ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು