AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ರಘು ಹೆಂಡತಿ ತನ್ನ ಪತಿ ಬದಲು ವೈಷ್ಣವಿಗೆ ವೋಟ್​ ಮಾಡಿದ್ದೇಕೆ?

Vaishnavi: ವೈಷ್ಣವಿ ಅವರದ್ದು ಎಲ್ಲರಿಗೂ ಇಷ್ಟವಾಗುವ ಗುಣ. ಹೀಗಾಗಿ, ಅವರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದು ತುಂಬಾನೇ ಕಡಿಮೆ. ನಾಮಿನೇಟ್​ ಆದರೂ ಅವರು ಸುಲಭವಾಗಿ ಬಚಾವ್​ ಆಗಿದ್ದಾರೆ.

Bigg Boss Kannada: ರಘು ಹೆಂಡತಿ ತನ್ನ ಪತಿ ಬದಲು ವೈಷ್ಣವಿಗೆ ವೋಟ್​ ಮಾಡಿದ್ದೇಕೆ?
ರಘು ಗೌಡ-ವಿದ್ಯಾಶ್ರೀ
ರಾಜೇಶ್ ದುಗ್ಗುಮನೆ
| Edited By: |

Updated on:May 03, 2021 | 4:41 PM

Share

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ನಾಮಿನೇಟ್​ ಆದಾಗ ಕುಟುಂಬದವರು, ನೆಂಟರಿಷ್ಟರು, ಅಭಿಮಾನಿಗಳು ಅವರಿಗೆ ವೋಟ್​ ಮಾಡುತ್ತಾರೆ. ಆದರೆ, ಬಿಗ್​ ಬಾಸ್​ ಮನೆ ಸೇರಿರುವ ರಘು ಗೌಡ ವಿಚಾರದಲ್ಲಿ ಇದು ಉಲ್ಟಾ ಆಗಿರಬಹುದು. ಅವರ ಹೆಂಡತಿ ರಘುಗೆ ವೋಟ್​ ಮಾಡುವ ಬದಲು ವೈಷ್ಣವಿಗೆ ವೋಟ್​ ಮಾಡಿದ್ದಾರಂತೆ! ಇದಕ್ಕೆ ಕಾರಣವನ್ನು ಕೂಡ ರಘು ಬಿಚ್ಚಿಟ್ಟಿದ್ದಾರೆ.

ವೈಷ್ಣವಿ ಅವರದ್ದು ಎಲ್ಲರಿಗೂ ಇಷ್ಟವಾಗುವ ಗುಣ. ಹೀಗಾಗಿ, ಅವರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದು ತುಂಬಾನೇ ಕಡಿಮೆ. ನಾಮಿನೇಟ್​ ಆದರೂ ಅವರು ಸುಲಭವಾಗಿ ಬಚಾವ್​ ಆಗಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಿರುವುದರಿಂದ ಅವರಿಗೆ ಹೆಚ್ಚು ಮತ ಬಿದ್ದಿದೆ. ಅಷ್ಟಕ್ಕೂ ಅವರ ಅಭಿಮಾನಿ ಬಳಗ ದೊಡ್ಡದಾಗೋಕೆ ಕಾರಣ ಏನು ಎನ್ನುವುದನ್ನು ರಘು ಹಾಗೂ ಮಂಜು ವಿವರಿಸಿದ್ದಾರೆ.

ವೈಷ್ಣವಿ ಮನೆಯ ಗಾರ್ಡನ್​ ಏರಿಯಾದಲ್ಲಿ ಕುಳಿತು ಧ್ಯಾನ ಮಾಡುತ್ತಿದ್ದರು. ಆಗ ಅಲ್ಲಿದ್ದ ಮಂಜು ಹಾಗೂ ರಘು, ವೈಷ್ಣವಿ ಕಾಲೆಳೆಯೋಕೆ ಆರಂಭಿಸಿದ್ದಾರೆ. ರಘುಗೆ ಒಳ್ಳೆದಾಗ್ಲಿ. ಅವನ ಬಾಳು ಬಂಗಾರ ಆಗಲಿ. ನನ್ನ ಪಾಲಿನ ಸುಖ ಅವನಿಗೆ ಹೋಗಲಿ. ನನ್ನ ಪೇಮೆಂಟ್​ ರಘು ಖಾತೆಗೆ ಹೋಗಲಿ ಎಂದು ವೈಷ್ಣವಿ ಬೇಡಿಕೊಳ್ಳುತ್ತಿದ್ದಾರೆ ಎಂದರು ರಘು. ಆಗ ಮಂಜು, ದೇವರೇ ಅವನು ಹೇಳಿದ್ದು ಬೇಗೆ ಸುಳ್ಳಾಗಲಿ ಎಂದರು.

ಈ ಸಂಭಾಷಣೆ ಕೇಳುತ್ತಿದ್ದ ವೈಷ್ಣವಿ ನಕ್ಕಿದ್ದಾರೆ. ಯಾಕೆ ನಗ್ತೀರಾ? ಏಕಾಗ್ರತೆಯೇ ಇಲ್ಲ. ವೈಷ್ಣವಿ ಕಣ್ಮು ಮುಚ್ಚಿಕೊಂಡು ನಾಟಕ ಆಡ್ತಾಳೆ. ಕ್ಯಾಮೆರಾ ಮೆನ್​ ಪಾಪ ಇವಳು ಧ್ಯಾನ ಮಾಡ್ತಾಳೆ ಅಂದುಕೊಂಡಿರುತ್ತಾನೆ. ಏಳುವರೆ ಕೋಟಿ ಜನರನ್ನು ನೀನು ಯಾಮಾರಿಸಿಬಿಟ್ಟೆಯಲ್ಲಮ್ಮ ಎಂದು ಮಂಜು ಹೇಳಿದರು.

ಆಗ ರಘು ಮಾತು ಆರಂಭಿಸಿದರು. ನನಗೆ ಬಂಟಿ ಬಂಟಿ ಎಂದು ನಾಯಿ ಲವರ್ಸ್​ ವೋಟ್ ಪಡೆದುಕೊಂಡರು. ಧ್ಯಾನ ಮಾಡುವ ಮೂಲಕ ಯೋಗ ಹಾಗೂ ಜಿಮ್​ ಮಾಡುವವರ ವೋಟ್ ಪಡೆದುಕೊಂಡರು​. ಕಿಚನ್​ನಲ್ಲಿದ್ದಾಗ ಆಂಟಿಯರ ವೋಟ್, ಜೀನ್ಸ್ ಹಾಕಿಕೊಂಡು​ ಟಾಂ ಬಾಯ್ಸ್​ ವೋಟ್ ಸಿಕ್ಕಿದೆ. ಸಖತ್​ ಆಗಿ ಡ್ರೆಸ್​ ಮಾಡಿಕೊಂಡಿದ್ದನ್ನು ನೋಡಿ ನನ್ನ ಹೆಂಡ್ತಿನೇ ಇವಳಿಗೆ ವೋಟ್​ ಮಾಡಿರ್ತಾಳೆ ಎಂದರು. ಇದನ್ನು ಕೇಳಿ ಮೂವರು ನಕ್ಕರು.

ಇದನ್ನೂ ಓದಿ: ವೈಷ್ಣವಿ ಜತೆ ರಘು ಗೌಡ ಕ್ಲೋಸ್​ ಆಗಿರೋ ಬಗ್ಗೆ ಅವರ ಪತ್ನಿ ವಿದ್ಯಾಶ್ರೀ ಹೇಳಿದ್ದೇನು?

ಕ್ಯಾಪ್ಟನ್​ ಆದ ಮರುದಿನವೇ ಚಕ್ರವರ್ತಿಗೆ ದ್ರೋಹ ಬಗೆದ ರಘು; ಮಾಡಿದ ಸಹಾಯ ಇಷ್ಟು ಬೇಗ ಮರೆತೋಯ್ತಾ?

Published On - 3:42 pm, Mon, 3 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?