AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಿಸು’ದಲ್ಲಿ ರಶ್ಮಿಕಾ ಮಂದಣ್ಣ ಪಾತ್ರಕ್ಕಿಲ್ಲ ತೂಕ; ಈ ಸಿನಿಮಾ ಮಾಡಿದ್ದಕ್ಕೆ ಕಾರಣ ತಿಳಿಸಿದ ನಟಿ  

ರಶ್ಮಿಕಾ ಮಂದಣ್ಣ ಅವರ ನಟನೆಯ ‘ವಾರಿಸು’ ಸಿನಿಮಾ ಸಂಕ್ರಾಂತಿ ನಿಮಿತ್ತ ಜನವರಿ 11ರಂದು ರಿಲೀಸ್ ಆಯಿತು. ಈ ಚಿತ್ರವನ್ನು ಪ್ರೇಕ್ಷಕರು ಇಷ್ಟಪಟ್ಟರು. ಈ ಸಿನಿಮಾದಲ್ಲಿ ರಶ್ಮಿಕಾ ಆರಂಭದಲ್ಲಿ ಕೆಲವು ದೃಶ್ಯಗಳಲ್ಲಿ ಬರುತ್ತಾರೆ.

‘ವಾರಿಸು’ದಲ್ಲಿ ರಶ್ಮಿಕಾ ಮಂದಣ್ಣ ಪಾತ್ರಕ್ಕಿಲ್ಲ ತೂಕ; ಈ ಸಿನಿಮಾ ಮಾಡಿದ್ದಕ್ಕೆ ಕಾರಣ ತಿಳಿಸಿದ ನಟಿ  
ವಿಜಯ್-ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on:Jan 23, 2023 | 11:00 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ವಾರಿಸು’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರ ಪಾತ್ರಕ್ಕೆ ಈ ಸಿನಿಮಾದಲ್ಲಿ ತೂಕವಿಲ್ಲ. ಕೆಲವೇ ಕೆಲವು ಹಾಡು ಹಾಗೂ ದೃಶ್ಯಗಳಿಗೆ ಸೀಮಿತವಾಗಿದ್ದಾರೆ. ಕೆಲವೊಮ್ಮೆ ಹೀರೋಯಿನ್​​ಗಳು ತೂಕವಿಲ್ಲದ ಪಾತ್ರ ಎಂದಾಗ ಒಪ್ಪಿಕೊಳ್ಳುವುದಿಲ್ಲ. ಆದರೆ, ರಶ್ಮಿಕಾ ಮಂದಣ್ಣ ಆ ರೀತಿ ಮಾಡಿಲ್ಲ. ‘ವಾರಿಸು’ (Varisu Movie) ಚಿತ್ರವನ್ನು ಒಪ್ಪಿಕೊಂಡು ನಟಿಸಿದರು. ಇದು ಏಕೆ ಎನ್ನುವ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ನಟನೆಯ ‘ವಾರಿಸು’ ಸಿನಿಮಾ ಸಂಕ್ರಾಂತಿ ನಿಮಿತ್ತ ಜನವರಿ 11ರಂದು ರಿಲೀಸ್ ಆಯಿತು. ಈ ಚಿತ್ರವನ್ನು ಪ್ರೇಕ್ಷಕರು ಇಷ್ಟಪಟ್ಟರು. ಈ ಸಿನಿಮಾದಲ್ಲಿ ರಶ್ಮಿಕಾ ಆರಂಭದಲ್ಲಿ ಕೆಲವು ದೃಶ್ಯಗಳಲ್ಲಿ ಬರುತ್ತಾರೆ. ಮರಸುತ್ತುವ ಪಾತ್ರಕ್ಕೆ ಅವರು ಸೀಮಿತವಾಗಿದ್ದಾರೆ. ಒಂದೆರಡು ಹಾಡುಗಳಲ್ಲಿ ಅವರು ಹೆಜ್ಜೆ ಹಾಕಿದ್ದಾರೆ. ‘ರಂಜಿದಮೆ..’ ಹಾಡು ಹಿಟ್ ಆಗಿದೆ. ಈಗ ಅವರು ಈ ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಕಾರಣ ನೀಡಿದ್ದಾರೆ.

‘ಈ ಚಿತ್ರವನ್ನು ನಾನೇ ಆಯ್ಕೆ ಮಾಡಿಕೊಂಡಿದ್ದು. ನನಗೆ ಗೊತ್ತಿತ್ತು ಈ ಸಿನಿಮಾದಲ್ಲಿ ನನಗಿರೋದು ಕೇವಲ ಎರಡು ಹಾಡುಗಳು ಮಾತ್ರ ಅಂತ. ಅದರಲ್ಲೇ ನಾನು ಗಮನಸೆಳೆಯಬೇಕು ಎಂದುಕೊಂಡಿದ್ದೆ. ನಾನು ವಿಜಯ್ ಅವರ ಬಳಿ ಈ ಮಾತನ್ನು ಹೇಳಿದ್ದೆ’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

‘ನನಗೆ ವಿಜಯ್ ಅವರ ಜತೆ ನಟಿಸಬೇಕು ಎಂದಿತ್ತು. ಅವರು ನನಗೆ ಮೊದಲಿನಿಂದಲೂ ಅಚ್ಚುಮೆಚ್ಚು. ಹೀಗಾಗಿ ನಾನು ಈ ಚಿತ್ರವನ್ನು ಒಪ್ಪಿಕೊಂಡೆ. ಓರ್ವ ಕಲಾವಿದನಾಗಿ ಸೆಟ್‌ಗೆ ಹೋಗುವುದು ಮತ್ತು ಅಲ್ಲಿ ಕೆಲಸ ಮಾಡುತ್ತಿರುವವರಿಂದ ಸಣ್ಣ ವಿಷಯಗಳನ್ನು ಕಲಿತುಕೊಳ್ಳುವುದು ಮುಖ್ಯ’ ಎಂದು ಮಾಹಿತಿ ನೀಡಿದ್ದಾರೆ ರಶ್ಮಿಕಾ.

ಇದನ್ನೂ ಓದಿ: ‘ವೃತ್ತಿ ಜೀವನದ ಆರಂಭದಲ್ಲೇ ಆ ತಪ್ಪು ಮಾಡಿದೆ’; ಈಗಲೂ ಮರುಗುತ್ತಿದ್ದಾರೆ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ನಟನೆಯ ‘ಮಿಷನ್ ಮಜ್ನು’ ಚಿತ್ರ ಇತ್ತೀಚೆಗೆ ಒಟಿಟಿಯಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ರಶ್ಮಿಕಾ ಅವರು ಅಂಧ ಪಾಕ್ ಯುವತಿಯ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರ ಪಾತ್ರಕ್ಕೆ ಸ್ಕೋಪ್ ಇದೆ. ಅವರ ಪಾತ್ರವನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಈ ಚಿತ್ರಕ್ಕೂ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:20 am, Mon, 23 January 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ