AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಹುಟ್ಟಿದ ಜಾಗದಲ್ಲೇ ವರುಣ್ ತೇಜ್​-ಲಾವಣ್ಯ ತ್ರಿಪಾಠಿ ಮದುವೆ

ವರುಣ್ ತೇಜ್ ಮತ್ತು ಲಾವಣ್ಯ ಎರಡು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು. ‘ಮಿಸ್ಟರ್’ ಸಿನಿಮಾದ ಶೂಟಿಂಗ್ ವೇಳೆ ಇವರಿಬ್ಬರ ನಡುವೆ ಪ್ರೀತಿ ಮೂಡಿದೆ ಎನ್ನಲಾಗಿದೆ. ಈಗ ಇವರು ಡೆಸ್ಟಿನೇಷನ್ ವೆಡ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣ ಸಿಕ್ಕಿದೆ.

ಪ್ರೀತಿ ಹುಟ್ಟಿದ ಜಾಗದಲ್ಲೇ ವರುಣ್ ತೇಜ್​-ಲಾವಣ್ಯ ತ್ರಿಪಾಠಿ ಮದುವೆ
ಲಾವಣ್ಯ-ವರುಣ್ ತೇಜ್
ರಾಜೇಶ್ ದುಗ್ಗುಮನೆ
|

Updated on: Oct 30, 2023 | 12:06 PM

Share

ಮೆಗಾ ಫ್ಯಾಮಿಲಿ ಮನೆಯಲ್ಲಿ ಮದುವೆಗೆ ಭರ್ಜರಿ ತಯಾರಿ ನಡೆದಿದೆ. ವರುಣ್ ತೇಜ್ (Varun Tej) ಹಾಗೂ ಲಾವಣ್ಯ ತ್ರಿಪಾಠಿ ಶೀಘ್ರವೇ ಹಸೆಮಣೆ ಏರಲಿದ್ದಾರೆ. ಕುಟುಂಬದ ಎಲ್ಲಾ ಸದಸ್ಯರು ಈಗಾಗಲೇ ಇಟಲಿ ತಲುಪಿದ್ದಾರೆ. ಮೆಹಂದಿ ಕಾರ್ಯಕ್ರಮ, ಸಂಗೀತ ಕಾರ್ಯಕ್ರಮ, ಹಳದಿ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 1ರಂದು ಅದ್ದೂರಿ ಮದುವೆ ನಡೆಯಲಿದೆ. ಈ ಜೋಡಿ ಮದುವೆ ಆಗಲು ಇಟಲಿಯನ್ನೇ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣ ಇದೆ ಎನ್ನಲಾಗುತ್ತಿದೆ ಆ ಬಗ್ಗೆ ಇಲ್ಲಿದೆ ಮಾಹಿತಿ.

ವರುಣ್ ತೇಜ್ ಮತ್ತು ಲಾವಣ್ಯ ಎರಡು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು. ಶ್ರೀನು ವೈಟ್ಲ ನಿರ್ದೇಶನದ ‘ಮಿಸ್ಟರ್’ ಚಿತ್ರ ಹಾಗೂ ಸಂಕಲ್ಪ್ ರೆಡ್ಡಿ ನಿರ್ದೇಶನದ ‘ಅಂತರಿಕ್ಷಮ್ 9000 ಕೆಎಂಪಿಎಚ್​’ ಚಿತ್ರಗಳಲ್ಲಿ ಇವರು ತೆರೆ ಹಂಚಿಕೊಂಡಿದ್ದರು. ‘ಮಿಸ್ಟರ್’ ಸಿನಿಮಾದ ಶೂಟಿಂಗ್ ವೇಳೆ ಇವರಿಬ್ಬರ ನಡುವೆ ಪ್ರೀತಿ ಮೂಡಿದೆ ಎನ್ನಲಾಗಿದೆ. ಈಗ ಇವರು ಡೆಸ್ಟಿನೇಷನ್ ವೆಡ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣ ಸಿಕ್ಕಿದೆ.

ವರುಣ್ ಮತ್ತು ತೇಜ್ ಲಾವಣ್ಯ ಇಟಲಿಯಲ್ಲಿ ಏಕೆ ಮದುವೆ ಆಗುತ್ತಿದ್ದಾರೆ ಎಂಬುದು ಹಲವರ ಪ್ರಶ್ನೆ ಆಗಿತ್ತು. ಇದಕ್ಕೆ ಉತ್ತರ ‘ಮಿಸ್ಟರ್’ ಸಿನಿಮಾ. ಇವರಿಬ್ಬರು ಜೊತೆಯಾಗಿ ನಟಿಸಿದ ಮೊದಲ ಸಿನಿಮಾ ‘ಮಿಸ್ಟರ್’ ಚಿತ್ರೀಕರಣ ಇಟಲಿಯಲ್ಲಿ ನಡೆದಿದೆ. ಅಲ್ಲಿಯೇ ವರುಣ್ ತೇಜ್ ಅವರು ಲಾವಣ್ಯ ಎದುರು ಪ್ರೇಮ ನಿವೇದನೆ ಮಾಡಿಕೊಂಡಿದ್ದರು. ಪ್ರೀತಿ ಹುಟ್ಟಿದ ದೇಶದಲ್ಲೇ ಇವರು ಮದುವೆ ಆಗಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಇಟಲಿಯಲ್ಲಿ ಮದುವೆ ಆಗಲಿದ್ದಾರೆ ವರುಣ್ ತೇಜ್-ಲಾವಣ್ಯ; ಆಮಂತ್ರಣ ಪತ್ರ ವೈರಲ್

ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಮಾತ್ರ ಮದುವೆಗೆ ಹಾಜರಿ ಹಾಕುತ್ತಿದ್ದಾರೆ. ನವೆಂಬರ್ 1ರಂದು ಇವರ ಮದುವೆ ಅದ್ದೂರಿಯಾಗಿ ನಡೆಯಲಿದೆ. ಆ ಬಳಿಕ ನವೆಂಬರ್ 5ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಈ ಆರತಕ್ಷತೆಯಲ್ಲಿ ಟಾಲಿವುಡ್ ಮತ್ತು ಬಾಲಿವುಡ್ ಸೆಲೆಬ್ರಿಟಿಗಳು ಹಾಗೂ ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು