AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ

2004ರ ನವೆಂಬರ್ 18ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗ ದಂಪತಿ ವಿಚ್ಛೇದನ ಘೋಷಿಸಿರುವುದು ಅವರ ಅಭಿಮಾನಿಗಳಿಗೆ ನೋವು ತರಿಸಿದೆ.

ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ
ಧನುಷ್​-ಐಶ್ವರ್ಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 20, 2022 | 2:09 PM

Share

ಧನುಷ್​ (Dhanush) ಹಾಗೂ ಐಶ್ವರ್ಯಾ (Aishwarya Rajinikanth) ನಡುವಣ 18 ವರ್ಷಗಳ ಸಂಬಂಧ ಮುರಿದು ಬಿದ್ದಿದೆ. ಇದು ಅವರ ಅಭಿಮಾನಿಗಳಿಗೆ ಶಾಕ್​ ನೀಡಿದೆ. ಧನುಷ್​ ಹಾಗೂ ಐಶ್ವರ್ಯಾ ನಡುವೆ ಯಾವ ವಿಚಾರಕ್ಕೆ ವೈಮನಸ್ಸು ಮೂಡಿತು ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ಹೈದರಾಬಾದ್​ನಲ್ಲಿ ನಡೆದ ಘಟನೆಯೊಂದರ ವಿಚಾರ ಈಗ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಧನುಷ್​ ಹಾಗೂ ಐಶ್ವರ್ಯಾ ದಾಂಪತ್ಯ ಮುರಿದು ಬೀಳಲು ಅಲ್ಲಿ ನಡೆದ ಘಟನೆ ಪ್ರಮುಖ ಕಾರಣವಾಯಿತು ಎನ್ನುವ ಮಾತು ಕೇಳಿ ಬಂದಿದೆ.

2004ರ ನವೆಂಬರ್ 18ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗ ದಂಪತಿ ವಿಚ್ಛೇದನ ಘೋಷಿಸಿರುವುದು ಅವರ ಅಭಿಮಾನಿಗಳಿಗೆ ನೋವು ತರಿಸಿದೆ. ವಿಶೇಷ ಎಂದರೆ, ಐಶ್ವರ್ಯಾ ಹಾಗೂ ಧನುಷ್​ ಅವರದ್ದು ಪ್ರೇಮ ವಿವಾಹ. 21ನೇ ವಯಸ್ಸಿಗೆ ಐಶ್ವರ್ಯಾ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು ಧನುಷ್​. 18 ವರ್ಷಗಳ ಕಾಲ ದಾಂಪತ್ಯ ನಡೆಸಿದ ಇಬ್ಬರೂ ಈಗ ಬೇರೆ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರ ತರಿಸಿದೆ.

ಕೆಲಸದ ನಿಮಿತ್ತ ಇಬ್ಬರೂ ಹೈದರಾಬಾದ್​ನಲ್ಲಿ ಇದ್ದಾರೆ. ಹೈದರಾಬಾದ್​ನಲ್ಲಿ ಇಬ್ಬರ ನಡುವೆ ಯಾವುದೋ ಒಂದು ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಜಗಳ ಏರ್ಪಟ್ಟಿದೆ ಎನ್ನಲಾಗಿದೆ. ಆ ಬಳಿಕ ಇಬ್ಬರೂ ವಿಚ್ಛೇದನ ಪಡೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಧನುಷ್​ ನಟನೆಯ ‘3’ ಚಿತ್ರವನ್ನು ಐಶ್ವರ್ಯಾ ರಜನಿಕಾಂತ್​ ಅವರೇ ನಿರ್ದೇಶನ ಮಾಡಿದ್ದರು. ಈ ಚಿತ್ರ ತೆರೆಗೆ ಬಂದ ನಂತರದಲ್ಲಿ ಇಬ್ಬರೂ ಬೇರೆ ಆಗುತ್ತಾರೆ ಎನ್ನುವ ವದಂತಿ ಹುಟ್ಟಿಕೊಂಡಿತ್ತು. ಆದರೆ, ಅದು ನಿಜವಾಗಿರಲಿಲ್ಲ. ಈ ಸಿನಿಮಾ ತೆರೆಕಂಡು ಸುಮಾರು 10 ವರ್ಷಗಳ ನಂತರದಲ್ಲಿ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಕೆಲವು ವರದಿಗಳ ಪ್ರಕಾರ ಇಬ್ಬರ ನಡುವೆ ಹಲವು ವರ್ಷಗಳಿಂದ ಕಿತ್ತಾಟ ನಡೆದೇ ಇತ್ತು ಎನ್ನಲಾಗಿದೆ. ಈಗ ಇಬ್ಬರೂ ಒಟ್ಟಾಗಿ ಬೇರೆ ಆಗುವ ನಿರ್ಧಾರ ತೆಗೆದುಕೊಂಡರು ಎನ್ನಲಾಗಿದೆ.

ಇದನ್ನೂ ಓದಿ: ಧನುಷ್​-ಐಶ್ವರ್ಯಾ ಲವ್​ ಸ್ಟೋರಿ; 21ನೇ ವಯಸ್ಸಿಗೆ ಪ್ರೀತಿಸಿ ಮದುವೆ ಆಗಿದ್ದ ನಟ

‘ಧನುಷ್​-ಐಶ್ವರ್ಯಾ ವಿಚ್ಛೇದನ ಪಡೆದಿಲ್ಲ, ಇದು ಸಣ್ಣ ಜಗಳ ಅಷ್ಟೇ’; ಧನುಷ್ ತಂದೆ ಅಚ್ಚರಿಯ ಹೇಳಿಕೆ​

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ