ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ

2004ರ ನವೆಂಬರ್ 18ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗ ದಂಪತಿ ವಿಚ್ಛೇದನ ಘೋಷಿಸಿರುವುದು ಅವರ ಅಭಿಮಾನಿಗಳಿಗೆ ನೋವು ತರಿಸಿದೆ.

ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ
ಧನುಷ್​-ಐಶ್ವರ್ಯಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 20, 2022 | 2:09 PM

ಧನುಷ್​ (Dhanush) ಹಾಗೂ ಐಶ್ವರ್ಯಾ (Aishwarya Rajinikanth) ನಡುವಣ 18 ವರ್ಷಗಳ ಸಂಬಂಧ ಮುರಿದು ಬಿದ್ದಿದೆ. ಇದು ಅವರ ಅಭಿಮಾನಿಗಳಿಗೆ ಶಾಕ್​ ನೀಡಿದೆ. ಧನುಷ್​ ಹಾಗೂ ಐಶ್ವರ್ಯಾ ನಡುವೆ ಯಾವ ವಿಚಾರಕ್ಕೆ ವೈಮನಸ್ಸು ಮೂಡಿತು ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ಹೈದರಾಬಾದ್​ನಲ್ಲಿ ನಡೆದ ಘಟನೆಯೊಂದರ ವಿಚಾರ ಈಗ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಧನುಷ್​ ಹಾಗೂ ಐಶ್ವರ್ಯಾ ದಾಂಪತ್ಯ ಮುರಿದು ಬೀಳಲು ಅಲ್ಲಿ ನಡೆದ ಘಟನೆ ಪ್ರಮುಖ ಕಾರಣವಾಯಿತು ಎನ್ನುವ ಮಾತು ಕೇಳಿ ಬಂದಿದೆ.

2004ರ ನವೆಂಬರ್ 18ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗ ದಂಪತಿ ವಿಚ್ಛೇದನ ಘೋಷಿಸಿರುವುದು ಅವರ ಅಭಿಮಾನಿಗಳಿಗೆ ನೋವು ತರಿಸಿದೆ. ವಿಶೇಷ ಎಂದರೆ, ಐಶ್ವರ್ಯಾ ಹಾಗೂ ಧನುಷ್​ ಅವರದ್ದು ಪ್ರೇಮ ವಿವಾಹ. 21ನೇ ವಯಸ್ಸಿಗೆ ಐಶ್ವರ್ಯಾ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು ಧನುಷ್​. 18 ವರ್ಷಗಳ ಕಾಲ ದಾಂಪತ್ಯ ನಡೆಸಿದ ಇಬ್ಬರೂ ಈಗ ಬೇರೆ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರ ತರಿಸಿದೆ.

ಕೆಲಸದ ನಿಮಿತ್ತ ಇಬ್ಬರೂ ಹೈದರಾಬಾದ್​ನಲ್ಲಿ ಇದ್ದಾರೆ. ಹೈದರಾಬಾದ್​ನಲ್ಲಿ ಇಬ್ಬರ ನಡುವೆ ಯಾವುದೋ ಒಂದು ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಜಗಳ ಏರ್ಪಟ್ಟಿದೆ ಎನ್ನಲಾಗಿದೆ. ಆ ಬಳಿಕ ಇಬ್ಬರೂ ವಿಚ್ಛೇದನ ಪಡೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಧನುಷ್​ ನಟನೆಯ ‘3’ ಚಿತ್ರವನ್ನು ಐಶ್ವರ್ಯಾ ರಜನಿಕಾಂತ್​ ಅವರೇ ನಿರ್ದೇಶನ ಮಾಡಿದ್ದರು. ಈ ಚಿತ್ರ ತೆರೆಗೆ ಬಂದ ನಂತರದಲ್ಲಿ ಇಬ್ಬರೂ ಬೇರೆ ಆಗುತ್ತಾರೆ ಎನ್ನುವ ವದಂತಿ ಹುಟ್ಟಿಕೊಂಡಿತ್ತು. ಆದರೆ, ಅದು ನಿಜವಾಗಿರಲಿಲ್ಲ. ಈ ಸಿನಿಮಾ ತೆರೆಕಂಡು ಸುಮಾರು 10 ವರ್ಷಗಳ ನಂತರದಲ್ಲಿ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಕೆಲವು ವರದಿಗಳ ಪ್ರಕಾರ ಇಬ್ಬರ ನಡುವೆ ಹಲವು ವರ್ಷಗಳಿಂದ ಕಿತ್ತಾಟ ನಡೆದೇ ಇತ್ತು ಎನ್ನಲಾಗಿದೆ. ಈಗ ಇಬ್ಬರೂ ಒಟ್ಟಾಗಿ ಬೇರೆ ಆಗುವ ನಿರ್ಧಾರ ತೆಗೆದುಕೊಂಡರು ಎನ್ನಲಾಗಿದೆ.

ಇದನ್ನೂ ಓದಿ: ಧನುಷ್​-ಐಶ್ವರ್ಯಾ ಲವ್​ ಸ್ಟೋರಿ; 21ನೇ ವಯಸ್ಸಿಗೆ ಪ್ರೀತಿಸಿ ಮದುವೆ ಆಗಿದ್ದ ನಟ

‘ಧನುಷ್​-ಐಶ್ವರ್ಯಾ ವಿಚ್ಛೇದನ ಪಡೆದಿಲ್ಲ, ಇದು ಸಣ್ಣ ಜಗಳ ಅಷ್ಟೇ’; ಧನುಷ್ ತಂದೆ ಅಚ್ಚರಿಯ ಹೇಳಿಕೆ​

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ