AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ

2004ರ ನವೆಂಬರ್ 18ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗ ದಂಪತಿ ವಿಚ್ಛೇದನ ಘೋಷಿಸಿರುವುದು ಅವರ ಅಭಿಮಾನಿಗಳಿಗೆ ನೋವು ತರಿಸಿದೆ.

ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ
ಧನುಷ್​-ಐಶ್ವರ್ಯಾ
TV9 Web
| Edited By: |

Updated on: Jan 20, 2022 | 2:09 PM

Share

ಧನುಷ್​ (Dhanush) ಹಾಗೂ ಐಶ್ವರ್ಯಾ (Aishwarya Rajinikanth) ನಡುವಣ 18 ವರ್ಷಗಳ ಸಂಬಂಧ ಮುರಿದು ಬಿದ್ದಿದೆ. ಇದು ಅವರ ಅಭಿಮಾನಿಗಳಿಗೆ ಶಾಕ್​ ನೀಡಿದೆ. ಧನುಷ್​ ಹಾಗೂ ಐಶ್ವರ್ಯಾ ನಡುವೆ ಯಾವ ವಿಚಾರಕ್ಕೆ ವೈಮನಸ್ಸು ಮೂಡಿತು ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ಹೈದರಾಬಾದ್​ನಲ್ಲಿ ನಡೆದ ಘಟನೆಯೊಂದರ ವಿಚಾರ ಈಗ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಧನುಷ್​ ಹಾಗೂ ಐಶ್ವರ್ಯಾ ದಾಂಪತ್ಯ ಮುರಿದು ಬೀಳಲು ಅಲ್ಲಿ ನಡೆದ ಘಟನೆ ಪ್ರಮುಖ ಕಾರಣವಾಯಿತು ಎನ್ನುವ ಮಾತು ಕೇಳಿ ಬಂದಿದೆ.

2004ರ ನವೆಂಬರ್ 18ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗ ದಂಪತಿ ವಿಚ್ಛೇದನ ಘೋಷಿಸಿರುವುದು ಅವರ ಅಭಿಮಾನಿಗಳಿಗೆ ನೋವು ತರಿಸಿದೆ. ವಿಶೇಷ ಎಂದರೆ, ಐಶ್ವರ್ಯಾ ಹಾಗೂ ಧನುಷ್​ ಅವರದ್ದು ಪ್ರೇಮ ವಿವಾಹ. 21ನೇ ವಯಸ್ಸಿಗೆ ಐಶ್ವರ್ಯಾ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು ಧನುಷ್​. 18 ವರ್ಷಗಳ ಕಾಲ ದಾಂಪತ್ಯ ನಡೆಸಿದ ಇಬ್ಬರೂ ಈಗ ಬೇರೆ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರ ತರಿಸಿದೆ.

ಕೆಲಸದ ನಿಮಿತ್ತ ಇಬ್ಬರೂ ಹೈದರಾಬಾದ್​ನಲ್ಲಿ ಇದ್ದಾರೆ. ಹೈದರಾಬಾದ್​ನಲ್ಲಿ ಇಬ್ಬರ ನಡುವೆ ಯಾವುದೋ ಒಂದು ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಜಗಳ ಏರ್ಪಟ್ಟಿದೆ ಎನ್ನಲಾಗಿದೆ. ಆ ಬಳಿಕ ಇಬ್ಬರೂ ವಿಚ್ಛೇದನ ಪಡೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಧನುಷ್​ ನಟನೆಯ ‘3’ ಚಿತ್ರವನ್ನು ಐಶ್ವರ್ಯಾ ರಜನಿಕಾಂತ್​ ಅವರೇ ನಿರ್ದೇಶನ ಮಾಡಿದ್ದರು. ಈ ಚಿತ್ರ ತೆರೆಗೆ ಬಂದ ನಂತರದಲ್ಲಿ ಇಬ್ಬರೂ ಬೇರೆ ಆಗುತ್ತಾರೆ ಎನ್ನುವ ವದಂತಿ ಹುಟ್ಟಿಕೊಂಡಿತ್ತು. ಆದರೆ, ಅದು ನಿಜವಾಗಿರಲಿಲ್ಲ. ಈ ಸಿನಿಮಾ ತೆರೆಕಂಡು ಸುಮಾರು 10 ವರ್ಷಗಳ ನಂತರದಲ್ಲಿ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಕೆಲವು ವರದಿಗಳ ಪ್ರಕಾರ ಇಬ್ಬರ ನಡುವೆ ಹಲವು ವರ್ಷಗಳಿಂದ ಕಿತ್ತಾಟ ನಡೆದೇ ಇತ್ತು ಎನ್ನಲಾಗಿದೆ. ಈಗ ಇಬ್ಬರೂ ಒಟ್ಟಾಗಿ ಬೇರೆ ಆಗುವ ನಿರ್ಧಾರ ತೆಗೆದುಕೊಂಡರು ಎನ್ನಲಾಗಿದೆ.

ಇದನ್ನೂ ಓದಿ: ಧನುಷ್​-ಐಶ್ವರ್ಯಾ ಲವ್​ ಸ್ಟೋರಿ; 21ನೇ ವಯಸ್ಸಿಗೆ ಪ್ರೀತಿಸಿ ಮದುವೆ ಆಗಿದ್ದ ನಟ

‘ಧನುಷ್​-ಐಶ್ವರ್ಯಾ ವಿಚ್ಛೇದನ ಪಡೆದಿಲ್ಲ, ಇದು ಸಣ್ಣ ಜಗಳ ಅಷ್ಟೇ’; ಧನುಷ್ ತಂದೆ ಅಚ್ಚರಿಯ ಹೇಳಿಕೆ​

Follow Us
Web contact
Web contact

TV9 Kannada

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​