ಹಾಲಿವುಡ್​ ಅವಾರ್ಡ್​ ಫಂಕ್ಷನ್​ಗೆ ಜೂ.ಎನ್​ಟಿಆರ್​ಗೆ ಇರಲಿಲ್ಲ ಆಹ್ವಾನ? ಸ್ಪಷ್ಟನೆ ನೀಡಿದ ಆಯೋಜಕರು

|

Updated on: Feb 28, 2023 | 3:29 PM

ರಾಜಮೌಳಿ, ರಾಮ್ ಚರಣ್, ಕೀರವಾಣಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಜೂ.ಎನ್​ಟಿಆರ್ ಕೂಡ ಕಾರ್ಯಕ್ರಮದಲ್ಲಿ ಭಾಗಿ ಆಗಬೇಕಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದರು.

ಹಾಲಿವುಡ್​ ಅವಾರ್ಡ್​ ಫಂಕ್ಷನ್​ಗೆ ಜೂ.ಎನ್​ಟಿಆರ್​ಗೆ ಇರಲಿಲ್ಲ ಆಹ್ವಾನ? ಸ್ಪಷ್ಟನೆ ನೀಡಿದ ಆಯೋಜಕರು
ಜೂನಿಯರ್​ ಎನ್​ಟಿಆರ್​
Follow us on

‘ಆರ್​ಆರ್​ಆರ್​’ ಸಿನಿಮಾ (RRR Movie) ಸದ್ಯ ವಿಶ್ವಾದ್ಯಂತ ಸದ್ದು ಮಾಡುತ್ತಿದೆ. ಹಾಲಿವುಡ್​ ಅಂಗಳದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಳ್ಳುತ್ತಿರುವ ಭಾರತದ ಮೊದಲ ಸಿನಿಮಾ ಎನ್ನುವ ಹೆಗ್ಗಳಿಕೆಗೆ ‘ಆರ್​ಆರ್​ಆರ್​’ ಭಾಗಿ ಆಗಿದೆ. ಈ ಪ್ರಶಸ್ತಿ ಕಾರ್ಯಕ್ರಮಕ್ಕೆ ಇಡೀ ತಂಡ ಭಾಗಿ ಆಗುತ್ತಿದೆ. ಇತ್ತೀಚೆಗೆ ‘ಹಾಲಿವುಡ್ ಕ್ರಿಟಿಕ್ಸ್ ಅವಾರ್ಡ್​’ ಕಾರ್ಯಕ್ರಮ ನಡೆದಿದೆ. ‘ಆರ್​ಆರ್​ಆರ್​’ ಸಿನಿಮಾ ಇದರಲ್ಲಿ ಪ್ರಶಸ್ತಿ ಬಾಚಿಕೊಂಡಿದೆ. ಬೇಸರದ ವಿಚಾರ ಎಂದರೆ ರಾಮ್ ಚರಣ್ ಹಾಗೂ ಎಸ್.ಎಸ್​. ರಾಜಮೌಳಿ (SS Rajamouli) ಮಾತ್ರ ಇದರಲ್ಲಿ ಭಾಗಿ ಆಗಿದ್ದರು. ಜೂ.ಎನ್​ಟಿಆರ್ ಅವರು ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಅವರಿಗೆ ಆಹ್ವಾನವೇ ಇರಲಿಲ್ಲ ಎಂದೆಲ್ಲ ಸುದ್ದಿ ಹಬ್ಬಿಸಲಾಗಿತ್ತು. ಇದಕ್ಕೆ ಹಾಲಿವುಡ್​ ಕ್ರಿಟಿಕ್ಸ್ ಅವಾರ್ಡ್​​ನ ಆಯೋಜಕರು ಸ್ಪಷ್ಟನೆ ನೀಡಿದ್ದಾರೆ. ‘ಜೂ.ಎನ್​ಟಿಆರ್​ಗೆ ನಾವು ಆಹ್ವಾನ ನೀಡಿದ್ದೆವು’ ಎಂಬುದನ್ನು ಹೇಳಿದ್ದಾರೆ.

ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ಸ್ ಫಿಲ್ಮ್​ ಅವಾರ್ಡ್ಸ್​ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದು. ಇಲ್ಲಿ, ಅತ್ಯುತ್ತಮ ಆ್ಯಕ್ಷನ್ ಸಿನಿಮಾ, ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ, ಅತ್ಯುತ್ತಮ ಒರಿಜಿನಲ್ ಹಾಡು ಹಾಗೂ ಅತ್ಯುತ್ತಮ ಸ್ಟಂಟ್ಸ್​ ವಿಭಾಗದಲ್ಲಿ ‘ಆರ್​ಆರ್​ಆರ್​’ ಚಿತ್ರ ಗೆಲುವು ಕಂಡಿತ್ತು. ರಾಜಮೌಳಿ, ರಾಮ್ ಚರಣ್, ಕೀರವಾಣಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಜೂ.ಎನ್​ಟಿಆರ್ ಕೂಡ ಕಾರ್ಯಕ್ರಮದಲ್ಲಿ ಭಾಗಿ ಆಗಬೇಕಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಈ ಬಗ್ಗೆ ಹಾಲಿವುಡ್​ ಕ್ರಿಟಿಕ್ಸ್ ಅವಾರ್ಡ್ ಅಧಿಕೃತ ಟ್ವಿಟರ್ ಖಾತೆ ಮೂಲಕ ಸ್ಪಷ್ಟನೆ ನೀಡಲಾಗಿದೆ. ‘ಆರ್​ಆರ್​ಆರ್ ಫ್ಯಾನ್ಸ್ ಹಾಗೂ ಬೆಂಬಲಿಗರೇ, ನಾವು ಜೂ.ಎನ್​ಟಿಆರ್​ಗೆ ಆಹ್ವಾನ ನೀಡಿದ್ದೆವು. ಆದರೆ, ಅವರು ಭಾರತದಲ್ಲಿ ತಮ್ಮ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಶೀಘ್ರವೇ ಈ ಅವಾರ್ಡ್ ಸ್ವೀಕರಿಸಲಿದ್ದಾರೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ’ ಎಂದು ಬರೆದುಕೊಳ್ಳಲಾಗಿದೆ.


ಇದನ್ನೂ ಓದಿ: RRR New Trailer: ಆರ್​ಆರ್​ಆರ್ ಹೊಸ ಟ್ರೈಲರ್ ಬಿಡುಗಡೆ, ಸಿನಿಮಾದಲ್ಲಿಲ್ಲದ ಕೆಲ ದೃಶ್ಯಗಳ ಸೇರ್ಪಡೆ

ಈ ಟ್ವೀಟ್​ಗೆ ಉತ್ತರಿಸಿರುವ ಅಭಿಮಾನಿ, ‘ಅವರು ಬರದೇ ಇರೋದು ವೈಯಕ್ತಿಕ ಕಾರಣದಿಂದ. ಅವರು ಸಹೋದರನನ್ನು ಕಳೆದುಕೊಂಡಿದ್ದಾರೆ. ಈ ಕಾರಣಕ್ಕೆ ಅವರು ಬಂದಿಲ್ಲ’ ಎಂದು ಬರೆದುಕೊಂಡಿದ್ದ. ಇದಕ್ಕೂ ಹಾಲಿವುಡ್​ ಕ್ರಿಟಿಕ್ಸ್ ಅವಾರ್ಡ್ ಕಡೆಯಿಂದ ಉತ್ತರ ಸಿಕ್ಕಿದೆ. ‘ಅವರು ಸಿನಿಮಾ ಶೂಟಿಂಗ್​​ನಲ್ಲಿ ಬ್ಯುಸಿ ಇದ್ದರು. ನಂತರ ಅವರ ಸಹೋದರ ತೀರಿ ಹೋದರು. ಹೀಗಾಗಿ, ಸಿನಿಮಾ ಕೆಲಸದಿಂದ ಬ್ರೇಕ್ ಪಡೆದರು. ಪ್ರಚಾರಕರು ನಮಗೆ ಹೇಳಿದ್ದು ಇಷ್ಟು’ ಎಂದು ಅವರು ಉತ್ತರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:29 pm, Tue, 28 February 23