AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ವೈಯಕ್ತಿಕ ವಿಚಾರವನ್ನು ಸಿನಿಮಾದ ಪ್ರಚಾರಕ್ಕೆ ಬಳಸಿಕೊಂಡ ‘ಹಾಯ್​ ನಾನ್ನ’ ಟೀಮ್​

ನಾನಿ ನಟನೆಯ ‘ಹಾಯ್​ ನಾನ್ನ’ ಚಿತ್ರತಂಡಕ್ಕೂ ರಶ್ಮಿಕಾ ಮಂದಣ್ಣ ಅವರಿಗೂ ಯಾವುದೇ ಸಂಬಂಧ ಇಲ್ಲ. ಈ ತಂಡದಲ್ಲಿ ವಿಜಯ್​ ದೇವರಕೊಂಡ ಕೂಡ ಕೆಲಸ ಮಾಡಿಲ್ಲ. ಹಾಗಿದ್ದರೂ ಕೂಡ ಪ್ರೀ-ರಿಲೀಸ್​ ಕಾರ್ಯಕ್ರಮದಲ್ಲಿ ಅವರ ವೈಯಕ್ತಿಕ ಫೋಟೋವನ್ನು ಬಳಸಿಕೊಂಡು ಪ್ರಚಾರ ಮಾಡಿದ್ದು ವಿವಾದಕ್ಕೆ ಕಾರಣ ಆಗಿದೆ.

ರಶ್ಮಿಕಾ ವೈಯಕ್ತಿಕ ವಿಚಾರವನ್ನು ಸಿನಿಮಾದ ಪ್ರಚಾರಕ್ಕೆ ಬಳಸಿಕೊಂಡ ‘ಹಾಯ್​ ನಾನ್ನ’ ಟೀಮ್​
ವಿಜಯ್​ ದೇವರಕೊಂಡ, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Nov 30, 2023 | 5:50 PM

Share

ತೆಲುಗಿನ ಖ್ಯಾತ ನಟ ನಾನಿ ಅವರು ‘ಹಾಯ್​ ನಾನ್ನ’ (Hi Nanna) ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಮೃಣಾಲ್​ ಠಾಕೂರ್​ ಕೂಡ ನಟಿಸಿದ್ದಾರೆ. ಡಿಸೆಂಬರ್​ 7ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಹಾಗಾಗಿ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಅದರ ಜೊತೆಗೆ ಈ ಚಿತ್ರತಂಡ ಒಂದು ಎಡವಟ್ಟು ಮಾಡಿಕೊಂಡಿದೆ. ಇತ್ತೀಚೆಗೆ ‘ಹಾಯ್​ ನಾನ್ನ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ನಡೆಯಿತು. ಆ ವೇದಿಕೆಯಲ್ಲಿ ಚಿತ್ರಕ್ಕೆ ಸಂಬಂಧವೇ ಇಲ್ಲದ ರಶ್ಮಿಕಾ ಮಂದಣ್ಣ (Rashmika Mandanna) ಅವರ ವೈಯಕ್ತಿಕ ವಿಚಾರವನ್ನು ಎಳೆದು ತರಲಾಗಿದೆ. ಇದಕ್ಕೆ ನೆಟ್ಟಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರತಂಡದವರು ಕ್ಷಮೆ ಕೇಳಬೇಕು ಎಂದು ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ (Vijay Deverakonda) ಅವರ ಅಭಿಮಾನಿಗಳು ಪಟ್ಟು ಹಿಡಿದ್ದಾರೆ.

ಈ ಹಿಂದೆ ರಶ್ಮಿಕಾ ಮಂದಣ್ಣ ಅವರು ತಮ್ಮ ಮಾಲ್ಡೀವ್ಸ್​ ಪ್ರವಾಸದ ಫೋಟೋಗಳನ್ನು ಹಂಚಿಕೊಂಡಿದ್ದರು. ಅದೇ ರೀತಿ ವಿಜಯ್​ ದೇವರಕೊಂಡ ಕೂಡ ಮಾಲ್ಡೀವ್ಸ್​ನಲ್ಲಿ ತಾವು ತೆಗೆಸಿಕೊಂಡ ಫೋಟೋವನ್ನು ಪೋಸ್ಟ್​ ಮಾಡಿದ್ದರು. ಇಬ್ಬರೂ ಬೇರೆ ಬೇರೆ ಸಂದರ್ಭದಲ್ಲಿ ಫೋಟೋ ಹಂಚಿಕೊಂಡಿದ್ದರೂ ಕೂಡ ಅವರು ಜೊತೆಯಾಗಿಯೇ ಮಾಲ್ಡೀವ್ಸ್​ನಲ್ಲಿ ಕಾಲ ಕಳೆದಿದ್ದಾರೆ ಎಂದು ನೆಟ್ಟಿಗರು ಊಹಿಸಿದ್ದರು. ಈಗ ಅದೇ ಎರಡು ಫೋಟೋವನ್ನು ಬಳಸಿಕೊಂಡು ‘ಹಾಯ್​ ನಾನ್ನ’ ತಂಡ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ.

ಇದನ್ನೂ ಓದಿ: ರಶ್ಮಿಕಾ ಮಾತ್ರವಲ್ಲ, ಡೀಪ್​ಫೇಕ್​ ಹಾವಳಿಗೆ ಸಿಲುಕಿದ ನಟಿಯರ ಪಟ್ಟಿ ಇಲ್ಲಿದೆ..

‘ಹಾಯ್​ ನಾನ್ನ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ನಡೆಯುವಾಗ ಎಲ್​ಇಡಿ ಪರದೆಯ ಮೇಲೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಅವರ ಫೋಟೋಗಳನ್ನು ಅಕ್ಕ-ಪಕ್ಕ ಇಟ್ಟು ಬಿತ್ತರ ಮಾಡಲಾಗಿದೆ. ತಮ್ಮ ಸಿನಿಮಾದ ಪ್ರಚಾರಕ್ಕಾಗಿ ಬೇರೆಯವರ ವೈಯಕ್ತಿಕ ವಿಚಾರವನ್ನು ಈ ರೀತಿ ಬಳಸಿಕೊಂಡಿದ್ದು ನಿಜಕ್ಕೂ ಕೀಳು ಮಟ್ಟದ ಗಿಮಿಕ್​ ಎಂದು ಅನೇಕರು ಟೀಕೆ ಮಾಡುತ್ತಿದ್ದಾರೆ. ಇದಕ್ಕೆ ನಾನಿ ಮತ್ತು ಅವರ ತಂಡದವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ‘ಅನಿಮಲ್​’ ಸಿನಿಮಾದಲ್ಲಿ ನಟಿಸಲು ರಶ್ಮಿಕಾ ಮಂದಣ್ಣ ಪಡೆದ ಸಂಭಾವನೆ ಎಷ್ಟು?

‘ಗೀತ ಗೋವಿಂದಂ’ ಸಿನಿಮಾದಲ್ಲಿ ನಟಿಸಿದಾಗಿನಿಂದ ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಡುವೆ ಸ್ನೇಹ ಬೆಳೆಯಿತು. ನಂತರ ಅವರು ‘ಡಿಯರ್ ಕಾಮ್ರೇಡ್​’ ಸಿನಿಮಾದಲ್ಲೂ ತೆರೆಹಂಚಿಕೊಂಡರು. ಇಬ್ಬರೂ ಡೇಟಿಂಗ್​ ಮಾಡುತ್ತಿದ್ದಾರೆ ಎಂಬುದು ಅನೇಕರ ಗುಮಾನಿ. ಆದರೆ ಈ ವಿಚಾರವನ್ನು ರಶ್ಮಿಕಾ ಮಂದಣ್ಣ ಅವರಾಗಲೀ, ವಿಜಯ್​ ದೇವರಕೊಂಡ ಅವರಾಗಲಿ ಒಪ್ಪಿಕೊಂಡಿಲ್ಲ. ವೃತ್ತಿಜೀವನದಲ್ಲಿ ಅವರಿಬ್ಬರು ಪರಸ್ಪರ ಬೆಂಬಲ ನೀಡುತ್ತಾ ಮುಂದೆ ಸಾಗುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್