AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಕಾಶ್ ರೈ, ಬಾಬಿ ಸಿಂಹ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’; ಕೋರ್ಟ್​ಗೆ ಸರ್ಕಾರದ ಮಾಹಿತಿ  

‘ಎರಡು ಬಂಗಲೆಗಳ ನಿರ್ಮಾಣ ಕಾಮಗಾರಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು ತಮಿಳುನಾಡು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ತೆಗೆದುಕೊಂಡ ಕ್ರಮದ ಸಂಪೂರ್ಣ ವಿವರಣೆ ನೀಡುವಂತೆ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

‘ಪ್ರಕಾಶ್ ರೈ, ಬಾಬಿ ಸಿಂಹ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’; ಕೋರ್ಟ್​ಗೆ ಸರ್ಕಾರದ ಮಾಹಿತಿ  
ಬಾಬಿ ಸಿಂಹ-ಪ್ರಕಾಶ್ ರಾಜ್
ರಾಜೇಶ್ ದುಗ್ಗುಮನೆ
|

Updated on:Jan 05, 2024 | 2:53 PM

Share

ಅಕ್ರಮ ಬಂಗಲೆ ನಿರ್ಮಾಣ ಪ್ರಕರಣದಲ್ಲಿ ನಟ ಪ್ರಕಾಶ್ ರೈ (Prakash Rai) ಹಾಗೂ ಬಾಬಿ ಸಿಂಹ ಅವರ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದ ಎಂದು ವರದಿ ನೀಡುವಂತೆ ಮದ್ರಾಸ್ ಹೈಕೋರ್ಟ್​ನ ಮಧುರೈ ಬೆಂಚ್ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ. ತಮಿಳುನಾಡಿನ ಕೊಡೈಕೆನಲ್​ನಲ್ಲಿರುವ ವಿಳಪಟ್ಟಿ ಪಂಚಾಯತ್ ಭಾಗದಲ್ಲಿ ಬಾಬಿ ಸಿಂಹ ಹಾಗೂ ಪ್ರಕಾಶ್ ರೈ ಅಕ್ರಮವಾಗಿ ಬಂಗಲೆ ನಿರ್ಮಾಣ ಮಾಡಲು ಪ್ರಯತ್ನಿಸಿದ್ದರು ಎನ್ನಲಾಗಿತ್ತು.

ದಿಂಡುಗಲ್ ಜಿಲ್ಲೆಯ ಮುಹಮ್ಮದ್ ಜುನೈದ್ ಅವರು ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಪ್ರಕಾಶ್ ರೈ ಹಾಗೂ ಬಾಬಿ ಸಿಂಹ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರ್ಜಿಯಲ್ಲಿ ಕೋರಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೃಷ್ಣಕುಮಾರ್ ಮತ್ತು ವಿಜಯಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಪ್ರಕಾಶ್ ರೈ ಹಾಗೂ ಬಾಬಿ ಸಿಂಹ ಅವರು ಕೊಡೈಕೆನಾಲ್ ಪುರಸಭೆಯಿಂದ ಅನುಮತಿ ಪಡೆಯದೆ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಬಂಗಲೆಗಳನ್ನು ನಿರ್ಮಿಸಲು ಪ್ರಯತ್ನಿಸಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು. ಬಂಗಲೆ ನಿರ್ಮಾಣ ಸ್ಥಳಕ್ಕೆ ವಸ್ತುಗಳನ್ನು ಸಾಗಿಸಲು ಭಾರೀ ಯಂತ್ರೋಪಕರಣಗಳನ್ನು ಬಳಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: 100 ಕೋಟಿ ಹಣ ವಂಚನೆ ಪ್ರಕರಣ: ಪ್ರಕಾಶ್ ರೈಗೆ ಸಮನ್ಸ್

‘ಎರಡು ಬಂಗಲೆಗಳ ನಿರ್ಮಾಣ ಕಾಮಗಾರಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು ತಮಿಳುನಾಡು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ತೆಗೆದುಕೊಂಡ ಕ್ರಮದ ಸಂಪೂರ್ಣ ವಿವರಣೆ ನೀಡುವಂತೆ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ಅರ್ಜಿ ವಿಚಾರಣೆ ಜನವರಿ 9ಕ್ಕೆ ಮುಂದೂಡಲ್ಪಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:19 pm, Fri, 5 January 24

ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್
ಬೆಳಗಾವಿ ಎಪಿಎಂಸಿ ಪ್ರತಿ ಕ್ವಿಂಟಾಲ್ ಈರುಳ್ಳಿ ಬೆಲೆ ₹800 ರಿಂದ ₹1,200!
ಬೆಳಗಾವಿ ಎಪಿಎಂಸಿ ಪ್ರತಿ ಕ್ವಿಂಟಾಲ್ ಈರುಳ್ಳಿ ಬೆಲೆ ₹800 ರಿಂದ ₹1,200!
ದರ್ಶನ್ ಜಾಮೀನು ರದ್ದಿಗೆ ಅರ್ಜಿ; ವಿಚಾರಣೆಯ ಲೈವ್ ವಿಡಿಯೋ ಇಲ್ಲಿದೆ
ದರ್ಶನ್ ಜಾಮೀನು ರದ್ದಿಗೆ ಅರ್ಜಿ; ವಿಚಾರಣೆಯ ಲೈವ್ ವಿಡಿಯೋ ಇಲ್ಲಿದೆ