AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಆಗಿದೆ: ಹಿಜಾಬ್​ ವಿವಾದಕ್ಕೆ ಕಮಲ್​ ಹಾಸನ್​, ರಮ್ಯಾ ಪ್ರತಿಕ್ರಿಯೆ​

ಹಿಜಾಬ್​ ವಿವಾದದ ಬಗ್ಗೆ ನಟ ಕಮಲ್​ ಹಾಸನ್​, ನಟಿ ರಮ್ಯಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಈ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಆಗಿದೆ: ಹಿಜಾಬ್​ ವಿವಾದಕ್ಕೆ ಕಮಲ್​ ಹಾಸನ್​, ರಮ್ಯಾ ಪ್ರತಿಕ್ರಿಯೆ​
ಕಮಲ್​ ಹಾಸನ್​, ರಮ್ಯಾ
TV9 Web
| Edited By: |

Updated on:Feb 09, 2022 | 1:18 PM

Share

ಕರ್ನಾಟಕದಲ್ಲಿ ಹಿಜಾಬ್​ (Hijab) ವರ್ಸಸ್​ ಕೇಸರಿ ಶಾಲು ವಿವಾದ ಭುಗಿಲೆದ್ದಿದೆ. ಕರುನಾಡಿನ ಕಾಲೇಜುಗಳ ಅಂಗಳದಲ್ಲಿ ಶುರುವಾದ ಈ ಗಲಾಟೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ. ಈ ಕುರಿತು ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಖ್ಯಾತ ನಟ ಕಮಲ್​ ಹಾಸನ್​ (Kamal Haasan), ನಟಿ ರಮ್ಯಾ ಮುಂತಾದವರು ಈ ಘಟನೆ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಪ್ರತಿಕ್ರಿಯಿಸಿದ್ದಾರೆ. ‘ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಶಾಂತಿ ಕಡದಲು ಪ್ರಚೋದಿಸುತ್ತಿವೆ. ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣವಾಗುತ್ತಿದೆ. ಪಕ್ಕದ ರಾಜ್ಯದಲ್ಲಿ ನಡೆಯುತ್ತಿರುವುದು ತಮಿಳುನಾಡಿಗೆ ಬರಬಾರದು. ಪ್ರಗತಿಪರ ಶಕ್ತಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕಾದ ಸಮಯವಿದು’ ಎಂದು ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ. ಹಿಜಾಬ್​ ಧರಿಸಿದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಪರಸ್ಪರ ಕಾದಾಡುತ್ತಿರುವ ವಿಡಿಯೋವನ್ನು ರಮ್ಯಾ (Ramya Divya Spandana) ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಭಾರತದ ಯುವಜನತೆ ಈ ರೀತಿ ಎರಡು ಭಾಗವಾಗಿರುವುದನ್ನು ನೋಡಲು ದುಃಖವಾಗುತ್ತದೆ’ ಎಂದು ರಮ್ಯಾ ಪೋಸ್ಟ್​ ಮಾಡಿದ್ದಾರೆ.

ಕರ್ನಾಟಕದ ಹಲವು ಕಾಲೇಜುಗಳಲ್ಲಿ ಹಿಜಾಬ್​ ವರ್ಸಸ್​ ಕೇಸರಿ ಸಂಘರ್ಷ ತಾರಕಕ್ಕೇರಿದೆ. ಯಾವ ಬಟ್ಟೆ ಧರಿಸಬೇಕು ಎಂಬುದು ಮಹಿಳೆಯರ ಸ್ವಾತಂತ್ರ್ಯ ಎಂದು ಕೆಲವರು ಹೇಳುತ್ತಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಇರಬೇಕು ಎಂದು ಇನ್ನೂ ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದ ಬಗ್ಗೆ ನಾಯಕಿ ಸುಹಾನಾ ಸೈಯದ್​​ ಕೂಡ ಮಾತಮಾಡಿದ್ದಾರೆ.

‘ನಾನು ಕೂಡ ಇಸ್ಲಾಂ ಕುಟುಂಬದಲ್ಲಿ ಬೆಳೆದವಳು. ನಾನು ಹಿಜಾಬ್​ ಹಾಕಲ್ಲ. ಹಾಗಂತ ನಾನು ಹಿಬಾಬ್ ಹಾಕುವವರ ವಿರೋಧಿ ಕೂಡ ಅಲ್ಲ. ಬಟ್ಟೆ ಎಂಬುದು ಅವರವರ ವೈಯಕ್ತಿಕ ವಿಚಾರ. ನಾನು ಹಿಜಾಬ್​ ಹಾಕಲ್ಲ ಅಂತ ಅನೇಕ ಪರ-ವಿರೋಧ ಚರ್ಚೆ ನಡೆದಿದೆ. ನನ್ನ ನಿಲುವು ಏನೆಂದರೆ, ಹಿಜಾಬ್​ ಅಥವಾ ಯಾವುದೇ ಬಟ್ಟೆ ಆದರೂ ಇದನ್ನು ಹಾಕಬೇಕು-ಹಾಕಬಾರದು ಎಂದು ಒತ್ತಾಯ ಮಾಡುವ ಹಕ್ಕು ಯಾರಿಗೂ ಇಲ್ಲ. ಅದು ಆ ವ್ಯಕ್ತಿಯ ಸ್ವಾತಂತ್ರ್ಯ’ ಎಂದು ಸುಹಾನಾ ಸೈಯದ್​​ ಹೇಳಿದ್ದಾರೆ.

‘ನಾವು ಈಗ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಮಾತನಾಡುತ್ತಿದ್ದೇವೆ. ಧರ್ಮವನ್ನೂ ಮೀರಿದ್ದು ಶಿಕ್ಷಣ. ಹೆಣ್ಣುಮಕ್ಕಳ ಶಿಕ್ಷಣವನ್ನು ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಯಾವುದೇ ಧರ್ಮ, ಜಾತಿ, ಭಾಷೆ, ಲಿಂಗ, ಬಟ್ಟೆಗೂ ಆ ಹಕ್ಕು ಇಲ್ಲ. ಈ ಎಲ್ಲ ಕಾರಣಗಳಿಂದ ಒಬ್ಬಳು ಹೆಣ್ಣು ಮಗಳು ಶಿಕ್ಷಣದಿಂದ ವಂಚಿತಳಾಗುತ್ತಾಳೆ ಎಂದರೆ ಅದು ತಪ್ಪು ಅಂತ ವೈಯಕ್ತಿಕವಾಗಿ ನನಗೆ ಅನಿಸುತ್ತದೆ’ ಎಂದಿದ್ದಾರೆ ಸುಹಾನಾ.

ಇದನ್ನೂ ಓದಿ:

ಕರ್ನಾಟಕ ಹಿಜಾಬ್​ ವಿವಾದದಲ್ಲಿ ಮೂಗು ತೂರಿಸಿದ ಪಾಕಿಸ್ತಾನ; ಭಾರತದಲ್ಲಿನ ಈ ಬೆಳವಣಿಗೆ ಸಚಿವರಿಗೆ ಭಯಹುಟ್ಟಿಸುತ್ತಿದೆಯಂತೆ !

ಸರ್ಕಾರದ ಆದೇಶಕ್ಕಿಲ್ಲ ಮರ್ಯಾದೆ; ಹಿಜಾಬ್‌- ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

Published On - 12:28 pm, Wed, 9 February 22

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!