AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hina Khan: ಸ್ತನ ಕ್ಯಾನ್ಸರ್ ಮಧ್ಯೆಯೂ ಶೂಟಿಂಗ್​ಗೆ ಮರಳಿದ ಕಿರುತೆರೆ ನಟಿ

ಹಿನಾ ಖಾನ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರಿಗೆ ಇತ್ತೀಚೆಗೆ ಸ್ತನ ಕ್ಯಾನ್ಸರ್ ಇರುವ ವಿಚಾರ ಗೊತ್ತಾಗಿದೆ. ಈ ರೀತಿ ಸ್ತನ ಕ್ಯಾನ್ಸರ್ ಇದ್ದಾಗ ಸಾಮಾನ್ಯವಾಗಿ ಎಲ್ಲರೂ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ. ಆದರೆ, ಅವರು ಶೂಟಿಂಗ್​ಗೆ ಮರಳೋ ನಿರ್ಧಾರ ತೆಗೆದುಕೊಂಡಿದ್ದಾರೆ.

Hina Khan: ಸ್ತನ ಕ್ಯಾನ್ಸರ್ ಮಧ್ಯೆಯೂ ಶೂಟಿಂಗ್​ಗೆ ಮರಳಿದ ಕಿರುತೆರೆ ನಟಿ
ಹಿನಾ ಖಾನ್
ರಾಜೇಶ್ ದುಗ್ಗುಮನೆ
|

Updated on: Jul 16, 2024 | 7:06 AM

Share

ಅನೇಕ ನಟ/ನಟಿಯರು ಕೆಲಸದ ಬಗ್ಗೆ ವಿಶೇಷ ಪ್ರೀತಿ ಹೊಂದಿರುತ್ತಾರೆ. ಈ ಕಾರಣಕ್ಕೆ ಅನಾರೋಗ್ಯದ ಮಧ್ಯೆಯೂ ಶೂಟಿಂಗ್​ಗೆ ಬರುವ ಅನೇಕರಿದ್ದಾರೆ. ‘ಯೇ ರಿಷ್ತಾ ಕ್ಯಾ ಕೆಹ್ತೇ ಹೇ’ ಹಾಗೂ ‘ಕಸೌಟಿ ಜಿಂದಗಿಕಿ ಕೇ’ ಧಾರಾವಾಹಿಗಳ ನಟಿ ಹಿನಾ ಖಾನ್ ಅವರಿಗೆ ಇತ್ತೀಚೆಗೆ ಕ್ಯಾನ್ಸರ್ ಕಾಣಿಸಿಕೊಂಡಿದೆ. ಆದಾಗ್ಯೂ ಅವರು ಬಣ್ಣದ ಲೋಕದ ಕೆಲಸದಲ್ಲಿ ಮುಂದುವರಿಯಲು ನಿರ್ಧರಿಸಿದ್ದಾರೆ. ಸಂಪೂರ್ಣವಾಗಿ ಗುಣಮುಖರಾಗುವ ಮೊದಲೇ ಅವರು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.

ಇತ್ತೀಚೆಗೆ ಹಿನಾ ಖಾನ್ ಅವರು ತಮಗೆ ಸ್ತನ ಕ್ಯಾನ್ಸರ್ ಇರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಇದು ಮೂರನೇ ಹಂತ ತಲುಪಿದೆ ಎಂದು ಕೂಡ ಹೇಳಿದ್ದರು. ಈಗ ಅವರಿಗೆ ಇದರಿಂದ ಸಂಪೂರ್ಣವಾಗಿ ಗುಣ ಆಗುವ ಚಾಲೆಂಜ್ ಇದೆ. ಇದನ್ನು ಅವರು ಯಾವ ರೀತಿಯಲ್ಲಿ ತೆಗೆದುಕೊಳ್ಳಬಹುದು ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡಿತ್ತು. ವಿಶೇಷ ಎಂದರೆ ಅವರು ಕ್ಯಾನ್ಸರ್ ಮಧ್ಯೆಯೂ ಬಣ್ಣದ ಲೋಕದಲ್ಲಿ ಮುಂದುವರಿಯಲು ನಿರ್ಧರಿಸಿದ್ದಾರೆ.

‘ಕ್ಯಾನ್ಸರ್ ಪತ್ತೆ ಆದ ಬಳಿಕ ನನ್ನ ಮೊದಲ ಕೆಲಸ. ನಾವು ಏನು ಹೇಳಬೇಕು ಎಂದುಕೊಂಡಿರುತ್ತೇವೋ ಅದನ್ನು ಮಾಡೋದು ನಿಜಕ್ಕೂ ಚಾಲೆಂಜ್. ಕೆಟ್ಟ ದಿನಗಳಲ್ಲಿ ನಿಮಗೆ ನೀವು ಬ್ರೇಕ್ ಕೊಟ್ಟುಕೊಳ್ಳಿ. ನೀವು ಅದಕ್ಕೆ ಅರ್ಹರು. ಒಳ್ಳೆಯ ದಿನಗಳಲ್ಲಿ ಬದುಕಲು ಮರೆಯಬೇಡಿ. ಒಳ್ಳೆಯ ದಿನಗಳು ಎಷ್ಟೇ ಕಡಿಮೆ ಇದ್ದರೂ ಆ ದಿನಗಳಿಗೆ ಇರುವ ಪ್ರಾಮುಖ್ಯತೆ ಹಾಗೆಯೇ ಇರುತ್ತದೆ. ಬದಲಾವಣೆಯನ್ನು ಒಪ್ಪಿ’ ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಸ್ಪರ್ಧಿ ಹಿನಾ ಖಾನ್​ಗೆ 3ನೇ ಹಂತದ ಸ್ತನ ಕ್ಯಾನ್ಸರ್​; ಶಾಕಿಂಗ್​ ವಿಚಾರ ತಿಳಿಸಿದ ನಟಿ

ಕ್ಯಾನ್ಸರ್​ನಿಂದ ಹೊರ ಬರೋದು ದೊಡ್ಡ ಚಾಲೆಂಜ್. ಹಾಗಿದ್ದರೂ ಹಿನಾ ಖಾನ್ ಅವರು ಧೃತಿಗೆಡುತ್ತಿಲ್ಲ. ಅವರು ಕೆಲಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!