AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಣ ದೋಚಿದ್ದೂ ಗೊತ್ತಾಗಲಿಲ್ಲ’; ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ

ಇತ್ತೀಚೆಗಷ್ಟೇ ಬಿಗ್ ಬಾಸ್ ಹಿಂದಿ ಒಟಿಟಿಯ ಎರಡನೇ ಸೀಸನ್ ಪೂರ್ಣಗೊಂಡಿದೆ. ಯೂಟ್ಯೂಬರ್ ಎಲ್ವಿಶ್ ಯಾದವ್ ಅವರು ವಿನ್ನರ್ ಆದರೆ, ಅಭಿಷೇಕ್ ರನ್ನರ್ ಅಪ್ ಆಗಿದ್ದರು. ಆಲಿಯಾ ಭಟ್ ಸಹೋದರಿ ಪೂಜಾ ಭಟ್​ಗೆ ಹಿನ್ನಡೆ ಆಯಿತು.

‘ಹಣ ದೋಚಿದ್ದೂ ಗೊತ್ತಾಗಲಿಲ್ಲ’; ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ
ಅಭಿಷೇಕ್
ರಾಜೇಶ್ ದುಗ್ಗುಮನೆ
|

Updated on: Oct 24, 2023 | 7:40 AM

Share

ಬಿಗ್ ಬಾಸ್ (Bigg Boss) ಹಿಂದಿ ಒಟಿಟಿ ಸೀಸನ್ 2’ರ ರನ್ನರ್ ಅಪ್​ ಅಭಿಷೇಕ್ ಮಲ್ಹನ್ ಅವರು ತೊಂದರೆಗೆ ಸಿಲುಕಿದ್ದಾರೆ. ಇತ್ತೀಚೆಗೆ ಅವರು ಆಫ್ರಿಕಾಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಅವರು 1.5 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್ ತೆಗೆದುಕೊಂಡು ಹೋಗುತ್ತಿದ್ದರು. ಆದರೆ, ಈ ಹಣವನ್ನು ಕಳ್ಳರು ದೋಚಿದ್ದಾರೆ. ಈ ಹಣ ಯಾವಾಗ ಕಳ್ಳತನ ಆಯಿತು ಎಂಬುದೇ ಅವರಿಗೆ ಗೊತ್ತಾಗಲಿಲ್ಲ. ಈ ಬಗ್ಗೆ ಅವರು ಯೂಟ್ಯೂಬ್ ಚಾನೆಲ್ ಮೂಲಕ ತಿಳಿಸಿದ್ದಾರೆ. ಅವರಿಗೆ ಈ ಘಟನೆಯಿಂದ ಶಾಕ್ ಆಗಿದ್ದು, ಇದರಿಂದ ಹೊರ ಬರಲು ಅವರ ಬಳಿ ಸಾಧ್ಯವಾಗುತ್ತಿಲ್ಲ.

‘ನಾನು ಒಂದೂವರೆ ಲಕ್ಷ ರೂಪಾಯಿ ಕ್ಯಾಶ್ ಹಿಡಿದು ಹೊರಟಿದ್ದೆ. ನಾನು ಐಫೋನ್ ಒಂದನ್ನು ಖರೀದಿಸಬೇಕಿತ್ತು. ಇದಕ್ಕಾಗಿ ಹಣ ತಂದಿದ್ದೆ. ಆದರೆ, ನನ್ನ ಬ್ಯಾಗ್​ನಲ್ಲಿ ಹಣವೇ ಇಲ್ಲ. ನನಗೆ ಏನು ಮಾಡಬೇಕು ಎಂಬುದೇ ತೋಚುತ್ತಿಲ್ಲ. ಹಣದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು ಎಂದು ನನ್ನ ತಂದೆ ಹೇಳುತ್ತಲೇ ಇದ್ದರು. ಆದರೆ, ಹಣ ಹೇಗೆ ಕಳ್ಳತನ ಆಯಿತು ಎಂಬುದೇ ತಿಳಿದಿಲ್ಲ’ ಎಂದಿದ್ದಾರೆ ಅಭಿಷೇಕ್. ಅವರು ಓಡಾಡಿದ ಜಾಗವನ್ನೆಲ್ಲವನ್ನೂ ನೆನಪಿಸಿಕೊಂಡಿದ್ದಾರೆ. ಆದರೆ, ಹಣ ಯಾವಾಗ ಕಳ್ಳತನವಾಯಿತು ಎಂಬುದನ್ನು ಮಾತ್ರ ಅವರಿಗೆ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ.

‘ನಾನು ಅಷ್ಟು ದೊಡ್ಡ ಮೊತ್ತದ ನಗದನ್ನು ಈವರೆಗೆ ತೆಗೆದುಕೊಂಡು ಹೋಗಿರಲಿಲ್ಲ. ನಾನು ಹಣವನ್ನು ಕಳೆದುಕೊಂಡಿದ್ದು ಹೇಗೆ ಎನ್ನುವುದೇ ಗೊತ್ತಾಗುತ್ತಿಲ್ಲ. ಗಿಫ್ಟ್ ಮಾಡಲು ನಾನು ಐಫೋನ್ ಖರೀದಿ ಮಾಡುವವನಿದ್ದೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಈ ರೀತಿಯ ವಿಚಾರಗಳನ್ನು ನನ್ನಿಂದ ಫೇಸ್ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ವರ್ತೂರು ಸಂತೋಷ್​ ಬಿಗ್ ಬಾಸ್ ಮನೆಯಿಂದ ಎಕ್ಸಿಟ್ ಆಗಿದ್ದು ಹೇಗಿತ್ತು? ಎಪಿಸೋಡ್​ನಲ್ಲಿ ತೋರಿಸಿದ್ದಿಷ್ಟು

ಇತ್ತೀಚೆಗಷ್ಟೇ ಬಿಗ್ ಬಾಸ್ ಹಿಂದಿ ಒಟಿಟಿಯ ಎರಡನೇ ಸೀಸನ್ ಪೂರ್ಣಗೊಂಡಿದೆ. ಯೂಟ್ಯೂಬರ್ ಎಲ್ವಿಶ್ ಯಾದವ್ ಅವರು ವಿನ್ನರ್ ಆದರೆ, ಅಭಿಷೇಕ್ ರನ್ನರ್ ಅಪ್ ಆಗಿದ್ದರು. ಆಲಿಯಾ ಭಟ್ ಸಹೋದರಿ ಪೂಜಾ ಭಟ್​ಗೆ ಹಿನ್ನಡೆ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ