AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಿತ ಯೂಟ್ಯೂಬರ್​ ವಿಕಾಸ್ ಅಲಿಯಾಸ್​ ಹಿಂದುಸ್ತಾನಿ ಬಹೂ ಅರೆಸ್ಟ್​; ಕಾರಣ ಏನು?

ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ಮಿತಿ ಮೀರಿದೆ. ಆದರೆ, ಕೆಲ ಪರೀಕ್ಷೆಗಳನ್ನು ಮುಂದೂಡಲು ಅಲ್ಲಿನ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಇದನ್ನು ವಿರೋಧಿಸಿ ವಿಕಾಸ್​ ಪ್ರತಿಭಟನೆಗೆ ಮುಂದಾಗಿದ್ದರು.

ವಿವಾದಿತ ಯೂಟ್ಯೂಬರ್​ ವಿಕಾಸ್ ಅಲಿಯಾಸ್​ ಹಿಂದುಸ್ತಾನಿ ಬಹೂ ಅರೆಸ್ಟ್​; ಕಾರಣ ಏನು?
ಹಿಂದೂಸ್ತಾನ್​ ಬಹೂ
ರಾಜೇಶ್ ದುಗ್ಗುಮನೆ
|

Updated on:May 09, 2021 | 7:44 PM

Share

ಯೂಟ್ಯೂಬ್​ ವಿಡಿಯೋ ಮೂಲಕ ಸಾಕಷ್ಟು ವಿವಾದ ಸೃಷ್ಟಿಸಿದ್ದ ವಿಕಾಸ್​ ಪಾಠಕ್​ ಅಲಿಯಾಸ್​ ಹಿಂದುಸ್ತಾನಿ ಬಹೂ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ತೆರಳಲು ಎಮೆರ್ಜೆನ್ಸಿ ಸೇವೆಯನ್ನು ದುರ್ಬಳಕೆ ಮಾಡಿಕೊಂಡ ಆರೋಪ ಇವರ ಮೇಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ಮಿತಿ ಮೀರಿದೆ. ಆದರೆ, ಕೆಲ ಪರೀಕ್ಷೆಗಳನ್ನು ಮುಂದೂಡಲು ಅಲ್ಲಿನ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಇದನ್ನು ವಿರೋಧಿಸಿ ವಿಕಾಸ್​ ಪ್ರತಿಭಟನೆಗೆ ಮುಂದಾಗಿದ್ದರು.

ಮಹಾರಾಷ್ಟ್ರದಲ್ಲಿ ಲಾಕ್​ಡೌನ್​ ಇದೆ. ಹೀಗಾಗಿ, ಅನಾವಶ್ಯಕ ಯಾರೂ ಸುತ್ತಾಡುವಂತಿಲ್ಲ, ಪ್ರತಿಭಟನೆ ಮಾಡುವಂತಿಲ್ಲ. ಹೀಗಾಗಿ, ಆಂಬುಲೆನ್ಸ್​ ಮೂಲಕ ವಿಕಾಸ್​ ಮುಂಬೈನ ಶಿವಾಜಿ ಪಾರ್ಕ್​​ಗೆ ತಲುಪಿದ್ದಾರೆ. ಆಂಬುಲೆನ್ಸ್​ ಎಮೆರ್ಜೆನ್ಸಿ ಸೇವೆ ಅಡಿಯಲ್ಲಿ ಬರುವುದರಿಂದ ಅವರು ಸುಲಭವಾಗಿ ಶಿವಾಜಿ ಪಾರ್ಕ್​ ತಲುಪಿದ್ದಾರೆ.

ಶಿವಾಜಿ ಪಾರ್ಕ್​​ನಲ್ಲಿ ಸರ್ಕಾರದ ವಿರುದ್ಧ ವಿಕಾಸ್​ ಘೋಷಣೆ ಕೂಗಿದ್ದಾರೆ. ಅಲ್ಲದೆ, ಪರೀಕ್ಷೆಗಳನ್ನು ಈಗಲೇ ರದ್ದು ಮಾಡುವಂತೆ ಆಗ್ರಹಿಸಿದ್ದಾರೆ. ಎಮೆರ್ಜೆನ್ಸಿ ಸೇವೆಯನ್ನು ದುರ್ಬಳಕೆ ಮಾಡಿಕೊಂಡ ಆರೋಪ ಹಾಗೂ ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದ ಮೇಲೆ ವಿಕಾಸ್​ ಅವರನ್ನು ಬಂಧಿಸಲಾಗಿದ್ದು, ಎಫ್​ಐಆರ್​ ದಾಖಲಾಗಿದೆ. ಸದ್ಯ, ಪೊಲೀಸರು ಈ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ವಿಕಾಸ್ ಯೂಟ್ಯೂಬ್​ ಚಾನೆಲ್​ ಹೆಸರು ಹಿಂದೂಸ್ತಾನಿ ಬಹೂ ಎಂದಿತ್ತು.  ಯೂಟ್ಯೂಬ್​ ವಿಡಿಯೋಗಳ ಮೂಲಕ ಬೆಳಕಿಗೆ ಬಂದವರು. ಇವರು ಸಾಕಷ್ಟು ಜನರು ಹಾಗೂ ಸೆಲೆಬ್ರಿಟಿಗಳ್ನು ಕೆಟ್ಟ ಶಬ್ದಗಳಿಂದ ನಿಂದಿಸಿ ವಿಡಿಯೋ ಮಾಡುತ್ತಿದ್ದರು. ಈ ಕಾರಣಕ್ಕೆ ಯೂಟ್ಯೂಬ್ ಅವರ ಖಾತೆಯನ್ನು ಡಿಲೀಟ್​ ಮಾಡಿದೆ. ಸಾಕಷ್ಟು ಟ್ರೋಲ್ ಪೇಜ್​ಗಳು ಇವರ ವಿಡಿಯೋಗಳನ್ನು ಬಳಕೆ ಮಾಡಿಕೊಂಡಿದ್ದರು.

ಇದನ್ನೂ ಓದಿ: ದೇವರು ಯಾಕೆ ಹೀಗೆ ಮಾಡ್ತಿದ್ದಾನೋ ಗೊತ್ತಿಲ್ಲ; ಬಿಗ್ ಬಾಸ್- 8 ನಿಂತಿದ್ದಕ್ಕೆ ಪ್ರಥಮ್ ಬೇಸರ

Published On - 7:24 pm, Sun, 9 May 21

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!