AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಫಿಕ್ಸ್ ವಿಚಾರದಲ್ಲಿ ಹೆದರಿದ ಜೂನಿಯರ್ ಎನ್​ಟಿಆರ್​; ಮಹತ್ವದ ನಿರ್ಧಾರ ತೆಗೆದುಕೊಂಡ ಟೀಂ

ಇತ್ತೀಚೆಗೆ ದೊಡ್ಡ ಬಜೆಟ್​ ಚಿತ್ರಗಳಲ್ಲಿ ವಿಎಫ್​ಎಕ್ಸ್ ಬಳಕೆ ಹೆಚ್ಚಿದೆ. ಇದರಿಂದ ಚಿತ್ರದ ಮೆರಗು ಕೂಡ ಜಾಸ್ತಿ ಆಗುತ್ತದೆ. ಆದರೆ, ಕೊಂಚ ವ್ಯತ್ಯಾಸವಾದರೂ ಟ್ರೋಲ್ ಆಗಬೇಕಾಗುತ್ತದೆ.

ಗ್ರಾಫಿಕ್ಸ್ ವಿಚಾರದಲ್ಲಿ ಹೆದರಿದ ಜೂನಿಯರ್ ಎನ್​ಟಿಆರ್​; ಮಹತ್ವದ ನಿರ್ಧಾರ ತೆಗೆದುಕೊಂಡ ಟೀಂ
ಜೂನಿಯರ್ ಎನ್​ಟಿಆರ್​ ಚಿತ್ರಕ್ಕೆ ವಿಎಫ್​ಎಕ್ಸ್ ಭಯ
ರಾಜೇಶ್ ದುಗ್ಗುಮನೆ
|

Updated on: Mar 29, 2023 | 6:30 AM

Share

ಸ್ಟಾರ್ ನಟರ ಸಿನಿಮಾಗಳು ಸಾಕಷ್ಟು ಗಮನಸೆಳೆಯುತ್ತವೆ. ಸ್ಟಾರ್​ ಹೀರೋಗಳ ಸಿನಿಮಾದ ಪೋಸ್ಟರ್, ಟೀಸರ್​, ಟ್ರೇಲರ್, ಸಾಂಗ್ ರಿಲೀಸ್ ಆದರೆ ಸಾಕಷ್ಟು ಸದ್ದು ಆಗುತ್ತದೆ. ಪ್ರೇಕ್ಷಕರಿಗೆ ಅದು ಹಿಡಿಸದೇ ಇದ್ದರೆ ಟ್ರೋಲ್  ಆಗುತ್ತದೆ. ಪ್ರಭಾಸ್ ನಟನೆಯ ‘ಆದಿಪುರುಷ್​’ (Adipurush) ಸಿನಿಮಾದ ಟೀಸರ್​ಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಇದು ಚಿತ್ರಕ್ಕೆ ದೊಡ್ಡ ಹಿನ್ನಡೆ ಎಂದೇ ಹೇಳಾಯಿತು. ‘ಆದಿಪುರುಷ್​’ (Adipurush)ಟ್ರೋಲ್ ಆಗೋಕೆ ಪ್ರಮುಖ ಕಾರಣ ಕಳಪೆ ವಿಎಫ್​ಎಕ್ಸ್. ಈ ವಿಚಾರದಲ್ಲಿ ಜೂನಿಯರ್​ ಎನ್​ಟಿಆರ್​ಗೆ (Jr NTR) ಭಯ ಶುರುವಾಗಿದೆ. ಹೀಗಾಗಿ, ಅವರ ಮುಂದಿನ ಚಿತ್ರಕ್ಕೆ ವಿಎಫ್​ಎಕ್ಸ್ ಕೆಲಸಕ್ಕೆ ಹಾಲಿವುಡ್​ ದಿಗ್ಗಜನ ಕರೆತರಲಾಗಿದೆ.

ಇತ್ತೀಚೆಗೆ ದೊಡ್ಡ ಬಜೆಟ್​ ಚಿತ್ರಗಳಲ್ಲಿ ವಿಎಫ್​ಎಕ್ಸ್ ಬಳಕೆ ಹೆಚ್ಚಿದೆ. ಇದರಿಂದ ಚಿತ್ರದ ಮೆರಗು ಕೂಡ ಜಾಸ್ತಿ ಆಗುತ್ತದೆ. ಆದರೆ, ಕೊಂಚ ವ್ಯತ್ಯಾಸವಾದರೂ ಟ್ರೋಲ್ ಆಗಬೇಕಾಗುತ್ತದೆ. ಪ್ರಭಾಸ್ ನಟನೆಯ ‘ಆದಿಪುರುಷ್​’ ಚಿತ್ರ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದಕ್ಕೆ ಕಳಪೆ ವಿಎಫ್​ಎಕ್ಸ್ ಮುಖ್ಯ ಕಾರಣ ಎಂಬುದು ಎಲ್ಲರಿಗೂ ಅರಿವಾಗಿದೆ. ಕಳೆದ ವರ್ಷ ರಿಲೀಸ್ ಆದ ‘ಬ್ರಹ್ಮಾಸ್ತ್ರ’ ಸಿನಿಮಾದ ಗ್ರಾಫಿಕ್ಸ್ ಬಗ್ಗೆಯೂ ಟೀಕೆ ಎದುರಾಗಿತ್ತು. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೊರಟಾಲ ಶಿವ ಹಾಗೂ ಜೂನಿಯರ್ ಎನ್​ಟಿಆರ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:  NTR 30: ಜೂ ಎನ್​ಟಿಆರ್ ಸಿನಿಮಾಕ್ಕೆ ಹಾಲಿವುಡ್ ಆಕ್ಷನ್ ನಿರ್ದೇಶಕ

ಜೂನಿಯರ್ ಎನ್​ಟಿಆರ್ 30ನೇ ಸಿನಿಮಾಗೆ ವಿಎಫ್​ಎಕ್ಸ್ ಮೇಲ್ವಿಚಾರಕರಾಗಿ ಹಾಲಿವುಡ್​ನ ಬ್ರಾಡ್ ಮಿನ್ನಿಚ್ ಅವರು ಆಗಮಿಸಿದ್ದಾರೆ. ಅವರು ಈ ಚಿತ್ರಕ್ಕೆ ಗ್ರಾಫಿಕ್ಸ್ ನೀಡಲಿದ್ದಾರೆ. ಅವರ ಟೀಂ ಈ ಚಿತ್ರಕ್ಕಾಗಿ ಕೆಲಸ ಮಾಡಲಿದೆ. ಜೂನಿಯರ್​ ಎನ್​ಟಿರ್ ನಟನೆಯ ಈ ಸಿನಿಮಾದಲ್ಲಿ ಗ್ರಾಫಿಕ್ಸ್ ಕೆಲಸಗಳು ಹೆಚ್ಚಿರಲಿವೆಯಂತೆ. ಈ ಕಾರಣಕ್ಕೆ ನಿರ್ಮಾಪಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿ ಆಗಿದೆ. ‘ದಿ ಗುಡ್ ಲಾರ್ಡ್ ಬರ್ಡ್​’, ‘ಒಬಿ-ವ್ಯಾನ್ ಕೆನೋಬಿ’ ಮೊದಲಾದ ಹಾಲಿವುಡ್​ ಸಿನಿಮಾಗಳಲ್ಲಿ ಬ್ರಾಡ್ ಮಿನ್ನಿಚ್ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:  NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಮುಹೂರ್ತ; ಇಲ್ಲಿದೆ ಫೋಟೋ ಗ್ಯಾಲರಿ

‘NTR30’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಸಾಕಷ್ಟು ಕಾರಣ ಇದೆ. ‘ಆರ್​ಆರ್​ಆರ್​’ ಯಶಸ್ಸಿನ ಬಳಿಕ ಜೂನಿಯರ್ ಎನ್​ಟಿಆರ್ ಒಪ್ಪಿಕೊಂಡಿರೋ ಸಿನಿಮಾ ಇದು. ಜೂನಿಯರ್ ಎನ್​ಟಿಆರ್​ ಹಾಗೂ ಕೊರಟಾಲ ಶಿವ ಕಾಂಬಿನೇಷನ್​ನಲ್ಲಿ ಮೂಡಿಬಂದ ‘ಜನತಾ ಗ್ಯಾರೇಜ್​’ ಸಿನಿಮಾ ಸೂಪರ್ ಹಿಟ್ ಆಯಿತು. ಈಗ ಇದೇ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ