AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಾಲಿವುಡ್ ಸ್ಟುಡಿಯೋ ಜೊತೆ ಮಾತುಕತೆ ನಡೆಯುತ್ತಿದೆ’; ‘ಜವಾನ್’ ಬಳಿಕ ಹೆಚ್ಚಿತು ಅಟ್ಲಿ ಬೇಡಿಕೆ

ಭಾರತದ ಸಿನಿಮಾಗಳಲ್ಲಿ ನಟಿಸಿ ಆ ಬಳಿಕ ಹಾಲಿವುಡ್​ನಲ್ಲಿ ಗುರುತಿಸಿಕೊಂಡ ಅನೇಕರಿದ್ದಾರೆ. ಆದರೆ, ನಿರ್ದೇಶಕರು ಈ ರೀತಿಯ ಪ್ರಯತ್ನಕ್ಕೆ ಕೈ ಹಾಕಿಲ್ಲ. ಅಟ್ಲಿ ಅವರು ಹೀಗೊಂದು ಅಪರೂಪದ ಸಾಧನೆ ಮಾಡಲು ಮುಂದಾಗಿದ್ದಾರೆ.

‘ಹಾಲಿವುಡ್ ಸ್ಟುಡಿಯೋ ಜೊತೆ ಮಾತುಕತೆ ನಡೆಯುತ್ತಿದೆ’; ‘ಜವಾನ್’ ಬಳಿಕ ಹೆಚ್ಚಿತು ಅಟ್ಲಿ ಬೇಡಿಕೆ
ಅಟ್ಲಿ
ರಾಜೇಶ್ ದುಗ್ಗುಮನೆ
|

Updated on: Oct 06, 2023 | 12:32 PM

Share

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ಸೂಪರ್ ಹಿಟ್ ಆಗಿದೆ. ಈ ಚಿತ್ರದಿಂದ ನಿರ್ದೇಶಕ ಅಟ್ಲಿ ಖ್ಯಾತಿ ವಿಶ್ವ ಮಟ್ಟಕ್ಕೆ ಹಬ್ಬಿದೆ. ಇಷ್ಟು ದಿನ ತಮಿಳಿನಲ್ಲಿ ಬ್ಯುಸಿ ಇದ್ದ ಅಟ್ಲಿ ಬಳಿಕ ಬಾಲಿವುಡ್​ಗೆ ಹಾರಿದರು. ಈಗ ಅವರು ಹಾಲಿವುಡ್​​ಗೆ ಹೋಗೋಕೆ ರೆಡಿ ಆಗಿದ್ದಾರೆ. ಅಲ್ಲಿನ ಸ್ಟುಡಿಯೋಗಳ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಅಟ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಭಾರತದ ಸಿನಿಮಾಗಳಲ್ಲಿ ನಟಿಸಿ ಆ ಬಳಿಕ ಹಾಲಿವುಡ್​ನಲ್ಲಿ ಗುರುತಿಸಿಕೊಂಡ ಅನೇಕರಿದ್ದಾರೆ. ಆದರೆ, ನಿರ್ದೇಶಕರು ಈ ರೀತಿಯ ಪ್ರಯತ್ನಕ್ಕೆ ಕೈ ಹಾಕಿಲ್ಲ. ಅಟ್ಲಿ ಅವರು ಹೀಗೊಂದು ಅಪರೂಪದ ಸಾಧನೆ ಮಾಡಲು ಮುಂದಾಗಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡುತ್ತಾ ಅವರು ಈ ವಿಚಾರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

‘ಸಿನಿಮಾಗೆ ಯಾವುದೇ ವರ್ಗೀಕರಣ ಇಲ್ಲ. ಶಾರುಖ್ ಅವರದ್ದು ಇದೇ ವಿಷನ್. ಅವರಿಗೆ ಈ ರೀತಿಯ ಮನಸ್ಥಿತಿ ಇರಲಿಲ್ಲ ಎಂದಾಗಿದ್ದರೆ ಅವರು ನನ್ನನ್ನು ಕರೆಯುತ್ತಲೇ ಇರಲಿಲ್ಲ. ಒಂದು ದೇಶದ ಸಿನಿಮಾ ಎಂಬ ಮನಸ್ಥಿತಿ ಇರಬೇಕು ಎಂಬುದು ಶಾರುಖ್ ಖಾನ್ ಅಭಿಪ್ರಾಯ. ನಾನು ಪ್ರೇಕ್ಷಕರಿಗೆ ಧನ್ಯವಾದ ಹೇಳಬಯಸುತ್ತೇನೆ. ಈ ಮೊದಲು ಪ್ರೇಕ್ಷಕರು ದಕ್ಷಿಣದ ಮಸಾಲಾಯುಕ್ತ ಸಿನಿಮಾ ಎನ್ನುತ್ತಿದ್ದರು. ನನಗೆ ಅದೇನು ಎಂಬುದೇ ಗೊತ್ತಿರಲಿಲ್ಲ. ದಕ್ಷಿಣದಲ್ಲಿ ಮಾಡಿದ್ದನ್ನೇ ಇಲ್ಲಿಯೂ (ಬಾಲಿವುಡ್) ಮಾಡಿದೆ.  ಪ್ರೇಕ್ಷಕರಿಗೆ ಕೆಟ್ಟದ್ದು ಯಾವುದು, ಒಳ್ಳೆಯದು ಯಾವುದು ಅನ್ನೋದು ಗೊತ್ತಿದೆ’ ಎಂದಿದ್ದಾರೆ ಅಟ್ಲಿ.

ಇದನ್ನೂ ಓದಿ: ಮುಂಬೈನಲ್ಲಿ ನಡೆಯಿತು ಅಲ್ಲು ಅರ್ಜುನ್-ಅಟ್ಲಿ ಭೇಟಿ; ಹೊಸ ಚಿತ್ರಕ್ಕೆ ರೆಡಿ ಆದ ಜೋಡಿ?

‘ಹಾಲಿವುಡ್​ನಲ್ಲೂ ಸಿನಿಮಾಗೆ ವರ್ಗೀಕರಣ ಇಲ್ಲ. ಎರಡು ದಿನಗಳ ಹಿಂದೆ ಹಾಲಿವುಡ್​ ಸ್ಟುಡಿಯೋದ ಜೊತೆ ಮಾತುಕತೆ ನಡೆಸಿದೆ. ಅವರು ನನ್ನನ್ನು ಡೈರೆಕ್ಟರ್ ಎಂದು ಮಾತ್ರ ಗುರುತಿಸಿದರು. ನಾನು ತಮಿಳು ಸಿನಿಮಾ ನಿರ್ದೇಶಕ ಎಂದೆಲ್ಲ ಪರಿಗಣನೆಗೆ ತೆಗೆದುಕೊಂಡಿಲ್ಲ. ನಾನು ಹಾಲಿವುಡ್ ಸಿನಿಮಾ ಮಾಡುತ್ತೇನೆ ಎನ್ನುವುದಿಲ್ಲ. ನಾವು ಹಾಲಿವುಡ್ ಸಿನಿಮಾ ಮಾಡುತ್ತೇವೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ