AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಲ್​ ಸ್ಮಿತ್ ಭಾರತಕ್ಕೆ ಕಾಲಿಟ್ಟಿದ್ದೇಕೆ? ಇದಕ್ಕಿದೆ ಕಪಾಳಮೋಕ್ಷದ ಕನೆಕ್ಷನ್

ಆಸ್ಕರ್ ಸಮಾರಂಭದಲ್ಲಿ ವಿಲ್​ ಸ್ಮಿತ್ ಮಾಡಿಕೊಂಡ ವಿವಾದದಿಂದ 10 ವರ್ಷ ಬ್ಯಾನ್​ಗೆ ಒಳಗಾಗಿದ್ದಾರೆ. ಅವರು ಥೆರಪಿಗೆ ಒಳಗಾಗಲು ಅವರು ಭಾರತಕ್ಕೆ ಬಂದಿದ್ದರು ಎನ್ನಲಾಗಿದೆ.

ವಿಲ್​ ಸ್ಮಿತ್ ಭಾರತಕ್ಕೆ ಕಾಲಿಟ್ಟಿದ್ದೇಕೆ? ಇದಕ್ಕಿದೆ ಕಪಾಳಮೋಕ್ಷದ ಕನೆಕ್ಷನ್
ವಿಲ್ ಸ್ಮಿತ್
TV9 Web
| Edited By: |

Updated on: May 06, 2022 | 6:29 PM

Share

ಆಸ್ಕರ್ ಸಮಾರಂಭದಲ್ಲಿ (Oscar Award) ಪತ್ನಿಯ ಬಗ್ಗೆ ಜೋಕ್ ಮಾಡಿದ ಕಾಮಿಡಿ ನಟ ಕ್ರಿಸ್ ರಾಕ್ (Chris Rock) ಕೆನ್ನೆಗೆ ಬಾರಿಸಿದ್ದರು ವಿಲ್ ಸ್ಮಿತ್. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ನಂತರ ಅಕಾಡೆಮಿ ಈ ವಿಚಾರವಾಗಿ ಸಭೆ ನಡೆಸಿ, 10 ವರ್ಷ ವಿಲ್​ ಸ್ಮಿತ್ ಅವರನ್ನು ಅಕಾಡೆಮಿಯಿಂದ ಹೊರಗೆ ಇಡುವ ನಿರ್ಧಾರಕ್ಕೆ ಬಂದಿದೆ. ಅವರ ವೃತ್ತಿ ಜೀವನಕ್ಕೆ ಇದು ಕಪ್ಪು ಚುಕ್ಕೆ ಆಗಿದೆ. ಕಳೆದ ತಿಂಗಳು ವಿಲ್​ ಸ್ಮಿತ್ ಅವರು (Will Smith) ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ನಗುನಗುತ್ತಾ ಕಾರಿನಿಂದ ಇಳಿಯುತ್ತಿರುವ ಫೋಟೋ ವೈರಲ್ ಆಗಿತ್ತು . ಅವರು ಭಾರತಕ್ಕೆ ಬಂದಿದ್ದು ಏಕೆ ಎನ್ನುವ ವಿಚಾರದ ಬಗ್ಗೆ ಚರ್ಚೆ ನಡೆದಿತ್ತು. ಈಗ ಇದಕ್ಕೆ ಉತ್ತರ ಸಿಕ್ಕಿದೆ.

ವಿಲ್​ ಸ್ಮಿತ್​ಗೂ  ಭಾರತಕ್ಕೂ ಮೊದಲಿನಿಂದಲೂ ಒಳ್ಳೆಯ ನಂಟಿದೆ. 2019ರಲ್ಲಿ ಅವರು ಭಾರತಕ್ಕೆ   ಆಗಮಿಸಿದ್ದರು. ಇದಾದ ಬಳಿಕ ಕೊವಿಡ್ ಕಾಣಿಸಿಕೊಂಡಿತು. ಎರಡು ವರ್ಷಗಳ ಕಾಲ ಜನರ ಜೀವನ ಅಸ್ತವ್ಯಸ್ಥವಾಗಿತ್ತು. ಈಗ ಎಲ್ಲವೂ ಸರಿಹಾದಿಗೆ ಬರುತ್ತಿದೆ. ಆದರೆ, ವಿಲ್ ಸ್ಮಿತ್ ಜೀವನದಲ್ಲಿ ಸಂಕಷ್ಟ ಎದುರಾಗಿದೆ. ಆಸ್ಕರ್ ಸಮಾರಂಭದಲ್ಲಿ ಅವರು ಮಾಡಿಕೊಂಡ ವಿವಾದದಿಂದ 10 ವರ್ಷ ಬ್ಯಾನ್​ಗೆ ಒಳಗಾಗಿದ್ದಾರೆ. ಇದಾದ ಬಳಿಕ ವಿಲ್​ ಸ್ಮಿತ್ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಈಗ ಅವರು ಭಾರತಕ್ಕೆ ಬಂದಿಳಿದಿದ್ದರು. ಥೆರಪಿಗೆ ಒಳಗಾಗಲು ಅವರು ಭಾರತಕ್ಕೆ ಬಂದಿದ್ದರು ಎನ್ನಲಾಗಿದೆ.

ಆಸ್ಕರ್ ವೇಳೆ ನಡೆದ ಘಟನೆಯಿಂದ ವಿಲ್​ ಸ್ಮಿತ್​ ವಿಚಲಿತಗೊಂಡಿದ್ದಾರೆ. ಹೀಗಾಗಿ, ಅವರು ಭಾರತದಲ್ಲಿ ಥೆರಪಿಗೆ ಒಳಗಾಗಲು ಬಂದಿದ್ದಾರೆ. ಈ ಬಗ್ಗೆ ಅವರ ಕಡೆಯಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಇದನ್ನೂ ಓದಿ
Image
ಮುತ್ತು ಕೊಟ್ಟ ಪತ್ರಕರ್ತನ ಕೆನ್ನೆಗೆ ಬಾರಿಸಿದ್ದ ವಿಲ್​ ಸ್ಮಿತ್​; ಆಸ್ಕರ್​ ಗಲಾಟೆ ಬಳಿಕ ಮತ್ತೊಂದು ವಿಡಿಯೋ ವೈರಲ್​
Image
ಆಸ್ಕರ್​ ವೇದಿಕೆಯಲ್ಲಿ ನಟ ಕ್ರಿಸ್​ ರಾಕ್​ ಕೆನ್ನೆಗೆ ಹೊಡೆದ ವಿಲ್​ ಸ್ಮಿತ್​ ಬಗ್ಗೆ ತಾಯಿಯ ಪ್ರತಿಕ್ರಿಯೆ ಏನು?
Image
ಆಸ್ಕರ್ ವೇದಿಕೆಯ ಕಪಾಳಮೋಕ್ಷಕ್ಕೆ ಅಲೋಪೆಸಿಯಾ ಕಾರಣ?! ವಿಲ್ ಸ್ಮಿತ್ ಪತ್ನಿಯ ಕೂದಲು ಹಾಗಿರುವುದೇಕೆ?
Image
ಪತ್ನಿ ಬಗ್ಗೆ ಜೋಕ್​ ಮಾಡಿದ್ದಕ್ಕೆ ಆಸ್ಕರ್​ ವೇದಿಕೆ ಮೇಲೆ ನಟನ ಕೆನ್ನೆಗೆ ಬಾರಿಸಿದ ವಿಲ್​ ಸ್ಮಿತ್​; ವಿಡಿಯೋ ವೈರಲ್​

ವಿಲ್ ಸ್ಮಿತ್ ಭಾರತಕ್ಕೆ ಬಂದಿದ್ದು ಇದೇ ಮೊದಲೇನಲ್ಲ. 2019ರಲ್ಲಿ ವಿಲ್​ ಸ್ಮಿತ್ ಅವರು ಹರಿದ್ವಾರಕ್ಕೆ ಭೇಟಿ ನೀಡಿದ್ದರು. ‘ಫೇಸ್​ಬುಕ್ ವಾಚ್ ಸೀರಿಸ್’ ಉದ್ದೇಶದಿಂದ ಅವರು ಇಲ್ಲಿಗೇ ಭೇಟಿ ನೀಡಿದ್ದರು. ‘ದೇವರು ಅನುಭವದ ಮೂಲಕ ಕಲಿಸುತ್ತಾನೆ ಎಂದು ನನ್ನ ಅಜ್ಜಿ ಯಾವಾಗಲೂ ಹೇಳುತ್ತಿದ್ದರು. ಭಾರತಕ್ಕೆ ಭೇಟಿ ನೀಡುವುದು ಮತ್ತು ಇಲ್ಲಿನ ಬಣ್ಣಗಳು, ಜನರು ಮತ್ತು ನೈಸರ್ಗಿಕ ಸೌಂದರ್ಯವನ್ನು ಅನುಭವಿಸುವುದರಿಂದ ನನ್ನ, ನನ್ನ ಕಲೆಯ ಹೊಸ ತಿಳುವಳಿಕೆಯು ಜಾಗೃತಗೊಂಡಿದೆ ಎಂದು’ ಅವರು ಹೇಳಿದ್ದರು. ‘ಸ್ಟುಡೆಂಟ್ ಆಫ್ ದಿ ಇಯರ್ 2’ ಚಿತ್ರದಲ್ಲಿ ಅವರು ಅತಿಥಿ ಮಾಡಿದ್ದರು. ಇದರ ಶೂಟಿಂಗ್​ಗಾಗಿ ಅವರು ಮುಂಬೈಗೆ ಬಂದಿದ್ದರು. ಭಾರತದ ಹಲವು ಸ್ಟಾರ್​ಗಳು ವಿಲ್ ಸ್ಮಿತ್ ಜತೆ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ವಿವಾದದ ಬಳಿಕ ಈ ಫೋಟೋಗಳು ವೈರಲ್ ಆಗಿದ್ದವು.

ವಿಲ್​ ಸ್ಮಿತ್​ ಕ್ಷಮೆ ಕೇಳಿದರೂ ಶಿಕ್ಷೆ ತಪ್ಪಲಿಲ್ಲ:

ಈ ಬಾರಿಯ ಆಸ್ಕರ್​ ವೇದಿಕೆಯಲ್ಲಿ ವಿಲ್​ ಸ್ಮಿತ್ ಅವರಿಗೆ ಸಿಹಿ ಮತ್ತು ಕಹಿ ಎರಡೂ ಅನುಭವ ಆಯಿತು. ಪತ್ನಿಯ ಬಗ್ಗೆ ಕಾಮಿಡಿ ಮಾಡಿದ ಕ್ರಿಸ್​ ರಾಕ್​ಗೆ ಕಪಾಳಮೋಕ್ಷ ಮಾಡಿದ ನಂತರ ವಿಲ್​ ಸ್ಮಿತ್ ಅವರು ವೇದಿಕೆ ಏರಿ ‘ಅತ್ಯುತ್ತಮ ನಟ’ ಆಸ್ಕರ್​ ಪ್ರಶಸ್ತಿ ಪಡೆದುಕೊಂಡರು. ‘ಕಿಂಗ್​ ರಿಚರ್ಡ್​’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅವರಿಗೆ ಈ ಪ್ರಶಸ್ತಿ ಸಿಕ್ಕಿತು. ಪ್ರಶಸ್ತಿ ಸ್ವೀಕರಿಸಲು ವೇದಿಕೆ ಏರಿದ ಅವರು ಎಲ್ಲರಲ್ಲೂ ಕ್ಷಮೆ ಕೇಳಿದರು. ಕೆನ್ನೆಗೆ ಹೊಡೆದಿದ್ದಕ್ಕೆ ಅವರು ಪಶ್ಚಾತ್ತಾಪದಿಂದ ಕಣ್ಣೀರು ಹಾಕಿದರು. ನಂತರ ಅಕಾಡೆಮಿ ಸದಸ್ಯತ್ವಕ್ಕೆ ಅವರು ರಾಜೀನಾಮೆ ನೀಡಿದರು. ಆದರೂ ಕೂಡ ವಿಲ್​ ಸ್ಮಿತ್​ ಅವರಿಗೆ ಶಿಕ್ಷೆ ತಪ್ಪಲಿಲ್ಲ.

 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್