AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ನಟಿ ಆಲಿಯಾ ಭಟ್ ಈಗ ವಿಲನ್; ರಣಬೀರ್ ಸಿನಿಮಾ ಎದುರೇ ರಿಲೀಸ್

Heart Of Stone Movie Trailer: ‘ಹಾರ್ಟ್ ಆಫ್ ಸ್ಟೋನ್​’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಹಿಂಟ್ ನೀಡಲಾಗಿದೆ. ಆಲಿಯಾ ಭಟ್ ಕೂಡ ಆ್ಯಕ್ಷನ್ ಮೆರೆದಿದ್ದಾರೆ.

Alia Bhatt: ನಟಿ ಆಲಿಯಾ ಭಟ್ ಈಗ ವಿಲನ್; ರಣಬೀರ್ ಸಿನಿಮಾ ಎದುರೇ ರಿಲೀಸ್
ಆಲಿಯಾ ಭಟ್
ರಾಜೇಶ್ ದುಗ್ಗುಮನೆ
|

Updated on:Jun 19, 2023 | 8:58 AM

Share

ನಟಿ ಆಲಿಯಾ ಭಟ್ (Alia Bhatt) ಅವರು ಗ್ಲಾಮರ್ ಹಾಗೂ ಮಹಿಳಾ ಪ್ರಧಾನ ಪಾತ್ರಗಳ ಮೂಲಕ ಗಮನ ಸೆಳೆದವರು. ಅವರು ಈವರೆಗೆ ವಿಲನ್ ಪಾತ್ರ ಮಾಡಿರಲಿಲ್ಲ. ಈಗ ಅಂಥದ್ದೊಂದು ಪಾತ್ರದಲ್ಲಿ ನಟಿಸಿದ್ದಾರೆ. ಹಾಲಿವುಡ್​ನಲ್ಲಿ ನಟಿಸಿದ ಮೊದಲ ಸಿನಿಮಾ ‘ಹಾರ್ಟ್ ಆಫ್​ ಸ್ಟೋನ್​’ನಲ್ಲಿ ಆಲಿಯಾ ಭಟ್ ವಿಲನ್ ಪಾತ್ರ ಮಾಡಿದ್ದಾರೆ. ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಮೂಲಕ ಈ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ದಿನ ರಣಬೀರ್ ಕಪೂರ್ (Ranbir Kapoor) ನಟನೆಯ ‘ಅನಿಮಲ್’ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ ಅನ್ನೋದು ವಿಶೇಷ.

‘ಹಾರ್ಟ್ ಆಫ್ ಸ್ಟೋನ್​’ ಚಿತ್ರದ ಟ್ರೇಲರ್ ಭಾನುವಾರ (ಜೂನ್ 18) ರಿಲೀಸ್ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಹಿಂಟ್ ನೀಡಲಾಗಿದೆ. ಆಲಿಯಾ ಭಟ್ ಕೂಡ ಟ್ರೇಲರ್​ನಲ್ಲಿ ಆ್ಯಕ್ಷನ್ ಮೆರೆದಿದ್ದಾರೆ. ಅವರು ವಿಲನ್ ಆಗಿ ಗಮನ ಸೆಳೆದಿದ್ದಾರೆ. ಸಿನಿಮಾದಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಮೂಡಿಬರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

‘ಹಾರ್ಟ್ ಆಫ್ ಸ್ಟೋನ್’ ಸಿನಿಮಾಗೆ ಟಾಮ್ ಹಾರ್ಪರ್​ ನಿರ್ದೇಶನ ಮಾಡಿದ್ದಾರೆ. ಗಾಲ್​ ಗಡೋಟ್ ಅವರು ಈ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ. ‘ಫಾಸ್ಟ್​ ಆ್ಯಂಡ್ ಫ್ಯೂರಿಯಸ್’ ಸಿನಿಮಾ ಮೂಲಕ ಗಾಲ್ ಗಡೋಟ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಅವರು ನಟಿಸಿ ಫೇಮಸ್ ಆದರು.

ಇದನ್ನೂ ಓದಿ: ರಾಮಾಯಣ ಕಥೆ ಆಧರಿತ ಸಿನಿಮಾದಲ್ಲಿ ಆಲಿಯಾ ಭಟ್​ಗೆ ಸೀತೆ ಪಾತ್ರ; ರಾಮನಾಗಿ ರಣಬೀರ್​ ಕಪೂರ್​?

‘ಹಾರ್ಟ್ ಆಫ್ ಸ್ಟೋನ್’ ಚಿತ್ರವನ್ನು ಅದ್ದೂರಿಯಾಗಿ ಕಟ್ಟಿಕೊಡಲಾಗಿದೆ. ಇಟಲಿ, ಲಂಡನ್​ ಮೊದಲಾದ ಭಾಗಗಳಲ್ಲಿ ಈ ಚಿತ್ರವನ್ನು ಶೂಟ್ ಮಾಡಲಾಗಿದೆ. ಈ ಸಿನಿಮಾದಲ್ಲಿ ಯಾವೆಲ್ಲ ಅಂಶ ಇರಲಿದೆ ಎಂಬುದನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಆಲಿಯಾ ಅವರು ‘ಹಾರ್ಟ್​​’ ಹೆಸರಿನ ವಸ್ತುವನ್ನು ಕದಿಯುತ್ತಾರೆ ಮತ್ತು ರೇಚಲ್​ಗೆ ಸವಾಲು ಹಾಕುತ್ತಾರೆ.

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರ ಆಗಸ್ಟ್​ 11ರಂದು ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದೆ. ಆಲಿಯಾ ಭಟ್ ಸಿನಿಮಾ ನೇರವಾಗಿ ಒಟಿಟಿಗೆ ಲಗ್ಗೆ ಇಡುತ್ತಿದೆ. ಈ ಸಿನಿಮಾ ಬಗ್ಗೆ ಇರುವ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:11 am, Mon, 19 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು