AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ನಟಿ ಆಲಿಯಾ ಭಟ್ ಈಗ ವಿಲನ್; ರಣಬೀರ್ ಸಿನಿಮಾ ಎದುರೇ ರಿಲೀಸ್

Heart Of Stone Movie Trailer: ‘ಹಾರ್ಟ್ ಆಫ್ ಸ್ಟೋನ್​’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಹಿಂಟ್ ನೀಡಲಾಗಿದೆ. ಆಲಿಯಾ ಭಟ್ ಕೂಡ ಆ್ಯಕ್ಷನ್ ಮೆರೆದಿದ್ದಾರೆ.

Alia Bhatt: ನಟಿ ಆಲಿಯಾ ಭಟ್ ಈಗ ವಿಲನ್; ರಣಬೀರ್ ಸಿನಿಮಾ ಎದುರೇ ರಿಲೀಸ್
ಆಲಿಯಾ ಭಟ್
ರಾಜೇಶ್ ದುಗ್ಗುಮನೆ
|

Updated on:Jun 19, 2023 | 8:58 AM

Share

ನಟಿ ಆಲಿಯಾ ಭಟ್ (Alia Bhatt) ಅವರು ಗ್ಲಾಮರ್ ಹಾಗೂ ಮಹಿಳಾ ಪ್ರಧಾನ ಪಾತ್ರಗಳ ಮೂಲಕ ಗಮನ ಸೆಳೆದವರು. ಅವರು ಈವರೆಗೆ ವಿಲನ್ ಪಾತ್ರ ಮಾಡಿರಲಿಲ್ಲ. ಈಗ ಅಂಥದ್ದೊಂದು ಪಾತ್ರದಲ್ಲಿ ನಟಿಸಿದ್ದಾರೆ. ಹಾಲಿವುಡ್​ನಲ್ಲಿ ನಟಿಸಿದ ಮೊದಲ ಸಿನಿಮಾ ‘ಹಾರ್ಟ್ ಆಫ್​ ಸ್ಟೋನ್​’ನಲ್ಲಿ ಆಲಿಯಾ ಭಟ್ ವಿಲನ್ ಪಾತ್ರ ಮಾಡಿದ್ದಾರೆ. ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಮೂಲಕ ಈ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ದಿನ ರಣಬೀರ್ ಕಪೂರ್ (Ranbir Kapoor) ನಟನೆಯ ‘ಅನಿಮಲ್’ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ ಅನ್ನೋದು ವಿಶೇಷ.

‘ಹಾರ್ಟ್ ಆಫ್ ಸ್ಟೋನ್​’ ಚಿತ್ರದ ಟ್ರೇಲರ್ ಭಾನುವಾರ (ಜೂನ್ 18) ರಿಲೀಸ್ ಆಗಿದೆ. ಈ ಚಿತ್ರದುದ್ದಕ್ಕೂ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಹಿಂಟ್ ನೀಡಲಾಗಿದೆ. ಆಲಿಯಾ ಭಟ್ ಕೂಡ ಟ್ರೇಲರ್​ನಲ್ಲಿ ಆ್ಯಕ್ಷನ್ ಮೆರೆದಿದ್ದಾರೆ. ಅವರು ವಿಲನ್ ಆಗಿ ಗಮನ ಸೆಳೆದಿದ್ದಾರೆ. ಸಿನಿಮಾದಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಮೂಡಿಬರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

‘ಹಾರ್ಟ್ ಆಫ್ ಸ್ಟೋನ್’ ಸಿನಿಮಾಗೆ ಟಾಮ್ ಹಾರ್ಪರ್​ ನಿರ್ದೇಶನ ಮಾಡಿದ್ದಾರೆ. ಗಾಲ್​ ಗಡೋಟ್ ಅವರು ಈ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ. ‘ಫಾಸ್ಟ್​ ಆ್ಯಂಡ್ ಫ್ಯೂರಿಯಸ್’ ಸಿನಿಮಾ ಮೂಲಕ ಗಾಲ್ ಗಡೋಟ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಅವರು ನಟಿಸಿ ಫೇಮಸ್ ಆದರು.

ಇದನ್ನೂ ಓದಿ: ರಾಮಾಯಣ ಕಥೆ ಆಧರಿತ ಸಿನಿಮಾದಲ್ಲಿ ಆಲಿಯಾ ಭಟ್​ಗೆ ಸೀತೆ ಪಾತ್ರ; ರಾಮನಾಗಿ ರಣಬೀರ್​ ಕಪೂರ್​?

‘ಹಾರ್ಟ್ ಆಫ್ ಸ್ಟೋನ್’ ಚಿತ್ರವನ್ನು ಅದ್ದೂರಿಯಾಗಿ ಕಟ್ಟಿಕೊಡಲಾಗಿದೆ. ಇಟಲಿ, ಲಂಡನ್​ ಮೊದಲಾದ ಭಾಗಗಳಲ್ಲಿ ಈ ಚಿತ್ರವನ್ನು ಶೂಟ್ ಮಾಡಲಾಗಿದೆ. ಈ ಸಿನಿಮಾದಲ್ಲಿ ಯಾವೆಲ್ಲ ಅಂಶ ಇರಲಿದೆ ಎಂಬುದನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಆಲಿಯಾ ಅವರು ‘ಹಾರ್ಟ್​​’ ಹೆಸರಿನ ವಸ್ತುವನ್ನು ಕದಿಯುತ್ತಾರೆ ಮತ್ತು ರೇಚಲ್​ಗೆ ಸವಾಲು ಹಾಕುತ್ತಾರೆ.

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರ ಆಗಸ್ಟ್​ 11ರಂದು ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದೆ. ಆಲಿಯಾ ಭಟ್ ಸಿನಿಮಾ ನೇರವಾಗಿ ಒಟಿಟಿಗೆ ಲಗ್ಗೆ ಇಡುತ್ತಿದೆ. ಈ ಸಿನಿಮಾ ಬಗ್ಗೆ ಇರುವ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:11 am, Mon, 19 June 23

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್