AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಹಾಲಿವುಡ್​ ನಟಿಗೆ ತೆಲುಗು ಹೇಳಿಕೊಟ್ಟ ನಟಿ ಆಲಿಯಾ ಭಟ್

‘ಆರ್​ಆರ್​ಆರ್​ ಸಿನಿಮಾ ಶೂಟಿಂಗ್ ವೇಳೆ ಆಲಿಯಾ ತೆಲುಗು ಮಾತನಾಡುವುದನ್ನು ಕೂಡ ಕಲಿಯಲು ಪ್ರಯತ್ನಿಸಿದ್ದರು. ಹೀಗಾಗಿ, ಅವರಿಗೆ ತೆಲುಗು ಭಾಷೆಯ ಮೇಲೆ ವಿಶೇಷ ಪ್ರೀತಿ ಇದೆ.

Alia Bhatt: ಹಾಲಿವುಡ್​ ನಟಿಗೆ ತೆಲುಗು ಹೇಳಿಕೊಟ್ಟ ನಟಿ ಆಲಿಯಾ ಭಟ್
ಗಾಲ್-ಆಲಿಯಾ
TV9 Web
| Edited By: |

Updated on: Aug 08, 2023 | 11:02 AM

Share

ನಟಿ ಆಲಿಯಾ ಭಟ್ (Alia Bhatt) ಅವರು ಬಾಲಿವುಡ್​ನ ಬೇಡಿಕೆಯ ನಟಿ. ಇತ್ತೀಚೆಗೆ ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ರಿಲೀಸ್ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿತು. ಆಗಸ್ಟ್ 11ರಂದು ಆಲಿಯಾ ಭಟ್ ನಟನೆಯ ‘ಹಾರ್ಟ್ ಆಫ್ ಸ್ಟೋನ್’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಮೂಲಕ ಆಲಿಯಾ ಹಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಈ ಚಿತ್ರದ ಸಂದರ್ಶನದ ವೇಳೆ ಆಲಿಯಾ ಅವರು ನಟಿ ಗಾಲ್​ ಗಡೋಟ್ (Gal Gadot) ಅವರಿಗೆ ತೆಲುಗು ಮಾತನಾಡುವುದನ್ನು ಕಲಿಸಿಕೊಟ್ಟಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದೆ.

ಆಲಿಯಾ ಭಟ್ ಅವರು ಇಷ್ಟು ವರ್ಷಗಳ ಕಾಲ ಕೇವಲ ಬಾಲಿವುಡ್​ಗೆ ಸೀಮಿತ ಆಗಿದ್ದರು. ಆದರೆ, ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ದಕ್ಷಿಣ ಭಾರತದ ಜೊತೆ ಕನೆಕ್ಷನ್ ಬೆಳೆಸಿಕೊಂಡಿದ್ದಾರೆ. ಅವರು ತೆಲುಗು ಮಾತನಾಡುವುದನ್ನು ಕೂಡ ಕಲಿಯಲು ಪ್ರಯತ್ನಿಸಿದ್ದರು. ಹೀಗಾಗಿ, ಅವರಿಗೆ ತೆಲುಗು ಭಾಷೆಯ ಮೇಲೆ ವಿಶೇಷ ಪ್ರೀತಿ ಇದೆ.

ಸಂದರ್ಶನ ಒಂದರಲ್ಲಿ ಗಾಲ್​ ಗಡೋಟ್ ಹಾಗೂ ಆಲಿಯಾ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಅವರು ಗಾಲ್​​ಗೆ ‘ಅಂದರಿಕಿ ನಮಸ್ಕಾರಂ’ (ಎಲ್ಲರಿಗೂ ನಮಸ್ಕಾರ) ಎಂಬುದನ್ನು ಹೇಳಿಕೊಟ್ಟಿದ್ದಾರೆ. ಗಾಲ್ ಅವರು ಕಷ್ಟಪಟ್ಟು ಈ ಸಾಲುಗಳನ್ನು ಹೇಳಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದೆ. ತೆಲುಗು ಮಂದಿ ಖುಷಿಖುಷಿಯಿಂದ ಈ ವಿಡಿಯೋನ ಹಂಚಿಕೊಳ್ಳುತ್ತಿದ್ದಾರೆ. ರಾಜಮೌಳಿ-ಮಹೇಶ್ ಬಾಬು ಚಿತ್ರಕ್ಕೆ ಇವರೇ ನಾಯಕಿ ಆಗಲಿ ಎಂದು ಎಲ್ಲರೂ ಕೋರುತ್ತಿದ್ದಾರೆ.

ಗಾಲ್​ ಗಡೋಟ್ ‘ಹಾರ್ಟ್ ಆಫ್ ಸ್ಟೋನ್’ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ. ‘ಫಾಸ್ಟ್​ ಆ್ಯಂಡ್ ಫ್ಯೂರಿಯಸ್’ ಸಿನಿಮಾ ಮೂಲಕ ಗಾಲ್ ಬಣ್ಣದ ಬದುಕು ಆರಂಭಿಸಿದರು. ಬಳಿಕ ಹಲವು ಸಿನಿಮಾಗಳಲ್ಲಿ ಅವರು ನಟಿಸಿ ಫೇಮಸ್ ಆದರು. ಆಲಿಯಾ ‘ಹಾರ್ಟ್​​’ ಹೆಸರಿನ ವಸ್ತು ಕದಿಯುತ್ತಾರೆ ಮತ್ತು ರೇಚಲ್​ಗೆ ಸವಾಲು ಹಾಕುತ್ತಾರೆ.

ಇದನ್ನೂ ಓದಿ: ‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್

‘ಹಾರ್ಟ್ ಆಫ್ ಸ್ಟೋನ್’ ಸಿನಿಮಾ ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ರಿಲೀಸ್ ಆಗುತ್ತಿದೆ. ಈ ಸಿನಿಮಾನ ಅದ್ದೂರಿಯಾಗಿ ಕಟ್ಟಿಕೊಡಲಾಗಿದೆ. ಇಟಲಿ, ಲಂಡನ್​ ಮೊದಲಾದ ದೇಶಗಳಲ್ಲಿ ಸಿನಿಮಾನ ಶೂಟ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ