AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಹಾಲಿವುಡ್​ ನಟಿಗೆ ತೆಲುಗು ಹೇಳಿಕೊಟ್ಟ ನಟಿ ಆಲಿಯಾ ಭಟ್

‘ಆರ್​ಆರ್​ಆರ್​ ಸಿನಿಮಾ ಶೂಟಿಂಗ್ ವೇಳೆ ಆಲಿಯಾ ತೆಲುಗು ಮಾತನಾಡುವುದನ್ನು ಕೂಡ ಕಲಿಯಲು ಪ್ರಯತ್ನಿಸಿದ್ದರು. ಹೀಗಾಗಿ, ಅವರಿಗೆ ತೆಲುಗು ಭಾಷೆಯ ಮೇಲೆ ವಿಶೇಷ ಪ್ರೀತಿ ಇದೆ.

Alia Bhatt: ಹಾಲಿವುಡ್​ ನಟಿಗೆ ತೆಲುಗು ಹೇಳಿಕೊಟ್ಟ ನಟಿ ಆಲಿಯಾ ಭಟ್
ಗಾಲ್-ಆಲಿಯಾ
TV9 Web
| Edited By: |

Updated on: Aug 08, 2023 | 11:02 AM

Share

ನಟಿ ಆಲಿಯಾ ಭಟ್ (Alia Bhatt) ಅವರು ಬಾಲಿವುಡ್​ನ ಬೇಡಿಕೆಯ ನಟಿ. ಇತ್ತೀಚೆಗೆ ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ರಿಲೀಸ್ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿತು. ಆಗಸ್ಟ್ 11ರಂದು ಆಲಿಯಾ ಭಟ್ ನಟನೆಯ ‘ಹಾರ್ಟ್ ಆಫ್ ಸ್ಟೋನ್’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಮೂಲಕ ಆಲಿಯಾ ಹಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಈ ಚಿತ್ರದ ಸಂದರ್ಶನದ ವೇಳೆ ಆಲಿಯಾ ಅವರು ನಟಿ ಗಾಲ್​ ಗಡೋಟ್ (Gal Gadot) ಅವರಿಗೆ ತೆಲುಗು ಮಾತನಾಡುವುದನ್ನು ಕಲಿಸಿಕೊಟ್ಟಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದೆ.

ಆಲಿಯಾ ಭಟ್ ಅವರು ಇಷ್ಟು ವರ್ಷಗಳ ಕಾಲ ಕೇವಲ ಬಾಲಿವುಡ್​ಗೆ ಸೀಮಿತ ಆಗಿದ್ದರು. ಆದರೆ, ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ದಕ್ಷಿಣ ಭಾರತದ ಜೊತೆ ಕನೆಕ್ಷನ್ ಬೆಳೆಸಿಕೊಂಡಿದ್ದಾರೆ. ಅವರು ತೆಲುಗು ಮಾತನಾಡುವುದನ್ನು ಕೂಡ ಕಲಿಯಲು ಪ್ರಯತ್ನಿಸಿದ್ದರು. ಹೀಗಾಗಿ, ಅವರಿಗೆ ತೆಲುಗು ಭಾಷೆಯ ಮೇಲೆ ವಿಶೇಷ ಪ್ರೀತಿ ಇದೆ.

ಸಂದರ್ಶನ ಒಂದರಲ್ಲಿ ಗಾಲ್​ ಗಡೋಟ್ ಹಾಗೂ ಆಲಿಯಾ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಅವರು ಗಾಲ್​​ಗೆ ‘ಅಂದರಿಕಿ ನಮಸ್ಕಾರಂ’ (ಎಲ್ಲರಿಗೂ ನಮಸ್ಕಾರ) ಎಂಬುದನ್ನು ಹೇಳಿಕೊಟ್ಟಿದ್ದಾರೆ. ಗಾಲ್ ಅವರು ಕಷ್ಟಪಟ್ಟು ಈ ಸಾಲುಗಳನ್ನು ಹೇಳಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದೆ. ತೆಲುಗು ಮಂದಿ ಖುಷಿಖುಷಿಯಿಂದ ಈ ವಿಡಿಯೋನ ಹಂಚಿಕೊಳ್ಳುತ್ತಿದ್ದಾರೆ. ರಾಜಮೌಳಿ-ಮಹೇಶ್ ಬಾಬು ಚಿತ್ರಕ್ಕೆ ಇವರೇ ನಾಯಕಿ ಆಗಲಿ ಎಂದು ಎಲ್ಲರೂ ಕೋರುತ್ತಿದ್ದಾರೆ.

ಗಾಲ್​ ಗಡೋಟ್ ‘ಹಾರ್ಟ್ ಆಫ್ ಸ್ಟೋನ್’ ಚಿತ್ರದಲ್ಲಿ ರೇಚಲ್ ಸ್ಟೋನ್ ಹೆಸರಿನ ಪಾತ್ರ ಮಾಡಿದ್ದಾರೆ. ‘ಫಾಸ್ಟ್​ ಆ್ಯಂಡ್ ಫ್ಯೂರಿಯಸ್’ ಸಿನಿಮಾ ಮೂಲಕ ಗಾಲ್ ಬಣ್ಣದ ಬದುಕು ಆರಂಭಿಸಿದರು. ಬಳಿಕ ಹಲವು ಸಿನಿಮಾಗಳಲ್ಲಿ ಅವರು ನಟಿಸಿ ಫೇಮಸ್ ಆದರು. ಆಲಿಯಾ ‘ಹಾರ್ಟ್​​’ ಹೆಸರಿನ ವಸ್ತು ಕದಿಯುತ್ತಾರೆ ಮತ್ತು ರೇಚಲ್​ಗೆ ಸವಾಲು ಹಾಕುತ್ತಾರೆ.

ಇದನ್ನೂ ಓದಿ: ‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್

‘ಹಾರ್ಟ್ ಆಫ್ ಸ್ಟೋನ್’ ಸಿನಿಮಾ ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ರಿಲೀಸ್ ಆಗುತ್ತಿದೆ. ಈ ಸಿನಿಮಾನ ಅದ್ದೂರಿಯಾಗಿ ಕಟ್ಟಿಕೊಡಲಾಗಿದೆ. ಇಟಲಿ, ಲಂಡನ್​ ಮೊದಲಾದ ದೇಶಗಳಲ್ಲಿ ಸಿನಿಮಾನ ಶೂಟ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?