AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avatar 2: ಕನ್ನಡಿಗರ ಒತ್ತಾಯಕ್ಕೆ ಮಣಿದ ಹಾಲಿವುಡ್​ ನಿರ್ಮಾಪಕ; ಕನ್ನಡದಲ್ಲೂ ತೆರೆ ಕಾಣಲಿದೆ ‘ಅವತಾರ್​ 2’ ಚಿತ್ರ

Avatar 2 in Kannada: ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ‘ಅವತಾರ್​ 2’ ಚಿತ್ರದ ನಿರ್ಮಾಪಕರು ಈಗ ಕನ್ನಡದಲ್ಲೂ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಡಿಸೆಂಬರ್​ 16ರಂದು ಈ ಚಿತ್ರ ರಿಲೀಸ್​ ಆಗಲಿದೆ.

Avatar 2: ಕನ್ನಡಿಗರ ಒತ್ತಾಯಕ್ಕೆ ಮಣಿದ ಹಾಲಿವುಡ್​ ನಿರ್ಮಾಪಕ; ಕನ್ನಡದಲ್ಲೂ ತೆರೆ ಕಾಣಲಿದೆ ‘ಅವತಾರ್​ 2’ ಚಿತ್ರ
‘ಅವತಾರ್ 2’
TV9 Web
| Updated By: ಮದನ್​ ಕುಮಾರ್​|

Updated on:Nov 11, 2022 | 7:32 AM

Share

ಬಹುನಿರೀಕ್ಷಿತ ‘ಅವತಾರ್​ 2’ (Avatar 2) ಸಿನಿಮಾ ತೆರೆಕಾಣಲು ಸಜ್ಜಾಗಿದೆ. ಜಗತ್ತಿನ ಹಲವು ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಸಾವಿರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾ ಬಗ್ಗೆ ಇಡೀ ಪ್ರಪಂಚದ ಸಿನಿಪ್ರಿಯರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ಕನ್ನಡಿಗರಿಗೆ ಮಾತ್ರ ನಿರಾಸೆ ಆಗಿತ್ತು. ‘ಅವತಾರ್​ 2’ (Avatar: The Way Of Water) ಚಿತ್ರದ ಕನ್ನಡ ವರ್ಷನ್​ ರಿಲೀಸ್​ ಮಾಡುವ ನಿರ್ಧಾರದಿಂದ ನಿರ್ಮಾಪಕರು ಹಿಂದೆ ಸರಿದಿದ್ದರು. ಅದಕ್ಕಾಗಿ ಕನ್ನಡಿಗರು ಸಿಕ್ಕಾಪಟ್ಟೆ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಈಗ ಕನ್ನಡ ಪ್ರೇಕ್ಷಕರ ಒತ್ತಾಯಕ್ಕೆ ‘ಅವತಾರ್​ 2’ ನಿರ್ಮಾಪಕರು ಮಣಿದಿದ್ದಾರೆ. ಕನ್ನಡದಲ್ಲೂ (Avatar 2 in Kannada) ಈ ಸಿನಿಮಾವನ್ನು ರಿಲೀಸ್​ ಮಾಡುವುದಾಗಿ ತಿಳಿಸಿದ್ದಾರೆ. ಕನ್ನಡ ವರ್ಷನ್​ ಟ್ರೇಲರ್​ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ಕನ್ನಡದಲ್ಲಿ ‘ಅವತಾರ್​ 2’ ರಿಲೀಸ್​ ಮಾಡಬೇಕು ಎಂಬ ಪ್ಲ್ಯಾನ್​ ಆರಂಭದಲ್ಲಿ ಇತ್ತು. ಅದಕ್ಕಾಗಿ ಚಿಕ್ಕ ಟೀಸರ್​ ಅನ್ನು ಕನ್ನಡ ವರ್ಷನ್​ನಲ್ಲೂ ರಿಲೀಸ್​ ಮಾಡಲಾಗಿತ್ತು. ಆದರೆ ಟ್ರೇಲರ್​​ ಬಿಡುಗಡೆ ಸಮಯದಲ್ಲಿ ನಿರ್ಮಾಪಕರ ಮನಸ್ಸು ಬದಲಾಯಿತು. ಕೇವಲ ಇಂಗ್ಲಿಷ್​, ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗಿನಲ್ಲಿ ಟ್ರೇಲರ್​ ಬಿಡುಗಡೆ ಮಾಡಿ ಕೈ ತೊಳೆದುಕೊಳ್ಳಲಾಯಿತು. ಆಗ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಯಿತು.

ಇದನ್ನೂ ಓದಿ
Image
Michael Jackson Children: ಮೈಕೆಲ್​ ಜಾಕ್ಸನ್​ ಮಕ್ಕಳು ಈಗ ಹೇಗಿದ್ದಾರೆ? ಪ್ಯಾರಿಸ್​, ಪ್ರಿನ್ಸ್​ ಕಂಡು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ ಫ್ಯಾನ್ಸ್​
Image
Justin Bieber: ವೈರಸ್​ನಿಂದ ಜಸ್ಟಿನ್​ ಬೀಬರ್​ ಮುಖಕ್ಕೆ ಪಾರ್ಶ್ವವಾಯು; ಖ್ಯಾತ ಗಾಯಕನಿಗೆ ಕಾಡುತ್ತಿದೆ ಗಂಭೀರ ಸಮಸ್ಯೆ
Image
ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ
Image
Priyanka Chopra: ಪ್ರಿಯಾಂಕಾ ಚೋಪ್ರಾ ರಕ್ತಸಿಕ್ತ ಮುಖ ನೋಡಿ ಗಾಬರಿಯಾದ ಫ್ಯಾನ್ಸ್; ಗಾಯಗಳ ಬಗ್ಗೆ ನಟಿ ಹೇಳಿದ್ದೇನು?

ಕನ್ನಡಿಗರು ಮೂಲ ಭಾಷೆಯಲ್ಲಿಯೇ ಎಲ್ಲ ಸಿನಿಮಾವನ್ನು ನೋಡುತ್ತಾರೆ ಎಂಬ ವಾದ ಇದೆ. ಅದನ್ನೇ ನಂಬಿಕೊಂಡು ಪರಭಾಷೆಯ ಕೆಲವು ನಿರ್ಮಾಣ ಸಂಸ್ಥೆಗಳು ತಮ್ಮ ಚಿತ್ರವನ್ನು ಕನ್ನಡಕ್ಕೆ ಡಬ್​ ಮಾಡುವುದಿಲ್ಲ. ಮಾರ್ಕೆಟ್​ ದೃಷ್ಟಿಯಿಂದ ‘ಅವತಾರ್​ 2’ ಚಿತ್ರದ ನಿರ್ಮಾಪಕರು ಕೂಡ ಹಾಗೆಯೇ ಮಾಡಿದ್ದರೆ ಅದು ಕನ್ನಡದ ಪ್ರೇಕ್ಷಕರಿಗೆ ತೋರಿದ ಅಗೌರವ ಆಗುತ್ತದೆ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ‘ಅವತಾರ್​ 2’ ಚಿತ್ರದ ನಿರ್ಮಾಣ ಸಂಸ್ಥೆಯಾದ ‘20th Century Studios’ ಈಗ ಕನ್ನಡದಲ್ಲೂ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದೆ. ಡಿಸೆಂಬರ್​ 16ರಂದು ಈ ಸಿನಿಮಾದ ಕನ್ನಡ ವರ್ಷನ್​ ಕೂಡ ರಿಲೀಸ್​ ಆಗಲಿದೆ. ಯೂಟ್ಯೂಬ್​ನಲ್ಲಿ ಕನ್ನಡ ಟ್ರೇಲರ್​ ನೋಡಿದ ಪ್ರೇಕ್ಷಕರು ನಿರ್ಮಾಣ ಸಂಸ್ಥೆಗೆ ಧನ್ಯವಾದ ತಿಳಿಸುತ್ತಿದ್ದಾರೆ.

ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಜೇಮ್ಸ್​ ಕ್ಯಾಮೆರಾನ್​ ಆ್ಯಕ್ಷನ್​-ಕಟ್​ ಹೇಳಿದ್ದಾರೆ. 2000 ಸಾವಿರ ಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಬಾಕ್ಸ್​ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:32 am, Fri, 11 November 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ