AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ಗೂ ಮೊದಲೇ ವಿಮರ್ಶಕರಿಂದ ಕೆಟ್ಟ ವಿಮರ್ಶೆ ಪಡೆದ ‘ಅವತಾರ್: ಫೈರ್ ಆ್ಯಂಡ್ ಆ್ಯಶ್’

ಜೇಮ್ಸ್ ಕ್ಯಾಮರೂನ್ ನಿರ್ದೇಶನದ 'ಅವತಾರ್: ಫೈರ್ ಅಂಡ್ ಆಶ್' ಡಿಸೆಂಬರ್ 19ಕ್ಕೆ ರಿಲೀಸ್ ಆಗುತ್ತಿದೆ. ಆದರೆ, ಬಿಡುಗಡೆಗೂ ಮುನ್ನವೇ ರಾಟನ್ ಟೊಮ್ಯಾಟೋಸ್‌ನಿಂದ ಕೇವಲ 70% ರೇಟಿಂಗ್ ಪಡೆದು, ಫ್ರಾಂಚೈಸ್‌ನಲ್ಲಿ ಅತ್ಯಂತ ಕಡಿಮೆ ರೇಟಿಂಗ್ ಪಡೆದ ಚಿತ್ರ ಇದಾಗಿದೆ. ಟ್ರೇಲರ್ ಅಷ್ಟಾಗಿ ಮೆಚ್ಚುಗೆ ಪಡೆದಿಲ್ಲ. ವಿಮರ್ಶಕರು ಕಥೆಗಿಂತ ವಿಎಫ್‌ಎಕ್ಸ್‌ಗೆ ಹೆಚ್ಚು ಅಂಕ ನೀಡಿದ್ದಾರೆ.

ರಿಲೀಸ್​ಗೂ ಮೊದಲೇ ವಿಮರ್ಶಕರಿಂದ ಕೆಟ್ಟ ವಿಮರ್ಶೆ ಪಡೆದ ‘ಅವತಾರ್: ಫೈರ್ ಆ್ಯಂಡ್ ಆ್ಯಶ್’
ಅವತಾರ್ 3
ರಾಜೇಶ್ ದುಗ್ಗುಮನೆ
|

Updated on: Dec 17, 2025 | 3:11 PM

Share

ಹಾಲಿವುಡ್ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಅವರು ‘ಅವತಾರ್’ (Avatar) ಸರಣಿ ಮೂಲಕ ಜನರನ್ನು ಸೆಳೆದುಕೊಂಡಿದ್ದಾರೆ. ಈ ಸಿನಿಮಾ ಡಿಸೆಂಬರ್ 19ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ದೊಡ್ಡ ನೆಗೆಟಿವ್ ವಿಮರ್ಶೆ ಪಡೆದಿದೆ. ಜನಪ್ರಿಯ ‘ರಾಟನ್ ಟೊಮ್ಯಾಟೋಸ್’ ಸಂಸ್ಥೆ ಈ ಸಿನಿಮಾಗೆ ಕೇವಲ ಶೇ.70 ರೇಟಿಂಗ್ ನೀಡಿದೆ. ಇದು ಈ ಫ್ರಾಂಚೈಸ್​ನಲ್ಲೇ ಅತ್ಯಂತ ಕಡಿಮೆ ರೇಟಿಂಗ್ ಪಡೆದ ಸಿನಿಮಾ ಆಗಿದೆ.

‘ಅವತಾರ್: ಫೈರ್ ಆ್ಯಂಡ್ ಆ್ಯಶ್’ ಅನ್ನೋದು ‘ಅವತಾರ್’ ಸರಣಿಯ ಮೂರನೇ ಭಾಗದ ಹೆಸರು. ಈ ಸರಣಿಗೆ ಜೇಮ್ಸ್ ಕ್ಯಾಮೆರೂನ್ ನಿರ್ದೇಶನ ಇದೆ. ಈ ಸರಣಿಯ ಟ್ರೇಲರ್ ಗಮನ ಸೆಳೆಯಲು ವಿಫಲವಾಗಿದೆ. ಈ ಸಿನಿಮಾಗೆ ಅಂದುಕೊಂಡ ರೀತಿಯ ಹೈಪ್ ಕೂಡ ಸಿಗುತ್ತಿಲ್ಲ. ಇನ್ನು, ಸಿನಿಮಾದ ಅವಧಿ 3.17 ಗಂಟೆ ಇದೆ. ಇದು ಕೂಡ ಸಿನಿಮಾಗೆ ಹಿನ್ನಡೆ ಆಗೋ ಸಾಧ್ಯತೆ ಇದೆ. ಹೀಗಿರುವಾಗಲೇ ರಾಟನ್ ಟೊಮ್ಯಾಟೋ ಕಡೆಯಿಂದ ಚಿತ್ರಕ್ಕೆ ಇಷ್ಟು ಕಡಿಮೆ ರೇಟಿಂಗ್ ಸಿಕ್ಕಿದೆ.

ರಾಟನ್ ಟೊಮ್ಯಾಟೋ ಪ್ರಕಾರ ಇಡೀ ಸಿನಿಮಾದಲ್ಲಿ ವಿಎಫ್​​ಎಕ್ಸ್ ಮಾತ್ರ ಹೈಲೈಟ್ ಆಗಿದೆಯಂತೆ. ಕಥೆಯ ಬಗ್ಗೆ ಅಸಮಾಧಾನ ಹೊರಹಾಕಲಾಗಿದೆ. ಅವತಾರ್ ಮೊದಲ ಭಾಗಕ್ಕೆ ಶೇ.81 ಹಾಗೂ ಎರಡನೇ ಭಾಗಕ್ಕೆ ಶೇ.76 ರೇಟಿಂಗ್ ನೀಡಲಾಗಿತ್ತು. ಈಗ ಮೂರನೇ ಪಾರ್ಟ್​ ಕೇವಲ ಶೇ.70 ರೇಟಿಂಗ್ ಪಡೆದಿದೆ.

ಇದನ್ನೂ ಓದಿ: ‘ಅವತಾರ್ 3’ ಸಿನಿಮಾನಲ್ಲಿ ಮಹೇಶ್ ಬಾಬು? ಇದೆಂಥ ಅಚ್ಚರಿ

ಇನ್ನು ಕೆಲವರು ವಿಮರ್ಶಕರು ಸಿನಿಮಾನ ಬೋರಿಂಗ್ ಎಂದು ಕರೆದಿದ್ದಾರೆ. ‘ಸಿನಿಮಾ ಎಲ್ಲರಿಗೂ ಇಷ್ಟ ಆಗೋದು ಅನುಮಾನವಿದೆ’ ಎಂಬುದು ಕೆಲವರ ಅಭಿಪ್ರಾಯ. ಜನರು ಈ ಸಿನಿಮಾನ ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ವಿಮರ್ಶಕರಿಗೆ ಇಷ್ಟ ಆಗದ ಸಿನಿಮಾಗಳು ಪ್ರೇಕ್ಷಕರಿಗೆ ಇಷ್ಟ ಆಗಿ ಹಿಟ್ ಆದ ಸಾಕಷ್ಟು ಉದಾಹರಣೆ ಇದೆ. ‘ಅವತಾರ್: ಫೈರ್ ಆ್ಯಂಡ್ ಆ್ಯಶ್’ ಹಿಟ್ ಆಗಲು ಇದೇ ರೀತಿಯ ಒಂದು ಜಾದೂ ನಡೆಯಬೇಕಾದ ಅವಶ್ಯಕತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ