Sign In

By signing in or creating an account, you agree with Associated Broadcasting Company's Terms & Conditions and Privacy Policy.

Avatar 2: 1650 ರೂ. ದಾಟಿದ ‘ಅವತಾರ್​ 2’ ಟಿಕೆಟ್​ ಬೆಲೆ; ಆದ್ರೂ ಮುಗಿಬಿದ್ದು ಬುಕ್​ ಮಾಡುತ್ತಿರುವ ಪ್ರೇಕ್ಷಕರು

James Cameron | Avatar The Way of Water: ಬೆಂಗಳೂರಿನ ಪ್ರಮುಖ ಮಲ್ಟಿಪ್ಲೆಕ್ಸ್​ಗಳಲ್ಲಿ ಈಗಾಗಲೇ ‘ದಿ ಅವತಾರ್​ 2’ ಚಿತ್ರದ ಟಿಕೆಟ್​ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಇನ್ನೂ ಅನೇಕ ಕಡೆಗಳಲ್ಲಿ ಬುಕಿಂಗ್​ ಓಪನ್​ ಆಗುವುದು ಬಾಕಿ ಇದೆ.

Avatar 2: 1650 ರೂ. ದಾಟಿದ ‘ಅವತಾರ್​ 2’ ಟಿಕೆಟ್​ ಬೆಲೆ; ಆದ್ರೂ ಮುಗಿಬಿದ್ದು ಬುಕ್​ ಮಾಡುತ್ತಿರುವ ಪ್ರೇಕ್ಷಕರು
ಅವತಾರ್ 2
Follow us
TV9 Web
| Updated By: ಮದನ್​ ಕುಮಾರ್​

Updated on: Nov 24, 2022 | 8:00 AM

ಸಿನಿಮಾಗಳ ಟಿಕೆಟ್​ ಬೆಲೆ ವಿಚಾರದಲ್ಲಿ ಚರ್ಚೆ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಾರದೇ ಇರಲು ದುಬಾರಿ ಟಿಕೆಟ್​ ಬೆಲೆಯೇ ಕಾರಣ ಎಂಬ ವಾದ ಇದೆ. ಹಾಗಾಗಿ ಇತ್ತೀಚಿನ ಕೆಲವು ಸಿನಿಮಾಗಳ ಟಿಕೆಟ್​ ಬೆಲೆ ತಗ್ಗಿಸುವ ಪ್ರಯೋಗ ನಡೆದಿತ್ತು. ಆದರೆ ಬಹುನಿರೀಕ್ಷಿತ ‘ಅವತಾರ್​ 2’ (Avatar The Way of Water) ಚಿತ್ರ ಬೇರೆಯದೇ ಮಾರ್ಗ ಅನುಸರಿಸುತ್ತಿದೆ. ಈ ಸಿನಿಮಾದ ಟಿಕೆಟ್​ ಬೆಲೆ ಮುಗಿಲು ಮುಟ್ಟಿದೆ. ಸಾಮಾನ್ಯಾವಾಗಿ 300 ಅಥವಾ 350 ರೂಪಾಯಿ ಇರುತ್ತಿದ್ದ ಸ್ಕ್ರೀನ್​ಗಳಲ್ಲಿ ಈ ಸಿನಿಮಾದ ಬೆಲೆ ಸಾವಿರ ರೂಪಾಯಿ ದಾಟಿದೆ. ಕೆಲವು ಕಡೆಗಳಲ್ಲಿ 1,650 ರೂಪಾಯಿ ತನಕವೂ ಟಿಕೆಟ್​ (Avatar 2 Movie Ticket) ಬೆಲೆ ಇದೆ. ಹಾಗಿದ್ದರೂ ಕೂಡ ಪ್ರೇಕ್ಷಕರು ಮುಗಿಬಿದ್ದು ಈ ಹಾಲಿವುಡ್​ (Hollywood) ಚಿತ್ರದ ಟಿಕೆಟ್​ ಬುಕ್​ ಮಾಡುತ್ತಿದ್ದಾರೆ ಎಂಬುದು ವಿಶೇಷ.

ಡಿಸೆಂಬರ್​ 16ರಂದು ‘ಅವತಾರ್​ 2’ ಚಿತ್ರ ಬಿಡುಗಡೆ ಆಗಲಿದೆ. ಇನ್ನೂ 24 ದಿನಗಳು ಬಾಕಿ ಇರುವಾಗಲೇ ಚಿತ್ರದ ಬುಕಿಂಗ್​ ಓಪನ್​ ಮಾಡಲಾಗಿದೆ. 3ಡಿ, ಐಮ್ಯಾಕ್ಸ್​ 3ಡಿ, 4ಡಿಎಕ್ಸ್​ ಮುಂತಾದ ವರ್ಷನ್​ಗಳಲ್ಲಿ ಈ ಚಿತ್ರ ತೆರೆಕಾಣಲಿದೆ. ಜಗತ್ತಿನಾದ್ಯಂತ ಇರುವ ಪ್ರೇಕ್ಷಕರು ಈ ಚಿತ್ರಕ್ಕಾಗಿ ಕಾದಿದ್ದಾರೆ. ಬೆಂಗಳೂರಿನಲ್ಲೂ ಮೊದಲ ದಿನ ಭರ್ಜರಿ ಪ್ರದರ್ಶನ ಕಾಣಲಿದೆ ಎಂಬುದಕ್ಕೆ ಸೂಚನೆ ಸಿಕ್ಕಿದೆ.

ಬೆಂಗಳೂರಿನ ಪ್ರಮುಖ ಮಲ್ಟಿಪ್ಲೆಕ್ಸ್​ಗಳಲ್ಲಿ ಈಗಾಗಲೇ ‘ದಿ ಅವತಾರ್​ 2’ ಚಿತ್ರದ ಟಿಕೆಟ್​ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಟಿಕೆಟ್​ ಬೆಲೆ 800, 1000, 1500 ಮತ್ತು ಕೆಲವು ಕೆಲವು ಕಡೆಗಳಲ್ಲಿ 1650 ರೂಪಾಯಿ ಇದ್ದರೂ ಕೂಡ ಜನರು ಬುಕ್​ ಮಾಡುತ್ತಿದ್ದಾರೆ. ಇನ್ನೂ ಅನೇಕ ಕಡೆಗಳಲ್ಲಿ ಬುಕಿಂಗ್​ ಓಪನ್​ ಆಗುವುದು ಬಾಕಿ ಇದೆ. ಸಿಂಗಲ್​ ಸ್ಕ್ರೀನ್​ಗಳಲ್ಲಿ ಎಷ್ಟು ದರ ಇರಲಿದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ
Image
Avatar 2: ಕನ್ನಡಿಗರ ಒತ್ತಾಯಕ್ಕೆ ಮಣಿದ ಹಾಲಿವುಡ್​ ನಿರ್ಮಾಪಕ; ಕನ್ನಡದಲ್ಲೂ ತೆರೆ ಕಾಣಲಿದೆ ‘ಅವತಾರ್​ 2’ ಚಿತ್ರ
Image
‘ಅವತಾರ್​’ ಸರಣಿ ಚಿತ್ರಗಳ ಬಜೆಟ್ ಎಷ್ಟು ಸಾವಿರ ಕೋಟಿ ರೂಪಾಯಿ? ಸೀಕ್ವೆಲ್ ಕೈ ಬಿಡುವ ಆಲೋಚನೆಯಲ್ಲಿ ನಿರ್ದೇಶಕ  
Image
ಅಚ್ಚರಿಗಳ ಲೋಕವಾಯಿತು ‘ಅವತಾರ್ 2’ ಸಿನಿಮಾ ಟ್ರೇಲರ್; ಹೊಸ ಜಗತ್ತು ಪರಿಚಯಿಸಿದ ಜೇಮ್ಸ್ ಕ್ಯಾಮೆರಾನ್
Image
13 ವರ್ಷಗಳ ಬಳಿಕ ಬರುತ್ತಿದೆ ‘ಅವತಾರ್’ ಸೀಕ್ವೆಲ್​; ವರ್ಷಾಂತ್ಯಕ್ಕೆ ‘ಅವತಾರ್​ 2’, 2028ಕ್ಕೆ ‘ಅವತಾರ್​ 5’

ಜೇಮ್ಸ್​ ಕ್ಯಾಮೆರಾನ್​ ಅವರು ‘ಅವತಾರ್​ 2’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅವರ ಮೇಲೆ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ಭರವಸೆ ಇದೆ. 13 ವರ್ಷಗಳ ಹಿಂದೆ ‘ಅವತಾರ್​’ ಚಿತ್ರ ತೆರೆಕಂಡು ದಾಖಲೆ ಬರೆದಿತ್ತು. ಆ ದಾಖಲೆಯನ್ನು ‘ಅವತಾರ್​ 2’ ಮುರಿಯಲಿದೆಯೇ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಕನ್ನಡಕ್ಕೂ ಡಬ್​ ಆಗಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರದ ಝಲಕ್​ ಹೇಗಿರಲಿದೆ ಎಂಬುದನ್ನು ತಿಳಿಸಲು ಟ್ರೇಲರ್​ ಬಿಡುಗಡೆ ಆಗಿದೆ. ಬೇರೊಂದು ಲೋಕವನ್ನೇ ಪರಿಚಯಿಸುವಂತಹ ದೃಶ್ಯಗಳು ಟ್ರೇಲರ್​ನಲ್ಲಿ ಹೈಲೈಟ್​ ಆಗಿವೆ. ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಈ ಚಿತ್ರಕ್ಕೆ ಬಳಕೆ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್