13 ವರ್ಷಗಳ ಬಳಿಕ ಬರುತ್ತಿದೆ ‘ಅವತಾರ್’ ಸೀಕ್ವೆಲ್​; ವರ್ಷಾಂತ್ಯಕ್ಕೆ ‘ಅವತಾರ್​ 2’, 2028ಕ್ಕೆ ‘ಅವತಾರ್​ 5’

ಐದು ಸಿನಿಮಾಗಳು ‘ಅವತಾರ’ ಸರಣಿಯಿಂದ ಬರಲಿವೆ. ಮೊದಲ ಸಿನಿಮಾ 2009ರಲ್ಲಿ ತೆರೆಗೆ ಬಂದಿತ್ತು. ಇದಾದ ಬಳಿಕ ಸೀಕ್ವೆಲ್ ಬರಲು ಸುಮಾರು 13 ವರ್ಷಗಳು ಹಿಡಿದಿವೆ.

13 ವರ್ಷಗಳ ಬಳಿಕ ಬರುತ್ತಿದೆ ‘ಅವತಾರ್’ ಸೀಕ್ವೆಲ್​; ವರ್ಷಾಂತ್ಯಕ್ಕೆ ‘ಅವತಾರ್​ 2’, 2028ಕ್ಕೆ ‘ಅವತಾರ್​ 5’
ಅವತಾರ ಸಿನಿಮಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 28, 2022 | 4:10 PM

‘ಅವತಾರ್​’ ಚಿತ್ರ (Avatar Movie) ವಿಶ್ವದ ಸಿನಿಮಾ ಇತಿಹಾಸದಲ್ಲೇ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ಪಾತ್ರವಾಗಿದೆ. 2009ರಲ್ಲಿ ತೆರೆಗೆ ಬಂದ ಈ ಸಿನಿಮಾದ ಸೀಕ್ವೆಲ್​ ಈ ಮೊದಲೇ ಘೋಷಣೆ ಆಗಿತ್ತು. ಆದರೆ, ಈ ಚಿತ್ರದ ಟೈಟಲ್ ಏನು? ಸಿನಿಮಾ ಯಾವಾಗ ರಿಲೀಸ್ ಆಗಲಿದೆ? ಎನ್ನುವ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ಈ ವಿಚಾರ ಅಧಿಕೃತವಾಗಿದೆ. ಕ್ರಿಸ್​ಮಸ್ ಪ್ರಯುಕ್ತ 2022ರ ಡಿಸೆಂಬರ್ 16ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ‘ಅವತಾರ್​: ದಿ ವೇ ಆಫ್​ ವಾಟರ್’ ಎಂದು (Avatar The Way of Water) ಶೀರ್ಷಿಕೆ ಇಡಲಾಗಿದೆ. ಜೇಮ್ಸ್ ಕ್ಯಾಮರೂನ್ ( James Cameron) ನಿರ್ದೇಶನದ ಈ ಸಿನಿಮಾ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟು ಹಾಕಿದೆ.

ಸಿನೆಮಾಕೋನ್ ವಾರ್ಷಿಕ ಸಮಾವೇಶದಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗಿದೆ. 2022ನೇ ಸಾಲಿನ ಈ ಕಾರ್ಯಕ್ರಮ ಏಪ್ರಿಲ್ 25-28ರವರೆಗೆ ನಡೆದಿದೆ. ಪ್ರತಿ ವರ್ಷ ನಡೆಯುವ ಈ ಕಾರ್ಯಕ್ರಮದಲ್ಲಿ ದೊಡ್ಡದೊಡ್ಡ ಚಿತ್ರಗಳ ಫಸ್ಟ್ ಲುಕ್​, ರಿಲೀಸ್ ದಿನಾಂಕಗಳನ್ನು ಇಲ್ಲಿ ಬಹಿರಂಗ ಮಾಡಲಾಗುತ್ತದೆ. ಅದೇ ರೀತಿ ‘ಅವತಾರ್​: ದಿ ವೇ ಆಫ್​ ವಾಟರ್’ ಸಿನಿಮಾದ ಎರಡು ದೃಶ್ಯಗಳನ್ನು ಇಲ್ಲಿ ತೋರಿಸಲಾಗಿದೆ.

ಐದು ಸಿನಿಮಾಗಳು ‘ಅವತಾರ’ ಸರಣಿಯಿಂದ ಬರಲಿವೆ. ಮೊದಲ ಸಿನಿಮಾ 2009ರಲ್ಲಿ ತೆರೆಗೆ ಬಂದಿತ್ತು. ಇದಾದ ಬಳಿಕ ಸೀಕ್ವೆಲ್ ಬರಲು ಸುಮಾರು 13 ವರ್ಷಗಳು ಹಿಡಿದಿವೆ. ‘ಅವತಾರ್ 2’ ಜತೆಗೆ ಇನ್ನುಳಿದ ಮೂರು ಸಿನಿಮಾಗಳ ರಿಲೀಸ್ ಡೇಟ್ ಕೂಡ ಘೋಷಣೆ ಆಗಿದೆ. ‘ಅವತಾರ್ 3’ 2024ರ ಡಿಸೆಂಬರ್ 20ರಂದು ತೆರೆಗೆ ಬರುತ್ತಿದೆ. ‘ಅವತಾರ್ 4’ ಡಿಸೆಂಬರ್ 18, 2026ರಂದು ರಿಲೀಸ್ ಆಗುತ್ತಿದೆ. ‘ಅವತಾರ್ 5’ 2028ರ ಡಿಸೆಂಬರ್ 22ರಂದು ಬಿಡುಗಡೆ ಆಗುತ್ತಿದೆ.

ಹಾಲಿವುಡ್ ಮಂದಿಗೆ ಡಿಸೆಂಬರ್ ತಿಂಗಳು ತುಂಬಾನೇ ವಿಶೇಷ. ಕ್ರಿಸ್​ಮಸ್ ಇರುವುದರಿಂದ ದೊಡ್ಡ ಸಿನಿಮಾ ನಿರ್ಮಾಪಕರು ಈ ಸಂದರ್ಭದಲ್ಲಿ ತಮ್ಮ ಸಿನಿಮಾ ರಿಲೀಸ್ ಮಾಡಲು ಆದ್ಯತೆ ನೀಡುತ್ತಾರೆ. ಕಳೆದ ವರ್ಷ ಡಿಸೆಂಬರ್ 16ರಂದು ‘ಸ್ಪೈಡರ್​ ಮ್ಯಾನ್: ನೋ ವೇ ಹೋಂ’ ಚಿತ್ರ ರಿಲೀಸ್ ಆಗಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿತ್ತು. ಈ ಬಾರಿ ರಿಲೀಸ್ ಆಗುತ್ತಿರುವ ಅವತಾರ್​: ದಿ ವೇ ಆಫ್​ ವಾಟರ್’ ಸಿನಿಮಾ ಯಾವ ರೀತಿಯಲ್ಲಿ ಕಮಾಲ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

‘ಅವತಾರ್’ ಸಿನಿಮಾ ವಿಶ್ವ ಮಟ್ಟದಲ್ಲಿ 2.8 ಬಿಲಿಯನ್ ಡಾಲರ್ ಕಲೆಕ್ಷನ್ ಮಾಡಿದೆ. ಅಂದರೆ 21,729 ಕೋಟಿ ರೂಪಾಯಿ. ಈ ಚಿತ್ರದ ಕಲೆಕ್ಷನ್​ಅನ್ನು ಬ್ರೇಕ್ ಮಾಡಲು ಈ ವರೆಗೆ ಯಾರಿಂದಲೂ ಸಾಧ್ಯವಾಗಿಲ್ಲ.

ಇದನ್ನೂ ಓದಿ: ‘ವಿಲ್ ಸ್ಮಿತ್​ ಒಳ್ಳೆಯ ವ್ಯಕ್ತಿ’; ಸಂಗೀತ ನಿರ್ದೇಶಕ ಎ.ಆರ್​​. ರೆಹಮಾನ್ ಮೆಚ್ಚುಗೆಯ ಮಾತು

ಕನ್ನಡ ಚಿತ್ರರಂಗ ಉದಾಹರಿಸಿ ಬಾಲಿವುಡ್​ ಕಿವಿಹಿಂಡಿದ ನವಾಜುದ್ದೀನ್ ಸಿದ್ದಿಕಿ; ‘ಸೇಕ್ರೆಡ್ ಗೇಮ್ಸ್’ ನಟ ಹೇಳಿದ್ದೇನು?

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ