ಮೂರೇ ದಿನಕ್ಕೆ ಭಾರತದಲ್ಲಿ 50 ಕೋಟಿ ರೂಪಾಯಿ ಕಮಾಯಿ ಮಾಡಿದ ‘ಆಪನ್​ಹೈಮರ್’; ‘ಬಾರ್ಬಿ’ ಕಥೆ ಏನು?

ಕಿಲಿಯನ್ ಮರ್ಫಿ ಅವರು ಆಪನ್​ಹೈಮರ್ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಸಿನಿಮಾ ಜುಲೈ 21ರಂದು ರಿಲೀಸ್ ಆಗಿದೆ. ‘ಆಪನ್​ಹೈಮರ್‘ ಶುಕ್ರವಾರ 14.5 ಕೋಟಿ ರೂಪಾಯಿ ಗಳಿಕೆ ಮಾಡಿತ್ತು.

ಮೂರೇ ದಿನಕ್ಕೆ ಭಾರತದಲ್ಲಿ 50 ಕೋಟಿ ರೂಪಾಯಿ ಕಮಾಯಿ ಮಾಡಿದ ‘ಆಪನ್​ಹೈಮರ್’; ‘ಬಾರ್ಬಿ’ ಕಥೆ ಏನು?
ಆಪನ್​ಹೈಮರ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 24, 2023 | 12:26 PM

‘ಆಪನ್​ಹೈಮರ್’ ಸಿನಿಮಾ (Oppenheimer Movie) ಸಾಕಷ್ಟು ಹೈಪ್​ನೊಂದಿಗೆ ಭಾರತದಲ್ಲಿ ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದ ಓಪನಿಂಗ್ ಪಡೆದಿದೆ. ಕ್ರಿಸ್ಟೋಫರ್ ನೋಲನ್ (Christopher Nolan) ನಿರ್ದೇಶನದ ಸಿನಿಮಾ ಎನ್ನುವ ಕಾರಣಕ್ಕೂ ಈ ಚಿತ್ರ ಭರ್ಜರಿ ನಿರೀಕ್ಷೆ ಸೃಷ್ಟಿ ಮಾಡಿತ್ತು. ಮೊದಲ ಮೂರುದಿನಗಳಲ್ಲಿ ಈ ಸಿನಿಮಾ ಭಾರತದಲ್ಲಿ 49 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾಗೆ ಹೋಲಿಕೆ ಮಾಡಿದರೆ ‘ಬಾರ್ಬಿ’ ಚಿತ್ರ ಸಾಧಾರಣ ಗಳಿಕೆ ಕಂಡಿದೆ ಎಂದೇ ಹೇಳಬಹುದು.

ಇಡೀ ವಿಶ್ವವನ್ನೇ ನಾಶ ಮಾಡುವ ಶಕ್ತಿ ಅಣುಬಾಂಬ್​ಗೆ ಇದೆ. ಇದನ್ನು ಮೊದಲ ಬಾರಿಗೆ ಜಪಾನ್ ಮೇಲೆ ಪ್ರಯೋಗ ಮಾಡಲಾಯಿತು. ಇದನ್ನು ಕಂಡು ಹಿಡಿದಿದ್ದು ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್ ಜೀವನದ ಕುರಿತ ಕಥೆ ಇದಾಗಿದೆ. ಕಿಲಿಯನ್ ಮರ್ಫಿ ಅವರು ಆಪನ್​ಹೈಮರ್ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಸಿನಿಮಾ ಜುಲೈ 21ರಂದು ರಿಲೀಸ್ ಆಗಿದೆ. ‘ಆಪನ್​ಹೈಮರ್‘ ಶುಕ್ರವಾರ 14.5 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಚಿತ್ರಕ್ಕೆ ಶನಿವಾರ ಹಾಗೂ ಭಾನುವಾರ ತಲಾ 17.25 ಕೋಟಿ ರೂಪಾಯಿ ಆಸುಪಾಸಿನಲ್ಲಿ ಗಳಿಕೆ ಆಗಿದೆ. ಇದರಿಂದ ಚಿತ್ರದ ಒಟ್ಟೂ ಗಳಿಕೆ 49 ಕೋಟಿ ರೂಪಾಯಿ ಆಗಿದೆ.

ಇತ್ತೀಚೆಗೆ ರಿಲೀಸ್ ಆದ ‘ಮಿಷನ್ ಇಂಪಾಸಿಬಲ್​ 7’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಐದು ದಿನಕ್ಕೆ 63 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಆ್ಯಕ್ಷನ್ ಸಿನಿಮಾ ಎಂಬ ಕಾರಣಕ್ಕೆ ಜನರು ಇದನ್ನು ಮುಗಿಬಿದ್ದು ವೀಕ್ಷಿಸಿದ್ದರು. ಆ್ಯಕ್ಷನ್ ಸಿನಿಮಾ ಅಲ್ಲದ ಹೊರತಾಗಿಯೂ ‘ಆಪನ್​ಹೈಮರ್’ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: Oppenheimer: ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ; ‘ಆಪನ್​ಹೈಮರ್​’ ಚಿತ್ರಕ್ಕೆ ಎದುರಾಯ್ತು ವಿರೋಧ

ಹಾಲಿವುಡ್​ನ ‘ಬಾರ್ಬಿ’ ಕೂಡ ‘ಆಪನ್​ಹೈಮರ್ ಜೊತೆ ರಿಲೀಸ್ ಆಗಿತ್ತು. ಈ ಚಿತ್ರ ಭಾರತದಲ್ಲಿ 19 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸಾಧಾರಣ ಮೊತ್ತದ ಗಳಿಕೆಯೊಂದಿಗೆ ಸಿನಿಮಾ ಮುನ್ನುಗ್ಗುತ್ತಿದೆ. ಸಾಲು ಸಾಲು ಹಾಲಿವುಡ್​ ಸಿನಿಮಾಗಳು ಭಾರತದಲ್ಲಿ ರಿಲೀಸ್ ಆಗುತ್ತಿವೆ. ಹಿಂದಿ ಚಿತ್ರಗಳಿಗಿಂತಲೂ ಅಧಿಕ ಕಲೆಕ್ಷನ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Mon, 24 July 23

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್