AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ದಿನಕ್ಕೆ ಭಾರತದಲ್ಲಿ 50 ಕೋಟಿ ರೂಪಾಯಿ ಕಮಾಯಿ ಮಾಡಿದ ‘ಆಪನ್​ಹೈಮರ್’; ‘ಬಾರ್ಬಿ’ ಕಥೆ ಏನು?

ಕಿಲಿಯನ್ ಮರ್ಫಿ ಅವರು ಆಪನ್​ಹೈಮರ್ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಸಿನಿಮಾ ಜುಲೈ 21ರಂದು ರಿಲೀಸ್ ಆಗಿದೆ. ‘ಆಪನ್​ಹೈಮರ್‘ ಶುಕ್ರವಾರ 14.5 ಕೋಟಿ ರೂಪಾಯಿ ಗಳಿಕೆ ಮಾಡಿತ್ತು.

ಮೂರೇ ದಿನಕ್ಕೆ ಭಾರತದಲ್ಲಿ 50 ಕೋಟಿ ರೂಪಾಯಿ ಕಮಾಯಿ ಮಾಡಿದ ‘ಆಪನ್​ಹೈಮರ್’; ‘ಬಾರ್ಬಿ’ ಕಥೆ ಏನು?
ಆಪನ್​ಹೈಮರ್
TV9 Web
| Edited By: |

Updated on:Jul 24, 2023 | 12:26 PM

Share

‘ಆಪನ್​ಹೈಮರ್’ ಸಿನಿಮಾ (Oppenheimer Movie) ಸಾಕಷ್ಟು ಹೈಪ್​ನೊಂದಿಗೆ ಭಾರತದಲ್ಲಿ ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದ ಓಪನಿಂಗ್ ಪಡೆದಿದೆ. ಕ್ರಿಸ್ಟೋಫರ್ ನೋಲನ್ (Christopher Nolan) ನಿರ್ದೇಶನದ ಸಿನಿಮಾ ಎನ್ನುವ ಕಾರಣಕ್ಕೂ ಈ ಚಿತ್ರ ಭರ್ಜರಿ ನಿರೀಕ್ಷೆ ಸೃಷ್ಟಿ ಮಾಡಿತ್ತು. ಮೊದಲ ಮೂರುದಿನಗಳಲ್ಲಿ ಈ ಸಿನಿಮಾ ಭಾರತದಲ್ಲಿ 49 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾಗೆ ಹೋಲಿಕೆ ಮಾಡಿದರೆ ‘ಬಾರ್ಬಿ’ ಚಿತ್ರ ಸಾಧಾರಣ ಗಳಿಕೆ ಕಂಡಿದೆ ಎಂದೇ ಹೇಳಬಹುದು.

ಇಡೀ ವಿಶ್ವವನ್ನೇ ನಾಶ ಮಾಡುವ ಶಕ್ತಿ ಅಣುಬಾಂಬ್​ಗೆ ಇದೆ. ಇದನ್ನು ಮೊದಲ ಬಾರಿಗೆ ಜಪಾನ್ ಮೇಲೆ ಪ್ರಯೋಗ ಮಾಡಲಾಯಿತು. ಇದನ್ನು ಕಂಡು ಹಿಡಿದಿದ್ದು ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್ ಜೀವನದ ಕುರಿತ ಕಥೆ ಇದಾಗಿದೆ. ಕಿಲಿಯನ್ ಮರ್ಫಿ ಅವರು ಆಪನ್​ಹೈಮರ್ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಸಿನಿಮಾ ಜುಲೈ 21ರಂದು ರಿಲೀಸ್ ಆಗಿದೆ. ‘ಆಪನ್​ಹೈಮರ್‘ ಶುಕ್ರವಾರ 14.5 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಚಿತ್ರಕ್ಕೆ ಶನಿವಾರ ಹಾಗೂ ಭಾನುವಾರ ತಲಾ 17.25 ಕೋಟಿ ರೂಪಾಯಿ ಆಸುಪಾಸಿನಲ್ಲಿ ಗಳಿಕೆ ಆಗಿದೆ. ಇದರಿಂದ ಚಿತ್ರದ ಒಟ್ಟೂ ಗಳಿಕೆ 49 ಕೋಟಿ ರೂಪಾಯಿ ಆಗಿದೆ.

ಇತ್ತೀಚೆಗೆ ರಿಲೀಸ್ ಆದ ‘ಮಿಷನ್ ಇಂಪಾಸಿಬಲ್​ 7’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಐದು ದಿನಕ್ಕೆ 63 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಆ್ಯಕ್ಷನ್ ಸಿನಿಮಾ ಎಂಬ ಕಾರಣಕ್ಕೆ ಜನರು ಇದನ್ನು ಮುಗಿಬಿದ್ದು ವೀಕ್ಷಿಸಿದ್ದರು. ಆ್ಯಕ್ಷನ್ ಸಿನಿಮಾ ಅಲ್ಲದ ಹೊರತಾಗಿಯೂ ‘ಆಪನ್​ಹೈಮರ್’ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: Oppenheimer: ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ; ‘ಆಪನ್​ಹೈಮರ್​’ ಚಿತ್ರಕ್ಕೆ ಎದುರಾಯ್ತು ವಿರೋಧ

ಹಾಲಿವುಡ್​ನ ‘ಬಾರ್ಬಿ’ ಕೂಡ ‘ಆಪನ್​ಹೈಮರ್ ಜೊತೆ ರಿಲೀಸ್ ಆಗಿತ್ತು. ಈ ಚಿತ್ರ ಭಾರತದಲ್ಲಿ 19 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸಾಧಾರಣ ಮೊತ್ತದ ಗಳಿಕೆಯೊಂದಿಗೆ ಸಿನಿಮಾ ಮುನ್ನುಗ್ಗುತ್ತಿದೆ. ಸಾಲು ಸಾಲು ಹಾಲಿವುಡ್​ ಸಿನಿಮಾಗಳು ಭಾರತದಲ್ಲಿ ರಿಲೀಸ್ ಆಗುತ್ತಿವೆ. ಹಿಂದಿ ಚಿತ್ರಗಳಿಗಿಂತಲೂ ಅಧಿಕ ಕಲೆಕ್ಷನ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Mon, 24 July 23

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು