AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ದಿನಕ್ಕೆ ಭಾರತದಲ್ಲಿ 50 ಕೋಟಿ ರೂಪಾಯಿ ಕಮಾಯಿ ಮಾಡಿದ ‘ಆಪನ್​ಹೈಮರ್’; ‘ಬಾರ್ಬಿ’ ಕಥೆ ಏನು?

ಕಿಲಿಯನ್ ಮರ್ಫಿ ಅವರು ಆಪನ್​ಹೈಮರ್ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಸಿನಿಮಾ ಜುಲೈ 21ರಂದು ರಿಲೀಸ್ ಆಗಿದೆ. ‘ಆಪನ್​ಹೈಮರ್‘ ಶುಕ್ರವಾರ 14.5 ಕೋಟಿ ರೂಪಾಯಿ ಗಳಿಕೆ ಮಾಡಿತ್ತು.

ಮೂರೇ ದಿನಕ್ಕೆ ಭಾರತದಲ್ಲಿ 50 ಕೋಟಿ ರೂಪಾಯಿ ಕಮಾಯಿ ಮಾಡಿದ ‘ಆಪನ್​ಹೈಮರ್’; ‘ಬಾರ್ಬಿ’ ಕಥೆ ಏನು?
ಆಪನ್​ಹೈಮರ್
TV9 Web
| Edited By: |

Updated on:Jul 24, 2023 | 12:26 PM

Share

‘ಆಪನ್​ಹೈಮರ್’ ಸಿನಿಮಾ (Oppenheimer Movie) ಸಾಕಷ್ಟು ಹೈಪ್​ನೊಂದಿಗೆ ಭಾರತದಲ್ಲಿ ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದ ಓಪನಿಂಗ್ ಪಡೆದಿದೆ. ಕ್ರಿಸ್ಟೋಫರ್ ನೋಲನ್ (Christopher Nolan) ನಿರ್ದೇಶನದ ಸಿನಿಮಾ ಎನ್ನುವ ಕಾರಣಕ್ಕೂ ಈ ಚಿತ್ರ ಭರ್ಜರಿ ನಿರೀಕ್ಷೆ ಸೃಷ್ಟಿ ಮಾಡಿತ್ತು. ಮೊದಲ ಮೂರುದಿನಗಳಲ್ಲಿ ಈ ಸಿನಿಮಾ ಭಾರತದಲ್ಲಿ 49 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾಗೆ ಹೋಲಿಕೆ ಮಾಡಿದರೆ ‘ಬಾರ್ಬಿ’ ಚಿತ್ರ ಸಾಧಾರಣ ಗಳಿಕೆ ಕಂಡಿದೆ ಎಂದೇ ಹೇಳಬಹುದು.

ಇಡೀ ವಿಶ್ವವನ್ನೇ ನಾಶ ಮಾಡುವ ಶಕ್ತಿ ಅಣುಬಾಂಬ್​ಗೆ ಇದೆ. ಇದನ್ನು ಮೊದಲ ಬಾರಿಗೆ ಜಪಾನ್ ಮೇಲೆ ಪ್ರಯೋಗ ಮಾಡಲಾಯಿತು. ಇದನ್ನು ಕಂಡು ಹಿಡಿದಿದ್ದು ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್ ಜೀವನದ ಕುರಿತ ಕಥೆ ಇದಾಗಿದೆ. ಕಿಲಿಯನ್ ಮರ್ಫಿ ಅವರು ಆಪನ್​ಹೈಮರ್ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಸಿನಿಮಾ ಜುಲೈ 21ರಂದು ರಿಲೀಸ್ ಆಗಿದೆ. ‘ಆಪನ್​ಹೈಮರ್‘ ಶುಕ್ರವಾರ 14.5 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಚಿತ್ರಕ್ಕೆ ಶನಿವಾರ ಹಾಗೂ ಭಾನುವಾರ ತಲಾ 17.25 ಕೋಟಿ ರೂಪಾಯಿ ಆಸುಪಾಸಿನಲ್ಲಿ ಗಳಿಕೆ ಆಗಿದೆ. ಇದರಿಂದ ಚಿತ್ರದ ಒಟ್ಟೂ ಗಳಿಕೆ 49 ಕೋಟಿ ರೂಪಾಯಿ ಆಗಿದೆ.

ಇತ್ತೀಚೆಗೆ ರಿಲೀಸ್ ಆದ ‘ಮಿಷನ್ ಇಂಪಾಸಿಬಲ್​ 7’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಐದು ದಿನಕ್ಕೆ 63 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಆ್ಯಕ್ಷನ್ ಸಿನಿಮಾ ಎಂಬ ಕಾರಣಕ್ಕೆ ಜನರು ಇದನ್ನು ಮುಗಿಬಿದ್ದು ವೀಕ್ಷಿಸಿದ್ದರು. ಆ್ಯಕ್ಷನ್ ಸಿನಿಮಾ ಅಲ್ಲದ ಹೊರತಾಗಿಯೂ ‘ಆಪನ್​ಹೈಮರ್’ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: Oppenheimer: ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ; ‘ಆಪನ್​ಹೈಮರ್​’ ಚಿತ್ರಕ್ಕೆ ಎದುರಾಯ್ತು ವಿರೋಧ

ಹಾಲಿವುಡ್​ನ ‘ಬಾರ್ಬಿ’ ಕೂಡ ‘ಆಪನ್​ಹೈಮರ್ ಜೊತೆ ರಿಲೀಸ್ ಆಗಿತ್ತು. ಈ ಚಿತ್ರ ಭಾರತದಲ್ಲಿ 19 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸಾಧಾರಣ ಮೊತ್ತದ ಗಳಿಕೆಯೊಂದಿಗೆ ಸಿನಿಮಾ ಮುನ್ನುಗ್ಗುತ್ತಿದೆ. ಸಾಲು ಸಾಲು ಹಾಲಿವುಡ್​ ಸಿನಿಮಾಗಳು ಭಾರತದಲ್ಲಿ ರಿಲೀಸ್ ಆಗುತ್ತಿವೆ. ಹಿಂದಿ ಚಿತ್ರಗಳಿಗಿಂತಲೂ ಅಧಿಕ ಕಲೆಕ್ಷನ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Mon, 24 July 23

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!