AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಚಿತ್ರದ ‘ತಗ್ಗೋದೆ ಇಲ್ಲ’ ಡೈಲಾಗ್​ನ ಕಾಪಿ ಮಾಡಿದ ಹಾಲಿವುಡ್​ ಗಾಯಕ

ಎಡ್ ಶೀರನ್ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಭಾಗಿ ಆಗಿದ್ದರು. ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಶೋ ಪ್ರಸಾರ ಕಾಣುತ್ತಿದೆ. ಇದರಲ್ಲಿ ಕಪಿಲ್ ಶರ್ಮಾ ಅವರು ಭಾರತದ ಬಗ್ಗೆ, ಭಾರತೀಯ ಸಂಸ್ಕೃತಿ ಬಗ್ಗೆ, ಭಾರತದ ಸಿನಿಮಾಗಳ ಬಗ್ಗೆ ಎಡ್ ಶೀರನ್ ಬಳಿ ಮಾತನಾಡಿದ್ದಾರೆ. ಆಗ ಅವರು ‘ತಗ್ಗದೆಲೆ’ ಡೈಲಾಗ್ ಹೇಳಿಕೊಟ್ಟಿದ್ದಾರೆ.

‘ಪುಷ್ಪ’ ಚಿತ್ರದ ‘ತಗ್ಗೋದೆ ಇಲ್ಲ’ ಡೈಲಾಗ್​ನ ಕಾಪಿ ಮಾಡಿದ ಹಾಲಿವುಡ್​ ಗಾಯಕ
ಎಡ್ ಶೀರನ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: May 23, 2024 | 8:58 AM

Share

ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ’ ಸಿನಿಮಾ ಮಾಡಿದ ದಾಖಲೆ ತುಂಬಾನೇ ದೊಡ್ಡದು. ಈ ಚಿತ್ರ ಒಳ್ಳೆಯ ರೀತಿಯಲ್ಲಿ ಬಿಸ್ನೆಸ್ ಮಾಡಿತ್ತು. ಈ ಚಿತ್ರದ ‘ತಗ್ಗೆದೆಲೆ’ (ಕನ್ನಡದಲ್ಲಿ ತಗ್ಗೋದೆ ಇಲ್ಲ, ಹಿಂದಿಯಲ್ಲಿ ಜುಕೇಗಾ ನಹಿ ಸಾಲಾ) ಡೈಲಾಗ್ ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಇದರ ಹವಾ ಇನ್ನೂ ಕಡಿಮೆ ಆಗಿಲ್ಲ. ಹಾಲಿವುಡ್ ಸಿಂಗರ್ ಎಡ್ ಶೀರನ್ ಕೂಡ ಈ ಡೈಲಾಗ್​ನ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಎಡ್ ಶೀರನ್ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಭಾಗಿ ಆಗಿದ್ದರು. ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಶೋ ಪ್ರಸಾರ ಕಾಣುತ್ತಿದೆ. ಇದರಲ್ಲಿ ಕಪಿಲ್ ಶರ್ಮಾ ಅವರು ಭಾರತದ ಬಗ್ಗೆ, ಭಾರತೀಯ ಸಂಸ್ಕೃತಿ ಬಗ್ಗೆ, ಭಾರತದ ಸಿನಿಮಾಗಳ ಬಗ್ಗೆ ಎಡ್ ಶೀರನ್ ಬಳಿ ಮಾತನಾಡಿದ್ದಾರೆ. ಆಗ ಅವರು ‘ತಗ್ಗದೆಲೆ’ (ತಗ್ಗೋದೆ ಇಲ್ಲ) ಡೈಲಾಗ್ ಹೇಳಿಕೊಟ್ಟಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ರಿಲೀಸ್​ ದಿನಾಂಕ ಬದಲಾಗತ್ತಾ? ಅನುಮಾನಕ್ಕೆ ಕಾರಣವಾದ ಎರಡು ಅಂಶಗಳು

‘ಪುಷ್ಪ’ ಸಿನಿಮಾದಲ್ಲಿ ಪುಷ್ಪರಾಜ್ (ಅಲ್ಲು ಅರ್ಜುನ್) ಆಗಾಗ ಗಡ್ಡದ ಬಳಿ ಕೈ ಇಟ್ಟುಕೊಂಡು ‘ತಗ್ಗೋದೆ ಇಲ್ಲ’ ಎನ್ನುತ್ತಿರುತ್ತಾನೆ. ಈ ಡೈಲಾಗ್ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಈ ಡೈಲಾಗ್​ನ ಕಪಿಲ್ ಶರ್ಮಾ ಅವರು ಎಡ್ ಶೀರನ್​ಗೆ ಹೇಳಿಕೊಟ್ಟಿದ್ದಾರೆ. ಇದನ್ನು ಪರ್ಫೆಕ್ಟ್ ಆಗಿ ಕಾಪಿ ಮಾಡಿದ್ದಾರೆ ಎಡ್ ಶೀರನ್. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಮೊದಲ ಪಾರ್ಟ್ ಹಿಟ್ ಆದ ಕಾರಣ ಎರಡನೇ ಪಾರ್ಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸುಕುಮಾರ್ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ‘ಮೈತ್ರಿ ಮೂವೀ ಮೇಕರ್ಸ್’ ಇದನ್ನು ನಿರ್ಮಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?